ಕುಮಟಾ: ರಾಜ್ಯ ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಆಗದೆ ಇರುವುದರಿಂದ ಕುಮಟಾ ಮತ್ತು ಹೊನ್ನಾವರ ಪಟ್ಟಣಗಳಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಶಾಸಕರ ನಿಧಿಯಿಂದ ಕೈಗೊಳ್ಳಲಾಗುತ್ತಿದೆ ಎಂದು ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ತಿಳಿಸಿದ್ದಾರೆ.
ಪಟ್ಟಣದ ಗಿಬ್ ಸರ್ಕಲ್ನಿಂದ ಗುಡಿಗಾರಗಲ್ಲಿ ವರೆಗೆ ನಡೆಯುತ್ತಿರುವ ಡಾಂಬರೀಕರಣ ಕಾರ್ಯವನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷವಾದರೂ ಕುಮಟಾ ಪುರಸಭೆ ಹಾಗೂ ಹೊನ್ನಾವರ ಪಟ್ಟಣ ಪಂಚಾಯಿತಿಗೆ ಒಂದು ರೂಪಾಯಿಯೂ ಬಿಡಿಗಾಸು ಬಂದಿಲ್ಲ. ಇದು ವಿಷಾದನೀಯ,”
ಅವರು ಮುಂದುವರಿದು, ಎರಡು ವರ್ಷಗಳಿಂದ ರಸ್ತೆಗಳಿಗೆ ರೀ-ಕಾರ್ಪೆಟ್ಟಿಂಗ್ ಮಾಡದ ಕಾರಣ ಹಲವು ಮಾರ್ಗಗಳು ಹದಗೆಟ್ಟಿವೆ. ಜನರು ಅಭಿವೃದ್ಧಿಗೆ ಮತ ಹಾಕಿದ್ದಾರೆ, ಆದರೆ ಸರ್ಕಾರದಿಂದ ಅಗತ್ಯ ಅನುದಾನ ಬಂದಿಲ್ಲ ಎಂದು ಆರೋಪಿಸಿದರು. ಸರ್ಕಾರದ ನಿರ್ಲಕ್ಷ್ಯದ ನಡುವೆಯೂ ಸಾರ್ವಜನಿಕರ ತೊಂದರೆ ಮನಗಂಡು ಶಾಸಕರ ನಿಧಿಯಿಂದಲೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಈಗ ಉಳಿದ ಭಾಗಕ್ಕೆ ಗುಣಮಟ್ಟದ ಡಾಂಬರೀಕರಣ ನಡೆಯುತ್ತಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನಿಷೇಧವಿದ್ದರೂ ನಿಲ್ಲದ ಮರಳು ದಂಧೆ; ಎನ್ಜಿಟಿ ಆದೇಶಕ್ಕೂ ಕಿಮ್ಮತ್ತಿಲ್ಲ
ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವ ಮೂಲಕ ಸಹಕರಿಸಬೇಕೆಂದೂ ವಿನಂತಿಸಿದರು.





