ಮಂಡ್ಯ | ಕಳಪೆ ಕಾಮಗಾರಿ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಆರ್‌ಎಸ್ ಆಗ್ರಹ

Date:

ಕಳಪೆ ಕಾಮಗಾರಿ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಆರ್‌ಎಸ್ ಪಕ್ಷದಿಂದ ಆಗ್ರಹ ಮಾಡುತ್ತಿದ್ದೇವೆ. ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದೆ. ಆ ಕಾರಣಕ್ಕಾಗಿ ಮಂಡ್ಯ ನಗರದ ಪ್ರಮುಖ ರಸ್ತೆಗಳು ಡಾಂಬರೀಕರಣಗೊಂಡಿವೆ. ಈ ಕಾಮಗಾರಿ ಕಳಪೆಯಾಗಿದೆ ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ ಕುಮಾರ ಎಚ್ ಆರೋಪಿಸಿದ್ದಾರೆ.

IMG 20241216 194205 1

ವಾಹನ ಸವಾರರಿಗೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ಕೆಆರ್‌ಎಸ್ ಪಕ್ಷದ ಹೆಚ್ ಮಲ್ಲೇಗೌಡ ಜತೆಗೂಡಿ ಸೋಮವಾರ ಮಂಡ್ಯ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಮಾತನಾಡಿ, “ಡಾಂಬರೀಕರಣ ಕಾಮಗಾರಿ ಕಳಪೆಯಾಗಿದೆ. ಈ ಕಾಮಗಾರಿಯಲ್ಲಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

“ಮಂಡ್ಯ ನಗರದ ಪ್ರಮುಖ ರಸ್ತೆಗಳಲ್ಲಿ ಎರಡೂ ಬದಿಯಲ್ಲಿ ರಸ್ತೆ ಡಾಂಬರೀಕರಣ ಆಗಿದೆ. ಆದರೆ ಮೆರಿಡಿಯನ್, ಡಿವೈಡರ್‌ಗಳು ಹಾದು ಹೋಗುವ ಹಾಗೂ ಈ ಎರಡೂ ಬದಿಯ ರಸ್ತೆಗಳು ಸೇರುವ ಜಾಗದಲ್ಲಿ ಯಾವ ಕಾರಣಕ್ಕೆ ಡಾಂಬರೀಕರಣ ಮಾಡಿಲ್ಲ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಶ್ರೀರಂಗಪಟ್ಟಣ | ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸರಿತಾ ಶಿವರಾಮು ಅವಿರೋಧ ಆಯ್ಕೆ

ಕೆಆರ್‌ಎಸ್ ಪಕ್ಷದ ಮಂಡ್ಯ ಪದಾಧಿಕಾರಿ ಮಲ್ಲೇಗೌಡ ಮಾತನಾಡಿ, “ಈ ರಸ್ತೆ ಕಾಮಗಾರಿಯನ್ನು ಸರಿಯಾಗಿ ನಿರ್ಮಾಣ ಮಾಡಿಲ್ಲ. ಈ ಕಾರಣದಿಂದ ಆಗಿರುವ ಅವ್ಯವಸ್ಥೆಗಳಿಂದ ಸಾರ್ವನಿಕರಿಗೆ ತೊಂದರೆಯಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಚಾಲನೆ ಮಾಡುವಂಥ ಸಂದರ್ಭದಲ್ಲಿ ರಸ್ತೆ ದಾಟುವಾಗ ಆಯತಪ್ಪಿ ಬೀಳುವ ಸಂಭವಗಳು ಜಾಸ್ತಿಯಿವೆ. ಆದಷ್ಟು ಬೇಗ ರಸ್ತೆ ಕಾಮಗಾರಿಯಲ್ಲಿ ಆಗಿರುವ ಅವ್ಯವಸ್ಥೆಗಳನ್ನು ಶೀಘ್ರ ಸರಿ ಪಡಿಸಬೇಕು” ಎಂದು ಒತ್ತಾಯಿಸಿದರು.

“ಕಳಪೆ ಕಾಮಗಾರಿಗೆ ಕಾರಣರಾದ ಪಿಡಬ್ಲ್ಯೂಡಿ ಇಲಾಖೆಯ ಕಾಂಟ್ರ್ಯಾಕ್ಟರ್ ಹಾಗೂ ಎಂಜಿನಿಯರ್‌ಗಳ ವಿರುದ್ಧ ಜಿಲ್ಲಾಡಳಿತ ಶಿಸ್ತುಕ್ರಮ ಜರುಗಿಸಬೇಕು” ಎಂದು ಕೆಆರ್‌ಎಸ್ ಪಕ್ಷದ ಪರವಾಗಿ ಆಗ್ರಹಿಸಿದರು.

ಇದನ್ನು ನೋಡಿದ್ದೀರಾ? ಬಾಡೂಟ ಅಪರಾಧ ಅಲ್ಲ ಸ್ವಾಮಿ, ಅದು ನಮ್ಮ ಪರಂಪರೆ

ಕೆಆರ್‌ಎಸ್ ಪಕ್ಷದ ಮಂಡ್ಯ ಜಿಲ್ಲಾ‌ ಪದಾಧಿಕಾರಿಗಳು ಫೇಸ್ಬುಕ್ ಲೈವ್ ಮಾಡಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಗಮನ ಸೆಳೆಯುವ ಪ್ರಯತ್ನ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...