ಮಂಡ್ಯ | ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ಮೂಲ ಸೌಕರ್ಯ ನೀಡುವಂತೆ ಆಗ್ರಹಿಸಿ ಕೆಆರ್‌ಎಸ್‌ ಪಾರ್ಟಿಯಿಂದ ಪ್ರತಿಭಟನೆ

Date:

ಶಾಲಾ, ಕಾಲೇಜು ಹಾಸ್ಟೆಲುಗಳಿಗೆ ನೀರನ್ನು ಒದಗಿಸುವ ಹೊಣೆ ಸ್ಥಳೀಯ ಪಂಚಾಯಿತಿ, ಸರ್ಕಾರದ್ದು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಮಕ್ಕಳು ತೊಂದರೆ ಪಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಸರಿಪಡಿಸಬೇಕು ಎಂದು ಕೆಆರ್‌ಎಸ್‌ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್‌ಗೌಡ ಆಗ್ರಹಿಸಿದರು.

ಅವರು ಮದ್ದೂರು ತಾಲೂಕಿನ ಕೆ ಎಂ ದೊಡ್ಡಿಯಲ್ಲಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಹಾಸ್ಟೆಲ್ ಬಾಲಕಿಯರಿಗೆ ಆಗುತ್ತಿರುವ ನೀರಿನ, ಊಟದ ಸಮಸ್ಯೆ ತಿಳಿದು ಇಲ್ಲಿಗೆ ಬಂದಿದ್ದೇವೆ. ಇಲ್ಲಿ ನಮ್ಮ ಗೆಳೆಯರ ಮಕ್ಕಳು ಓದುತ್ತಿದ್ದಾರೆ. ಇಲ್ಲಿ ಸರಿಯಾದ ಊಟದ, ನೀರಿನ ವ್ಯವಸ್ಥೆ ಇರುವುದಿಲ್ಲ. ಮೊದಲು ಸ್ಥಳೀಯ ಪಂಚಾಯಿತಿ ಹಾಗೂ ಹಿಂದುಳಿದ ವರ್ಗ ಇಲಾಖೆಯ ಅಧಿಕಾರಿಗಳು ಈ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001715678

ವಾರ್ಡನ್ ಚಂದ್ರಕಲಾ ಮಾತನಾಡಿ, ಇಲ್ಲಿ ನೀರಿನ ಸಮಸ್ಯೆ ಇರುವುದು ನಿಜ. ಹಾಸ್ಟೆಲ್ ಬಾಡಿಗೆ ಕಟ್ಟಡದಲ್ಲಿ ಇದೆ‌. ಕಳೆದ ಒಂದು ತಿಂಗಳಿನಿಂದ ಕೊಳವೆ ಬಾವಿ ಕೆಟ್ಟ ಕಾರಣ ನೀರಿಗೆ ತೊಡಕಾಗಿದೆ. 5 ಸಾವಿರ ನೀರಿನ ಟ್ಯಾಂಕಿನ ವ್ಯವಸ್ಥೆ ಇದೆ. ಪಂಚಾಯಿತಿಗೆ 20 ದಿನಗಳ ಹಿಂದೆ ನೀರಿನ ತೊಂದರೆಯ ಬಗ್ಗೆ ಪತ್ರ ಕೊಟ್ಟಿದ್ದೇವೆ. ಅವರು ಸರಿಪಡಿಸುವ ಭರವಸೆ ನೀಡಿದ್ದಾರೆ. ಕಟ್ಟಡದ ಮಾಲೀಕರು ಹೊಸ ಕೊಳವೆಬಾವಿ ಹಾಕಿಸಲು 15 ದಿನಗಳ ಕಾಲಾವಕಾಶ ಕೋರಿದ್ದಾರೆ. ಶೀಘ್ರ ನೀರಿನ ಸಮಸ್ಯೆಯನ್ನು ಸರಿಪಡಿಸಲಾಗುವುದು ಎಂದರು.

ಪ್ರತಿಭಟನೆಯ ವಿಚಾರ ತಿಳಿದು ಸ್ಥಳೀಯ ಪಂಚಾಯಿತಿಯ ಪಿಡಿಒ ಸುಧಾ ಹಾಗೂ ಅದೇ ವಾರ್ಡಿನ ಪಂಚಾಯತಿ ಸದಸ್ಯರು ಆಗಮಿಸಿ, ನಮಗೆ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಇರಲಿಲ್ಲ. ಈಗ ತಿಳಿದು ಬಂದಿರುತ್ತದೆ. ಇನ್ನೆರಡು ದಿನಗಳಲ್ಲಿ ನೀರಿನ ವ್ಯವಸ್ಥೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಮುಂಚಿತವಾಗಿಯೇ ಸಮಸ್ಯೆ ಹೇಳಿದರೆ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಈ ಪ್ರತಿಭಟನೆಯಲ್ಲಿ ಕೆಆರ್‌ಎಸ್‌ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲೇಶ್, ಪ್ರಮೋದ್ ಮದ್ದೂರು ತಾಲ್ಲೂಕು ಅಧ್ಯಕ್ಷರು, ಮಹದೇವು ಕೂಳಗೆರೆ ಮಳವಳ್ಳಿ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ವಿಷಕಂಠಯ್ಯ, ರವೀಂದ್ರ ಕೊತ್ತತ್ತಿ, ವೆಂಕಟೇಶ್ ಕನಕಪುರ, ನಾಗರಾಜು ಸಾಸಲಾಪುರ, ಪುಟ್ಟಮಾಯಿಗ, ಮಾದೇಗೌಡ ಮಳವಳ್ಳಿ ಹಾಗೂ ಇನ್ನಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...