ಕುಮಟಾ | ಗ್ರಾಮ ಪಂಚಾಯತ್‌ಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೇಂದ್ರವಾಗಲಿ: ಸಚಿವ ಮಂಕಾಳ ವೈದ್ಯ

Date:

ಕುಮಟಾ: ಗ್ರಾಮ ಪಂಚಾಯತ್‌ಗಳು ಕೇವಲ ಸರ್ಕಾರಿ ಕಚೇರಿಗಳಾಗದೆ, ಸ್ಥಳೀಯ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಒದಗಿಸುವ ಶಕ್ತಿ ಕೇಂದ್ರಗಳಾಗಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಾಂಕಾಳ ಎಸ್. ವೈದ್ಯ ಅವರು ತಿಳಿಸಿದರು.

ಶುಕ್ರವಾರ ಹಿರೇಗುತ್ತಿ ಗ್ರಾಮ ಪಂಚಾಯತ್‌ನ ನೂತನ ಸುಸಜ್ಜಿತ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿ ಅವರು. ಗ್ರಾಮೀಣ ಭಾಗದ ಜನರ ಸಮಸ್ಯೆಗಳು ಆಯಾ ಗ್ರಾಮಗಳಲ್ಲಿಯೇ ಇತ್ಯರ್ಥವಾಗಬೇಕು

ಎನ್ನುವ ಉದಾತ್ತ ಉದ್ದೇಶದಿಂದ ಸರ್ಕಾರವು ಇಂದು ಪಂಚಾಯತ್ ಮಟ್ಟದಲ್ಲಿಯೇ ಹಲವಾರು ನಾಗರಿಕ ಸೇವೆಗಳನ್ನು ಒದಗಿಸುತ್ತಿದೆ. ತಮ್ಮ ಅಹವಾಲುಗಳನ್ನು ಹೊತ್ತು ಪಂಚಾಯತ್‌ಗೆ ಬರುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ತಾಳ್ಮೆಯಿಂದ ವರ್ತಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಮೂಲಕ ಜನಸಾಮಾನ್ಯರ ವಿಶ್ವಾಸ ಗಳಿಸಬೇಕು ಎಂದು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಕಿವಿಮಾತು ಹೇಳಿದರು.

1000505767

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕ ದಿನಕರ ಶೆಟ್ಟಿ ಅವರು ಮಾತನಾಡಿ, ಹಿರೇಗುತ್ತಿ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಸೇರಿದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸತೀಶ್ ಸೈಲ್‌ಗೆ ಮತ್ತೆ ವೈದ್ಯಕೀಯ ಜಾಮೀನು ಮಂಜೂರು: ಲಿವರ್ ಕಸಿ ಶಸ್ತ್ರಚಿಕಿತ್ಸೆಗೆ ಹೈಕೋರ್ಟ್ ಅನುಮತಿ

ಈ ಭಾಗದ ಕಾಲೇಜು ಕಟ್ಟಡಕ್ಕೂ ಹೆಚ್ಚಿನ ಅನುದಾನ ಒದಗಿಸಲಾಗಿದ್ದು, ಪಂಚಾಯತ್ ಕಟ್ಟಡದ ಮುಂದಿನ ಅಗತ್ಯಗಳಿಗೆ ತಕ್ಕಂತೆ ಹೆಚ್ಚುವರಿ ಅನುದಾನ ನೀಡುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಾಂತಾ ನಾರಾಯಣ ನಾಯ್ಕ, ಉಪಾಧ್ಯಕ್ಷೆ ವೆಂಕಮ್ಮ ಹರಿಕಂತ್ರ, ತಹಸೀಲ್ದಾರ್ ಕೃಷ್ಣ ಕಾಮಕರ್ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜೇಂದ್ರ ಭಟ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೇಖಾ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...