ಕೆಎಸ್‌ಆರ್‌ಟಿಸಿ ನರ್ಮ್‌ ಬಸ್‌ ಪುನಾರಂಭಿಸಲು ಆಗ್ರಹ; ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

Date:

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ ಮಂಜೂರಾಗಿದ್ದವು
  • ರಾಜ್ಯದಲ್ಲಿ ಆರಂಭವಾಗಿರುವ ಶಕ್ತಿ ಯೋಜನೆ ದಕ್ಷಿಣ ಕನ್ನಡ ಮಹಿಳೆಯರಿಗೂ ಸಿಗಲಿ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ನರ್ಮ್ ಬಸ್ಸ್ ಸಂಚಾರ ಸೇವೆ ಮುಂದುವರಿಸ ಬೇಕು ಮತ್ತು ಬೇಡಿಕೆಗೆ ಅನುಗುಣವಾಗಿ ಹಲವು ಪ್ರದೇಶಗಳಿ ಶೀಘ್ರವೇ ಬಸ್ ಸಂಚಾರ ಸೇವೆ ಒದಗಿಸ ಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ನರ್ಮ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 35 ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್ಸುಗಳು ಸಂಚಾರ ಸೇವೆ ಒದಗಿಸಲು ಮಂಜೂರಾಗಿದ್ದವು. ಆದರೆ, ಮಂಜೂರಾದ 35 ಬಸ್ಸುಗಳಲ್ಲಿ 18 ಬಸ್ಸು ನಗರದ ಸ್ಟೇಟ್ ಬ್ಯಾಂಕ್ ಬಸ್‌ ನಿಲ್ದಾಣ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಬಾಕಿ ಉಳಿದ ಬಸ್‌ಗಳು ನಗರದ ಹೊರಭಾಗದಿಂದ ಸೇವೆ ಸಲ್ಲಿಸಲು ಆರ್‌ಟಿಎ ಪ್ರಾಧಿಕಾರ ಸಭೆ ಒಪ್ಪಿಗೆ ನೀಡಿದ್ದವು ಎಂದು ಡಿವೈಎಫ್‌ಐ ಮುಖಂಡರು ವಿವರಿಸಿದ್ದಾರೆ.

ಆ ಸಂದರ್ಭ ಖಾಸಗಿ ಬಸ್ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿ ತಡೆ ಹೇರಿದೆಯಾದರೂ ಮುಂದೆ ನರ್ಮ್ ಸಾರಿಗೆ ಸೇವೆಗೆ ಸಂಬಂಧಿಸಿದ ದೂರನ್ನು ಜಿಲ್ಲಾಧಿಕಾರಿ ಹಂತದಲ್ಲಿ ಇತ್ಯರ್ಥ ಪಡಿಸಲು ಹೈಕೋರ್ಟ್ ನಿರ್ದೇಶನ ನೀಡಿತ್ತು. ಒಟ್ಟಾರೆ ಖಾಸಗಿ ಬಸ್‌ ಮಾಲೀಕರ ವಿರೋಧದ ನಡುವೆಯೂ ಆಗಿನ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಅವರ ಜನಪರ ಆಡಳಿತ ನಡೆಯಿಂದ ನರ್ಮ್ ನಗರ ಸಾರಿಗೆ ಬಸ್ ತನ್ನ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಳ್ಯ, ಪುತ್ತೂರು, ಬೆಳ್ತಂಗಡಿಗಳಂತಹ ಗ್ರಾಮೀಣ ಭಾಗಗಳಿಗೂ ಸರ್ಕಾರಿ ಗ್ರಾಮಾಂತರ ಸಾರಿಗೆ ಬಸ್ಸು ನಿರಂತರ ಸೇವೆ ನೀಡಿದೆ. ಆದರೆ, ಇತ್ತೀಚೆಗೆ ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಸ್ಥಗಿತಗೊಂಡಿರುವ ಬಸ್ ಸಂಚಾರ ಸೇವೆ ಮತ್ತೆ ಹಿಂದಿನ ರೀತಿಯಲ್ಲಿ ನೀಡಲೇ ಇಲ್ಲ. ಸರ್ಕಾರಿ ನರ್ಮ್ ನಗರ ಸಾರಿಗೆ ಬಸ್‌ ಮತ್ತು ಗ್ರಾಮೀಣ ಭಾಗದ ಸರ್ಕಾರಿ ಬಸ್ ಸಂಚಾರ ಸೇವೆಯಲ್ಲಿ ಅರ್ಧಕ್ಕರ್ಧ ವ್ಯತ್ಯಯ ಉಂಟಾಗಿದೆ ಎಂದು ಮನವರಿಕೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಶಕ್ತಿ ಯೋಜನೆಗೆ ಆಟೋ ಚಾಲಕರ ಸಂಘ ವಿರೋಧ

ಜೂನ್ 11 ರಿಂದ ಆರಂಭವಾಗಿರುವ ರಾಜ್ಯದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆಯು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರಿಗೂ ಸಿಗುವಂತಾಗಬೇಕು. ಸದ್ಯ ಜಿಲ್ಲೆಯಲ್ಲಿ ಬೀಡಿ ಉದ್ದಿಮೆ ನೆಲಕ್ಕಚ್ಚಿದ ನಂತರ ಈಗ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಪುಟ್ಟ ಅಂಗಡಿ ಮುಂಗ್ಗಟ್ಟುಗಳಲ್ಲಿ, ಬಟ್ಟೆಯಂಗಡಿಗಳಲ್ಲಿ, ಆಸ್ಪತ್ರೆ, ಕಾಲೇಜುಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದು, ಅಂತ ಮಹಿಳೆಯರಿಗೆ ಸರ್ಕಾರದ ಈ ಯೋಜನೆಯಿಂದ ಅನುಕೂಲಕರವಾಗಲಿದೆ ಎಂದು ಮನವಿ ಮಾಡಿದ್ದಾರೆ.

ನಿಯೋಗದಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ಮಂಗಳೂರು ನಗರ ಕಾರ್ಯದರ್ಶಿ ನವೀನ್ ಕೊಂಚಾಡಿ, ಉಳ್ಳಾಲ ವಲಯ ಅಧ್ಯಕ್ಷ ರಫೀಕ್ ಹರೇಕಳ, ಜಿಲ್ಲಾ ಮುಖಂಡ ರಝಾಕ್ ಮೊಂಟೆಪದವು, ಉಸ್ಮಾನ್ ಕಣ್ಣೂರು, ಮುಸ್ತಫಾ ಕಲ್ಲಕಟ್ಟೆ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...