ಕಲಬುರಗಿ | ಕುಂಬಾರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ : ಶಿವಶರಣಪ್ಪ ಕುಂಬಾರ

Date:

ಕರ್ನಾಟಕ ರಾಜ್ಯ ಕುಂಬಾರ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅಧ್ಯಕ್ಷರನ್ನು ನೇಮಿಸಿ ಅನುದಾನ ಒದಗಿಸಬೇಕು ಎಂದು ಜಿಲ್ಲಾ ಹಿಂದುಳಿದ ಕುಂಬಾರರ ಸಂಘದ ಅಧ್ಯಕ್ಷ ಶಿವಶರಣಪ್ಪ ಎಲ್. ಕುಂಬಾರ್ ಅವರು ಒತ್ತಾಯಿಸಿದರು.

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ 2023ರ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ರಚನೆಯಾಗಿದ್ದು, ಆದರೆ ಇಲ್ಲಿಯವರೆಗೂ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿಲ್ಲ, ಅನುದಾನ ಸಹ ಬಿಡುಗಡೆ ಮಾಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.’

ರಾಜ್ಯದಲ್ಲಿ ಕುಂಬಾರರು ಹಿಂದುಳಿದ ಸಮುದಾಯಕ್ಕೆ ಸೇರಿದವರು ಎಂಬ ಹಣೆಪಟ್ಟೆ ಮಾತ್ರ ಇದೆ. ಆದರೆ ಸರ್ಕಾರ ಹಿಂದುಳಿದ ವರ್ಗದವರಿಗೆ ನೀಡುವ ಸೌಲಭ್ಯಗಳಿಂದ ನಮ್ಮ ಸಮುದಾಯ ವಂಚಿತವಾಗುತ್ತಿದೆ. ಕಾರಣ ನಾವು ಕರ್ನಾಟಕದಲ್ಲಿ ಹಿಂದುಳಿದ ವರ್ಗದವರಲ್ಲಿ ಅತೀ ಹಿಂದುಳಿದ ಸಮುದಾಯದವರಾಗಿದ್ದೇವೆ. ಹೀಗಾಗಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಬಹಳ ಹಿಂದುಳಿದಿದ್ದೇವೆ’ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನಮ್ಮನ್ನು ಒಳಗೊಂಡಂತೆ ಈಗಾಗಲೇ ಕರ್ನಾಟಕ ರಾಜ್ಯಾದ್ಯಂತ ಅನೇಕ ಬಾರಿ ಕುಂಬಾರರು ಪ್ರತಿಭಟನೆಯನ್ನು ಮಾಡಿದ್ದೇವೆ. ನಿವೇದನೆ ಪತ್ರವನ್ನು ಮುಖ್ಯಮಂತ್ರಿಗಳಿಗೂ ಸೇರಿ ಸಂಬಂಧಿಸಿದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಕೊಟ್ಟಿದ್ದೇವೆ. ಸರ್ಕಾರ ಮಾತ್ರ ಇಲ್ಲಿಯವರೆಗೂ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಅಹಿಂದ ನಾಯಕರೆಂದೇ ಕರೆಸಿಕೊಳ್ಳುವ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಕುಂಬಾರ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಕೂಡಲೇ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿ, ಸೂಕ್ತ ಅನುದಾನ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕುಂಬಾರ ಸಮುದಾಯದ ಪ್ರಮುಖರಾದ ಪ್ರಭು ಕುಂಬಾರ್ ಬೆಣ್ಣೂರ್, ಶರಣು ಕುಂಬಾರ್ ಅಫಜಲಪುರ, ಶರಣಪ್ಪ ಕುಂಬಾರ್ ಗಡಿಕೇಶ್ವಾರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...