ಉಡುಪಿಯ | ಮಹಿಳೆಯ ಕರಿಮಣಿ ಸರ ಸುಲಿಗೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

Date:

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಕಳೆದ ವಾರ ಮಹಿಳೆಯ ಕರಿಮಣಿ ಸರ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕೊರಚರಕೇರಿಯ ಸಂಜಯ್‌ ಎಲ್‌ (33) ಹಾಗೂ ದಾವಣಗೆರೆಯ ವಿನೋಬ ನಗರ ಮೂಲದ ವಸಂತ ಕುಮಾರ್‌ (30) ಎಂದು ಗುರುತಿಸಲಾಗಿದೆ. ಇವರಿಂದ ಸುಮಾರು ₹3 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ, ₹8.20 ಲಕ್ಷ ಮೌಲ್ಯದ ಕಾರು ಹಾಗೂ ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಕ್ಟೋಬರ್‌ 3ರಂದು ಸಂಜೆ ವೇಳೆ ಮೀನಾಕ್ಷಿ ಎಂಬವರು ತಮ್ಮ ಮಗಳೊಂದಿಗೆ ಕುಂದಾಪುರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ಶಾಸ್ತ್ರಿ ಪಾರ್ಕ್‌ ಕಡೆಗೆ ಸರ್ವಿಸ್‌ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬಿಸ್ಸೆನ್ಬೆಲ್‌ ಕಚೇರಿ ಹತ್ತಿರ ಬೈಕ್‌ನಲ್ಲಿ ಬಂದ ಇಬ್ಬರು ಅಜ್ಞಾತರು ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಪರಾರಿಯಾದರು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಕೈಗೊಂಡ ಕುಂದಾಪುರ ಠಾಣೆಯ ಪ್ರಭಾರ ಪೊಲೀಸ್‌ ನಿರೀಕ್ಷಕ ಜಯರಾಮ ಡಿ. ಗೌಡ ನೇತೃತ್ವದ ತಂಡ ತೀವ್ರ ತನಿಖೆ ನಡೆಸಿ, ಸಂಜಯ್‌ ಅನ್ನು ತೀರ್ಥಹಳ್ಳಿ ತಾಲೂಕಿನ ಮುಡಬಾ ಕ್ರಾಸ್‌ನಲ್ಲಿ ಹಾಗೂ ವಸಂತ ಕುಮಾರ್‌ ಅನ್ನು ದಾವಣಗೆರೆ ಜಿಲ್ಲೆಯ ಮಲೆ ಬೆನ್ನೂರು ಪ್ರದೇಶದಲ್ಲಿ ವಶಕ್ಕೆ ಪಡೆದು ಬಂಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಾಚರಣೆಯಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಜಯರಾಮ ಡಿ. ಗೌಡ ಅವರ ನೇತೃತ್ವದಲ್ಲಿ ಎಸ್ಸೈ ನಂಜಾನಾಯ್ಕ್‌ ಎನ್‌, ಎಸ್ಸೈ ಪುಷ್ಪಾ, ಸಂಚಾರ ಠಾಣೆಯ ಎಸ್ಸೈ ನೂತನ್‌ ಹಾಗೂ ಸಿಬ್ಬಂದಿಗಳಾದ ಮೋನ ಪೂಜಾರಿ, ಮೋಹನ್‌, ಸಂತೋಷ, ಪ್ರಿನ್ಸ್‌, ಮಂಜುನಾಥ, ಕಾನ್ಟೇಬಲ್‌ ಘನಶ್ಯಾಮ, ಲೋಹಿತ್‌, ಮೌನೇಶ್‌, ಕಿಶನ್‌, ರಾಜು ಭೋವಿ, ಮಹಾಬಲ, ರಾಘವೇಂದ್ರ ಗೌತಮ್‌, ನಾಗಶ್ರೀ ಮತ್ತು ವೃತ್ತ ಕಚೇರಿಯ ಅಣ್ಣಪ್ಪ ಸೇರಿದಂತೆ ಪೊಲೀಸರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...