ಕುಮಟಾ | ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೆ ಪೆಟ್ರೋಲ್ ಬಂಕ್‌ನಲ್ಲಿ ಇಂಧನ ಸಿಗೋದಿಲ್ಲ

Date:

ಕುಮಟಾ: ತಾಲೂಕಿನ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಹಾಗೂ ಸಂಚಾರಿ ನಿಯಮಗಳ ಉಲ್ಲಂಘನೆಯನ್ನು ನಿಯಂತ್ರಿಸಲು ಉಪವಿಭಾಗಾಧಿಕಾರಿ ಪಿ. ಶ್ರವಣ್ ಕುಮಾರ್ ಅವರು ಹೊಸ ಪ್ರತಿಬಂಧಕಾಜ್ಞೆಯನ್ನು ಹೊರಡಿಸಿದ್ದು, ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೆ ತರಲು ಮುಂದಾಗಿದ್ದೆವೆ ಎಂದು ಹೇಳಿದರು. ಸಂಚಾರಿ ನಿಯಮಗಳನ್ನು ಪಾಲಿಸದ ಪರಿಣಾಮವಾಗಿ ಸಂಭವಿಸುತ್ತಿರುವ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲ ಸರ್ಕಾರಿ ಘಟಕಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ.

ಯಾವುದೇ ರೀತಿಯ ಸಂಚಾರಿ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕ ವಾಹನದ ನಂಬರ್ ಸೇರಿದಂತೆ GPS ಸಮೇತ ಫೋಟೋವನ್ನು ತೆಗೆದು ಪೊಲೀಸ್ ಇಲಾಖೆಯ ವಾಟ್ಸಪ್ ಸಂಖ್ಯೆಗಳಿಗೆ ಕಳುಹಿಸಬಹುದು. ಇದರ ಮೂಲಕ ಘಟನೆಯ ಸ್ಥಳ ಮತ್ತು ಸಮಯವನ್ನು ನಿಖರವಾಗಿ ಗುರುತಿಸಲು ಇದು ಸಹಕಾರಿಯಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಕುರಿತು 9480805234, 9480805272, 8277988244 ಹಾಗೂ 8277988236 ಸಂಖ್ಯೆಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಲು ವಿನಂತಿಸಲಾಗಿದೆ.

ಕುಮಟಾ ಪಟ್ಟಣ ವ್ಯಾಪ್ತಿಯ ಹಲವು ಪ್ರಮುಖ ವೃತ್ತಗಳು, ಹೆದ್ದಾರಿಯ ಕೂಡು ರಸ್ತೆಗಳು ಹಾಗೂ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಿಸುವುದು ಸಾಮಾನ್ಯವಾಗಿ ಕಂಡುಬರುತ್ತಿದ್ದು, ಹೆಲ್ಮೆಟ್ ಹಾಗೂ ಸೀಟ್‌ಬೆಲ್ಟ್ ಉಪಯೋಗದ ಕುರಿತು ಸಾರ್ವಜನಿಕರಲ್ಲಿ ಇನ್ನೂ ಜಾಗೃತಿ ಮೂಡಿಸಬೇಕಿರುವುದು ಸ್ಪಷ್ಟವಾಗಿದೆ. ಅನಧಿಕೃತ ವಾಹನ ನಿಲುಗಡೆ, ರಸ್ತೆ ಬದಿ ವ್ಯಾಪಾರಿಗಳಿಂದ ಹೆದ್ದಾರಿಗಳ ಅತಿಕ್ರಮಣ, ಪೆಟ್ರೋಲ್ ಬಂಕ್‌ಗಳಲ್ಲಿ ನಿಯಮ ಪಾಲನೆ ಕೊರತೆ ಇವುಗಳು ಅಪಘಾತಗಳಿಗೆ ಕಾರಣವಾಗುತ್ತಿರುವುದಾಗಿ ಸಭೆಯಲ್ಲೂ ಚರ್ಚಿಸಲಾಯಿತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಐಆರ್‌ಬಿ ಪ್ರತಿನಿಧಿಗಳು, ಕುಮಟಾ ಪಟ್ಟಣ ಹಾಗೂ ತಾಲೂಕಿನ ಪೆಟ್ರೋಲ್ ಬಂಕ್ ಮಾಲೀಕರು ಸೇರಿದಂತೆ ಎಲ್ಲಾ ಇಲಾಖೆಗಳ ಸಭೆಯನ್ನು ನವೆಂಬರ್ 10ರಂದು ನಡೆಸಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕುಮಟಾ | ಸರ್ಕಾರದ ನಿರ್ಲಕ್ಷ್ಯ ಮಧ್ಯೆ ರಸ್ತೆಗೆ ಶಾಸಕರ ನಿಧಿಯಿಂದ ಡಾಂಬರೀಕರಣ

ಈ ಸಭೆಯಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಕ್ರಮಗಳನ್ನು ಜಾರಿಗೊಳಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಉಪವಿಭಾಗಾಧಿಕಾರಿಗಳು ಹೊರಡಿಸಿದ ಆದೇಶದ ಪ್ರಕಾರ, ಕುಮಟಾ ತಾಲೂಕಿನಲ್ಲಿ ಸವಾರರು ಹಾಗೂ ಹಿಂಬದಿ ಸವಾರರು ಐಎಸ್‌ಐ ಪ್ರಮಾಣಿತ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದ್ದು, ಕಾರು ಸವಾರರು ಸೀಟ್‌ಬೆಲ್ಟ್ ಧರಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ “NO HELMET/SEATBELT, NO FUEL” ಎಂಬ ನಿಯಮ ಕಡ್ಡಾಯವಾಗಿ ಜಾರಿಗೊಳಿಸಬೇಕು. ಹೆದ್ದಾರಿಯಲ್ಲಿ ಇರುವ ಎಲ್ಲಾ ಗೂಡಂಗಡಿಗಳು, ತಳ್ಳುಗಾಡಿಗಳು ಮತ್ತು ಬೀದಿ ವ್ಯಾಪಾರಿಗಳನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಲಾಗಿದೆ. ದ್ವಿಚಕ್ರ ವಾಹನಗಳನ್ನು ಬಾಡಿಗೆಗೆ ನೀಡುವವರು ಕಡ್ಡಾಯವಾಗಿ ಎರಡು ಹೆಲ್ಮೆಟ್‌ಗಳನ್ನು ಒದಗಿಸಲು ಬದ್ಧರಾಗಿರಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರು ವಾಹನ ಚಲಿಸಿದರೆ, ವಾಹನ ಮಾಲೀಕರು ಹಾಗೂ ಅವರು ವಿದ್ಯಾಬ್ಯಾಸ ಮಾಡುವ ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಜವಾಬ್ದಾರರಾಗಿರುತ್ತಾರೆ.

ಈ ಕುರಿತಾಗಿ ಆಕ್ಷೇಪಣೆ ಏನಾದರೂ ಇದ್ದರೆ 7 ದಿನಗಳೊಳಗೆ ಉಪವಿಭಾಗೀಯ ದಂಡಾಧಿಕಾರಿ, ಕುಮಟಾ ಇವರಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ನಿಗದಿತ ಅವಧಿಯಲ್ಲಿ ಯಾವುದೇ ಆಕ್ಷೇಪಣೆಗಳು ಸ್ವೀಕರಿಸಲ್ಪಡದಿದ್ದರೆ ಆದೇಶ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಉಪವಿಭಾಗಾಧಿಕಾರಿ ಪಿ. ಶ್ರವಣ್ ಕುಮಾರ್ ಅವರು ಸಾರ್ವಜನಿಕರ ಜೀವ ರಕ್ಷಣೆ ಮತ್ತು ರಸ್ತೆ ಸುರಕ್ಷತೆಯ ಹಿತದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...