ಬೆಂಗಳೂರು-ಮೈಸೂರು ತಡೆರಹಿತ ಬಸ್‌ಗಳ ದರ ಏರಿಕೆಗೆ ಸ್ಪಷ್ಟನೆ ನೀಡಿದ ಕೆಎಸ್‌ಆರ್‌ಸಿಟಿ

Date:

ದಸರಾ ಹಬ್ಬದ ಹಿನ್ನೆಲೆ, ಬೆಂಗಳೂರು-ಮೈಸೂರು ನಡುವೆ ಕಾರ್ಯಾಚರಣೆ ನಡೆಸುವ ತಡೆರಹಿತ ಬಸ್‌ಗಳಿಗೆ ನಿಯಮಾವಳಿಗಳನ್ವಯ ಶೇ.20 ರಷ್ಟು ಪ್ರಯಾಣ ದರ ಹೆಚ್ಚಿಸಲಾಗುತ್ತದೆ. ಕಳೆದ 4 ದಶಕಗಳಿಂದಲೂ ಪ್ರತಿ ವರ್ಷ ದರ ಹೆಚ್ಚಳ ಮಾಡಲಾಗಿದೆ. ನಿಗದಿ ಮಾಡಿದ ಅವಧಿ ಮುಗಿದ ಕೂಡಲೇ ಮತ್ತೆ ಮೊದಲಿನ ಬಸ್‌ ಟಿಕೆಟ್ ದರ ಇರಲಿದೆ” ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುವ ನಿಗಮ, “ಕಳೆದ 4 ದಶಕಗಳಿಂದಲೂ ಪ್ರತಿ ವರ್ಷ ದಸರಾ ನಿಮಿತ್ತ 10 ದಿನಗಳ ಅಥವಾ ಸೀಮಿತ ಅವಧಿಗೆ ಅನ್ವಯವಾಗುವಂತೆ, ಮೈಸೂರು – ಬೆಂಗಳೂರು ನಡುವೆ ಕಾರ್ಯಾಚರಣೆಯಾಗುವ ದಸರಾ ವಿಶೇಷ ತಡೆರಹಿತ ಬಸ್‌ಗಳಿಗೆ ನಿಯಮಾವಳಿಗಳನ್ವಯ ಶೇ.20 ರಷ್ಟು ಪ್ರಯಾಣ ದರ ಹೆಚ್ಚಿಸಲಾಗುವುದು. ಪ್ರಯಾಣ ದರವು ಸೀಮಿತ ಅವಧಿ ಮುಗಿದ ಕೂಡಲೇ ಸ್ಥಗಿತಗೊಳ್ಳುತ್ತದೆ.  ಅದರಂತೆ, ಪ್ರಸ್ತುತ ದರವು ಕೂಡ ಅ.30ಕ್ಕೆ ಕೊನೆಗೊಳ್ಳಲಿದೆ. ಮೊದಲಿನ ದರದಲ್ಲಿಯೇ ಬಸ್‌ಗಳು ಕಾರ್ಯಾಚರಣೆಯಾಗುತ್ತವೆ” ಎಂದು ಹೇಳಿದೆ.‌

“ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಕರ ಒಂದು ಕಡೆ ಮಾತ್ರ ಜನ ಸಂದಣಿ ಇರುತ್ತದೆ. ಇದರಿಂದ, ದರ ಹೆಚ್ಚಳ ಮಾಡಲು ಕಾರಣವಾಗಿದೆ. ಆದರೆ, ಅದೇ ಬಸ್‌ಗಳು ಮೈಸೂರಿನಿಂದ ವಾಪಸ್‌ ಬರುವಾಗ ಪ್ರಯಾಣಿಕರಿಲ್ಲದೆ‌ ಕಾರ್ಯಾಚರಣೆ ಮಾಡಬೇಕಾಗಿರುತ್ತದೆ. ಆದ್ದರಿಂದ‌ ಕಾರ್ಯಾಚರಣೆ ವೆಚ್ಚವನ್ನು ಸರಿದೂಗಿಸಲು ಈ‌ ಕ್ರಮವನ್ನು ಮೊದಲಿನಿಂದಲೂ ಅನುಸರಿಸಲಾಗುತ್ತಿದೆ. (ಇತ್ತೀಚೆಗೆ ಅಂದರೆ ಕಳೆದ‌‌ ನಾಲ್ಕು ಐದು ವರುಷಗಳಲ್ಲಿಯೂ ಸಹ ಸೀಮಿತ ಅವಧಿಗೆ ಅನ್ವಯವಾಗುವಂತೆ ದಸರಾ ಸಮಯದಲ್ಲಿ ದರ ಹೆಚ್ಚಳ ಮಾಡಲಾಗಿದೆ.)” ಎಂದು ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೈಸೂರು – ಬೆಂಗಳೂರು ನಡುವೆ ಈ‌ ಹಿಂದೆ ದರ ಹೆಚ್ಚಳವಾಗಿರುವುದಕ್ಕೆ ಕಾರಣ, ಮೈಸೂರು ಎಕ್ಸ್‌ಪ್ರೆಸ್‌ ವೇ ಎರಡು ಟೋಲ್‌ಗಳ ದರದಲ್ಲಿ ಏಕಮಾರ್ಗದಲ್ಲಿಯೇ ₹1090  ಹೆಚ್ಚಳವಾಗಿದೆ. ಇದರಿಂದ, ಪ್ರಯಾಣ ದರದಲ್ಲಿ ಟೋಲ್ ಹಣವನ್ನು ಸೇರ್ಪಡೆಗೊಳಿಸಿ, ಹೆಚ್ಚಳ ಮಾಡಲಾಗಿತ್ತು‌. ಈ ದರವು ಎಕ್ಸ್‌ಪ್ರೆಸ್ ವೇ ಅಲ್ಲಿ‌ ಕಾರ್ಯಾಚರಣೆಯಾಗುವ ತಡೆರಹಿತ ಬಸ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಎಕ್ಸ್‌ಪ್ರೆಸ್‌ ವೇ ಹೊರತುಪಡಿಸಿ ನೇರ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ವೇಗದೂತ ಸಾರಿಗೆಗಳಲ್ಲಿ ಈಗಲೂ ಹಳೆಯ ಪ್ರಯಾಣ ದರವೇ ಚಾಲ್ತಿಯಲ್ಲಿದೆ” ಎಂದು ಸ್ಪಷ್ಟಣೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ನಗರದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ; ಜನರಲ್ಲಿ ಮನೆ ಮಾಡಿದ ಆತಂಕ

“ಇದು ಸಾಮಾನ್ಯ ಪ್ರಕ್ರಿಯೆ ಆಗಿದ್ದು, ರಾಜ್ಯ/ ಅಂತರರಾಜ್ಯದ ಯಾವುದೇ ಭಾಗದಲ್ಲಿ ಟೋಲ್ ದರ ಹೆಚ್ಚಳವಾದಲ್ಲಿ,‌ ಆ ಮಾರ್ಗದ ಬಸ್‌ಗಳಲ್ಲಿ ದರ‌ ಹೆಚ್ಚಳವಾಗುವುದು ನಿರಂತರವಾಗಿ‌ ಸಾರಿಗೆ ಸಂಸ್ಥೆಗಳಲ್ಲಿ‌ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರಕ್ರಿಯೆಯಾಗಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...