ಕೂಡ್ಲಿಗಿ | ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಪ್ರತ್ಯೇಕ ಕೌಂಟರ್ ತೆರೆಯಲು ವಂದೇ ಮಾತರಂ ವೇದಿಕೆ ಆಗ್ರಹ

Date:

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗಾಗಿ ಪತ್ಯೇಕ ಕೌಂಟರ್ ತೆರೆಯುವಂತೆ ಹೋರಾಟಗಾರರು ಹಾಗೂ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

ಶಾಸಕರ ಕಾಳಜಿ ಫಲವಾಗಿ ಇತ್ತೀಚೆಗೆ ಸ್ವಲ್ಪ ಮಾತ್ರ ಸುಧಾರಿಸಿದೆ. ಆದರೆ ‌ಇನ್ನೂ ಕೆಲವು ಗಂಭೀರ ಸಮಸ್ಯೆಗಳು ಹಾಗೆಯೇ ಜೀವಂತವಾಗಿವೆ. ಪ್ರತಿ ಗುರುವಾರದಂದು ತಜ್ಞವೈದ್ಯರಿಂದ ಗರ್ಭಿಣಿಯರ ತಪಾಸಣೆ ಜರುಗಿಸಲಾಗುತ್ತದೆ. ಹಾಗಾಗಿ ಅವರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕಿದೆ. ಪ್ರತಿ ಗುರುವಾರ ನಡೆಯುವ ಗರ್ಭಿಣಿಯರ ಆರೋಗ್ಯ ತಪಾಸಣೆಗಾಗಿ ಆಗಮಿಸುವ ಗರ್ಭಿಣಿಯರ ನೋಂದಣಿಗೆ ಪತ್ಯೇಕ ಕೌಂಟರ್ ತೆರೆಯಬೇಕು ಎಂದು ವಂದೇ ಮಾತರಂ ಜಾಗೃತಿ ವೇದಿಕೆ ಜಿಲ್ಲಾ ಆರೋಗ್ಯ ಇಲಾಖಾಧಿಕಾರಿಯವರನ್ನು ಒತ್ತಾಯಿಸಿದೆ.

“ಕೂಡ್ಲಿಗಿ ಪಟ್ಟಣ ಸೇರಿದಂತೆ ಸುತ್ತ ಮುತ್ತಲ ಗ್ರಾಮಗಳಿಂದ ಹಾಗೂ ತಾಲೂಕಿನ ವಿವಿಧೆಡೆಗಳಿಂದ 500-600ಕ್ಕೂ ಹೆಚ್ಚು ಗರ್ಭಿಣಿಯರು ತಪಾಸಣೆಗೆಂದು ಆಸ್ಪತ್ರೆಗೆ ಧಾವಿಸುತ್ತಿದ್ದು, ಇದೇ ಸಂದರ್ಭದಲ್ಲಿ ಇತರೆ ಸಾಮಾನ್ಯ ತಪಾಸಣೆ ಹಾಗೂ ಚಿಕಿತ್ಸೆ ಅರಸಿ ಬರುವ ಸಾರ್ವಜನಿಕರು, ಇತರೆ ರೋಗಿಗಳು ಸೇರಿ ನೋಂದಣಿ ಕೇಂದ್ರದದ ಮುಂಭಾಗದಲ್ಲಿ ದೊಡ್ಧದಾದ ಸಾಲುಗಳು ನಿರ್ಮಾಣವಾಗುತ್ತವೆ. ಇಂತಹ ವೇಳೆ ಕಿರಿದಾದ ದಾರಿ ಮಧ್ಯದಲ್ಲಿಯೇ ಗರ್ಭಿಣಿಯರು ಸರತಿ ಸಾಲಿನಲ್ಲಿ ತಾಸುಗಟ್ಟಲೆ ನಿಲ್ಲುವ ದುಃಸ್ಥಿತಿ ಉಂಟಾಗಿದೆ” ಎಂದು ಪ್ರಜ್ಞಾವಂತ ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನದಟ್ಟಣೆ ಹೆಚ್ಚಾದಾಗ ಗರ್ಭಿಣಿಯರು ಒಂದೆರೆಡು ತಾಸುಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಅದರಲ್ಲೂ ಸರ್ವರ್ ತೊಂದರೆ ಇತ್ಯಾದಿ ವ್ಯತ್ಯಯಗಳ ಸಂದರ್ಭದಲ್ಲಿ ಅನಿವಾರ್ಯವಾಗಿ ಗರ್ಭಿಣಿಯರು ನಿತ್ರಾಣರಾಗಿ ಕಾಯುವಂತಾಗಿದೆ. ಸಾಮಾನ್ಯರೇ ಹೆಚ್ಚು ಸಮಯ ನಿಲ್ಲಲಾಗದಂತಹ ಸಂದರ್ಭದಲ್ಲಿ ಗರ್ಭಿಣಿಯರು ಹೆಚ್ಚು ಹೊತ್ತು ಸರತಿಯಲ್ಲಿ ನಿಲ್ಲಲು ಹೈರಾಣಾಗುವಂತಾಗಿದೆ. ನೋಂದಣಿ ಮಾಡಿರುವ ದಾರಿಯಲ್ಲಿ ಹಾದು ಹೋಗುವ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಅಕಸ್ಮಿಕವಾಗಿ ಜೋರಾಗಿ ತಾಗಿ ಪರಸ್ಪರ ವಾಗ್ವಾದ, ಜಗಳಗಳೂ ಉಂಟಾಗಿವೆ. ಗರ್ಭಿಣಿಯರು ಹಾಗೂ ಸಾರ್ವಜನಿಕರೊಂದಿಗೆ ವಾಗ್ವಾದ ನಡೆಯುವುದು ಸಾರ್ವಜನಿಕ ಆಸ್ಪತ್ರೆಯಲ್ಲಿ ಸರ್ವೇ ಸಾಮಾನ್ಯವಾಗಿದೆ” ಎಂದು ಒಂದೇ ಮಾತರಂ ಜಾಗೃತಿ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸಲು ಆಟೋ ಚಾಲಕರ ಆಗ್ರಹ

“ಗರ್ಭಿಣಿಯರಿಗಾಗಿ ಪ್ರತಿ ಗುರುವಾರದಂದು ಪ್ರತ್ಯೇಕ ಹೆಚ್ಚುವರಿ ತಾತ್ಕಾಲಿಕ ಕೌಂಟರ್ ತೆರೆಯಬೇಕು. ಗರ್ಭಿಣಿಯರು ವಿಶ್ರಮಿಸಲು ಹಾಗೂ ತಂಗಲು ಸಾಕಷ್ಟು ಆಸನಗಳು ಮತ್ತು ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಸಬೇಕಿದೆ. ಕೆಲ ತಪಾಸಣೆಗಾಗಿ ಮೇಲ್ಮಹಡಿಗೆ ತೆರಳುವ ಸನ್ನಿವೇಶವಿದೆ. ಇದನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಶೀಘ್ರವೇ ಜರುಗಿಸಬೇಕು” ಎಂದು ಒಂದೇ ಮಾತರಂ ಜಾಗೃತಿ ವೇದಿಕೆ ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...