ವಿಜಯಪುರ ಮೀಸಲು ಕ್ಷೇತ್ರದಿಂದ ಕೆಆರ್‌ಎಸ್ ಅಭ್ಯರ್ಥಿ ಗಣಪತಿ ರಾಥೋಡ್ ಸ್ಪರ್ಧೆ

Date:

ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಿಂದ ಕರ್ನಾಟಕ ರಾಷ್ಟಸಮಿತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಪಕ್ಷದ ಕಾರ್ಯಕರ್ತರು, ಮುಖಂಡರು ಗೆಲುವಿಗೆ ಶ್ರಮಿಸಿ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅಭ್ಯರ್ಥಿ ಗಣಪತಿ ರಾಠೋಡ ಮನವಿ ಮಾಡಿದರು.

ವಿಜಯಪುರ ಪಕ್ಷದ ಕಚೇರಿಯಲ್ಲಿ ಕೆಆರ್‌ಎಸ್‌ ಪಕ್ಷದ ಬಿ ಫಾರ್ಮ್ ಪಡೆದ ನಂತರ ಮಾತನಾಡಿದ ಅವರು, “ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನತೆ ರೋಸಿಹೋಗಿದ್ದು, ಹಣ ಸಂಪಾದನೆ ಮಾಡುವುದನ್ನೇ ರಾಜಕೀಯವನ್ನಾಗಿ ಮಾಡಿಕೊಂಡಿರುವುದರಿಂದ ಜನರ ಕಷ್ಟಗಳು ರಾಜಕಾರಣಿಗಳಿಗೆ ತಿಳಿಯುತ್ತಿಲ್ಲ. ಈ ಪಕ್ಷಗಳದ್ದು ಕೇವಲ ಇನ್ವೆಸ್ಟ್‌ಮೆಂಟ್ ರಾಜಕೀಯವಾಗಿದ್ದು, ಪಾರದರ್ಶಕ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಜನರಿಗೆ ಪಾರದರ್ಶಕ ಆಡಳಿತದ ಅವಶ್ಯಕತೆ ಇದ್ದು, ನಮ್ಮ ಪಕ್ಷದ ತತ್ವ ಸಿದ್ಧಾಂತವೂ ಇದೇ ಆಗಿದೆ” ಎಂದು ಹೇಳಿದರು.

“ಚುನಾವಣೆಗಳಲ್ಲಿ ಹಣ, ಹೆಂಡದ ಆಸೆ ಆಮಿಷವೊಡ್ಡದೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನಮ್ಮ ಪಕ್ಷ ಮಾಡಲಿದೆ. ಜನರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಈಡೇರಿಸಲು ನಮ್ಮ ಪಕ್ಷವು ಪಣ ತೊಟ್ಟಿದ್ದು, ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವು ಸ್ಪರ್ಧೆ ನಡೆಸುತ್ತಿದ್ದು, ವಿಜಯಪುರ ಜಿಲ್ಲೆ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತಿದ್ದೇನೆ. ಪಕ್ಷದ ಕಾರ್ಯಕರ್ತರು ಮುಖಂಡರು ಹೆಚ್ಚು ಶ್ರಮವಹಿಸುವ ಮೂಲಕ ನನ್ನ ಗೆಲುವಿಗೆ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ನೀತಿ ಸಂಹಿತೆ ಉಲ್ಲಂಘನೆ ಆರೋಪ; ಜಯಪ್ರಕಾಶ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಇದೇ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಶಿವಾನಂದ ಯಡಹಳ್ಳಿ ಅವರು ಮಾತನಾಡಿದರು. ಅವರ ಜೊತೆಯಲ್ಲಿ ಜಿಲ್ಲಾಧ್ಯಕ್ಷರಾದ ಅಶೋಕ ಜಾಧವ, ರಾಕೇಶ ಇಂಗಳಗಿ, ವಿಕ್ರಮ ವಾಗಮೋರೆ, ಹಮೀದ್ ಇನಾಮದಾರ, ಪ್ರವೀಣ ಕನಸೆ, ಕಾಂತುಗೌಡ ಬೆಂಡವಾಡ, ನಬಿರಸುಲ ಜಮಾದಾರ, ಸುರೇಶ ನಿಂಬೋಣಿ, ದೀಪ ಮರನೂರ, ರಾವುತಪ್ಪ ಮದಬಾವಿ, ದುರ್ಗಪ್ಪ ಬೂದಿಹಾಳ, ಶ್ರೀಶೈಲ ಮಠ, ಲಕ್ಷಣ್ ಚಡಚಣ ಗೋರಕನಾಥ ಚೌವಾಣ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...