ಕುಮಟಾ | ಸಿನಿಮೀಯ ರೀತಿ ದರೋಡೆ ಯತ್ನ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Date:

ಕುಮಟಾ ಮೂಲದ ಕುಟುಂಬವೊಂದು ಶಿರಡಿ–ಅಯೋಧ್ಯೆ ತೀರ್ಥಯಾತ್ರೆಯೆ ಮುಗಿಸಿ ವಾಪಸ್ಸು ಬರುವಾಗ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಸಿನಿಮೀಯ ಶೈಲಿಯಲ್ಲಿ ದರೋಡೆ ಯತ್ನ ನಡೆದಿದೆ. ಚಾಲಕನ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ದೊಡ್ಡ ಅನಾಹುತ ಆಗುವುದು ತಪ್ಪಿದೆ.

ಮಾಹಿತಿಯಂತೆ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕತಗಾಲ–ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಸ್ಥಳೀಯ ಗಜಾನನ ಟ್ರಾವೆಲ್ಸ್‌ನ ಟಿಟಿ ವಾಹನದಲ್ಲಿ ಶಿರಡಿ ಹಾಗೂ ಅಯೋಧ್ಯೆ ಪ್ರವಾಸ ಮುಗಿಸಿ ಶುಕ್ರವಾರ ರಾತ್ರಿ ಕುಮಟಾಕ್ಕೆ ಹಿಂತಿರುಗುತ್ತಿತ್ತು. ಈ ವೇಳೆ, ಸೊಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಟಿಟಿ ವಾಹನವನ್ನು ಹಿಂಬಾಲಿಸಿ ದರೋಡೆ ಯತ್ನಕ್ಕೆ ಮುಂದಾಗಿದ್ದಾರೆ.

ಚಲಿಸುತ್ತಿದ್ದ ವಾಹನದ ಹಿಂಭಾಗದ ಬಾಗಿಲಿಗೆ ಜಿಗಿದು ಒಳನುಗ್ಗಿದ ಕಳ್ಳರು ಹಿಂಬದಿಯಲ್ಲಿದ್ದ ಬ್ಯಾಗ್‌ಗಳನ್ನು ಹೊರಗೆಸೆದರು. ಏಕಾಏಕಿ ನಡೆದ ಈ ಘಟನೆಯಿಂದ ವಾಹನದಲ್ಲಿದ್ದ ಪ್ರಯಾಣಿಕರು ಭೀತಿಗೊಳಗಾದರು. ಆದರೆ ಚಾಲಕ ಗಣಪತಿ ನಾಯ್ಕ್ ಅವರ ಸಮಯಪ್ರಜ್ಞೆ ಪರಿಸ್ಥಿತಿ ಕೈಮೀರಿ ಹೋಗುವುದನ್ನು ತಪ್ಪಿಸಿತು. ಅವರು ತಕ್ಷಣವೇ ವಾಹನ ನಿಲ್ಲಿಸಿ, ಕಳ್ಳರ ಎದುರಿಸಲು ಸಜ್ಜಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 16 3

ವಾಹನದಲ್ಲಿ ಅಡುಗೆಗೆ ಇಟ್ಟಿದ್ದ ಆಯುಧಗಳನ್ನು ಕೈಗೆತ್ತಿಕೊಂಡ ಅವರು ಕಳ್ಳರನ್ನು ಎದುರಿಸಲು ಮುಂದಾದರು. ಚಾಲಕನ ಧೈರ್ಯವನ್ನು ಕಂಡು ಬೆಚ್ಚಿಬಿದ್ದ ದರೋಡೆಕೋರರು ಅಲ್ಲಿಂದ ಪರಾರಿಯಾದರು. ಅದೃಷ್ಟವಶಾತ್, ಕಳ್ಳರು ದೋಚಿದ ಬ್ಯಾಗ್‌ಗಳಲ್ಲಿ ಬಟ್ಟೆಗಳಷ್ಟೇ ಇದ್ದು, ಯಾವುದೇ ನಗದು ಅಥವಾ ಚಿನ್ನಾಭರಣ ಇರಲಿಲ್ಲ. ಪ್ರಾಣಾಪಾಯದಿಂದ ಪಾರಾದ ಕುಟುಂಬವು ದೂರು ನೀಡದೆ ನೇರವಾಗಿ ಕುಮಟಾಕ್ಕೆ ಪ್ರಯಾಣ ಮುಂದುವರಿಸಿತು.

ಪ್ರವಾಸಿಗರಿಗೆ ಎಚ್ಚರಿಕೆ: ಈ ಹೆದ್ದಾರಿಯಲ್ಲಿ ಇಂತಹ ದರೋಡೆ ಯತ್ನಗಳು ಹೊಸದೇನಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಇದರ ಹಿಂದೆ ಮೈಸೂರು ಮತ್ತು ಮಂಗಳೂರು ಭಾಗಗಳಿಂದ ಬಂದ ಪ್ರವಾಸಿಗರೂ ಇದೇ ರೀತಿಯ ದರೋಡೆಗೆ ಬಲಿಯಾಗಿದ್ದಾರೆ. ರಾತ್ರಿ ವೇಳೆ ಸಂಚರಿಸುವ ಪ್ರವಾಸಿ ವಾಹನಗಳೇ ಈ ಗ್ಯಾಂಗ್‌ಗಳ ಗುರಿಯಾಗಿದ್ದು, “ಅಪಘಾತವಾದಂತೆ ನಟಿಸಿ ವಾಹನ ನಿಲ್ಲಿಸಿ ದರೋಡೆ ಮಾಡುವುದು” ಇವರ ಸಂಚು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಕುಮಟಾ ಕಂದಾಯ ನಿರೀಕ್ಷಕ ಬೆಳಗಾವಿಯಲ್ಲಿ ಪತ್ತೆ

ಸುರಕ್ಷತಾ ಸಲಹೆಗಳು: ಸಾಧ್ಯವಾದಷ್ಟು ರಾತ್ರಿ ವೇಳೆ ದೂರ ಪ್ರಯಾಣವನ್ನು ತಪ್ಪಿಸಿ. ನಿರ್ಜನ ಪ್ರದೇಶಗಳು ಅಥವಾ ಅಪರಿಚಿತ ಸ್ಥಳಗಳಲ್ಲಿ ವಾಹನ ನಿಲ್ಲಿಸಬೇಡಿ. ಅಪಘಾತದ ನೆಪದಲ್ಲಿ ವಾಹನ ತಡೆಯಲು ಪ್ರಯತ್ನಿಸಿದರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ. ಪ್ರಯಾಣದ ಸಮಯದಲ್ಲಿ ವಾಹನದ ಬಾಗಿಲುಗಳನ್ನು ಲಾಕ್ ಮಾಡಿ ಇರಿಸಿ. ಯಾರಾದರೂ ಅನುಮಾನಾಸ್ಪದವಾಗಿ ಹಿಂಬಾಲಿಸುತ್ತಿದ್ದರೆ, ವೇಗ ಹೆಚ್ಚಿಸಿ ಜನನಿಬಿಡ ಪ್ರದೇಶದತ್ತ ಚಲಿಸಿ.

ಮಹಾರಾಷ್ಟ್ರದ ಸೊಲ್ಲಾಪುರ ಭಾಗದಲ್ಲಿ ರಾತ್ರಿ ವೇಳೆಯಲ್ಲಿ ಪ್ರಯಾಣಿಸುವವರು ವಿಶೇಷ ಎಚ್ಚರಿಕೆ ವಹಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ. ಚಾಲಕನ ಧೈರ್ಯದಿಂದ ತಪ್ಪಿದ ಈ ಘಟನೆ ಪ್ರವಾಸಿಗರಿಗೆ ವಾಹನ ಚಾಲಕರಿಗೆ ಎಚ್ಚರಿಕೆಯ ಗಂಟೆ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...