ಉಡುಪಿ | ಕುಂದಾಪುರದಲ್ಲಿ ವಂಚಿತ ಕಟ್ಟಡ ಕಾರ್ಮಿಕ ಪಿಂಚಣಿದಾರರ ಪ್ರತಿಭಟನೆ

Date:

ಆಧಾರ್ ಕಾರ್ಡ್ ಇಲ್ಲದ ಸಮಯದಲ್ಲಿ ವೈದ್ಯರಿಂದ ಅಂದಾಜು ವಯಸ್ಸು ದೃಡೀಕರಿಸಿ ನೋಂದಾವಣೆ ಮಾಡಿ, ಮಂಡಳಿ ಒಪ್ಪಿಗೆ ನೀಡಿದ ಗುರುತು ಚೀಟಿಗೆ ತಂತ್ರಾಂಶದಲ್ಲಿ ಆಧಾರ್ ವಯಸ್ಸು, ಮಂಡಳಿ ಗುರುತು ಚೀಟಿ ವಯಸ್ಸು, ವ್ಯತ್ಯಾಸ ಪರಿಣಾಮವಾಗಿ ತಿರಸ್ಕರಿಸಿದ ನೂರಾರು ಕಾರ್ಮಿಕರ ಪಿಂಚಣಿ ಅರ್ಜಿಗಳನ್ನು ಪುರಸ್ಕರಿಸಲು ಆಗ್ರಹಿಸಿ ಇಂದು ರಾಜ್ಯ ವ್ಯಾಪಿ ಕಟ್ಟಡ ಕಾರ್ಮಿಕರ ಪ್ರತಿಭಟನೆ ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ) ಸಿಐಟಿಯು ನೇತೃತ್ವದಲ್ಲಿ ವಯೋವೃದ್ಧ ಕಟ್ಟಡ ಕಾರ್ಮಿಕರು ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.

ಕಳೆದ 3-4 ವರ್ಷಗಳಿಂದ ಪಿಂಚಣಿ ವಂಚಿತರಾದ ಕಟ್ಟಡ ಕಾರ್ಮಿಕರು ಇಲಾಖೆಗಳಿಗೆ ಹಾಗೂ ಕಲ್ಯಾಣ ಮಂಡಳಿಗೆ ಮನವಿ ನೀಡಿದರೂ ಕೂಡ ಮಂಡಳಿ ಮನವಿಗೆ ಉತ್ತರ ನೀಡುತ್ತಿಲ್ಲ. ಮಂಡಳಿ ಅಧಿಕಾರಿಗಳನ್ನು ಸಂಘವು ಮುಖತಃ ಭೇಟಿ ಮಾಡಿ ಪ್ರಸ್ತಾಪ ಮಾಡಿ ಮನವಿ ನೀಡಿದಾಗ ಮಂಡಳಿ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಹೇಳಿದರೂ ಪ್ರಗತಿಯಾಗಿಲ್ಲ. ಆದುದರಿಂದ ವಯೋವೃದ್ಧ ಕಣ್ಣು ಕಾಣದವರು, ಕಿವಿ ಕೇಳದವರು ನಡೆಯಲು ಅಶಕ್ತರಾದವರು ಪ್ರತಿಭಟನೆ ಮಾಡುವಂತೆ ದೂಡಿರುವುದು ಅಮಾನವೀಯವಾಗಿದೆ. ಈ ಬಗ್ಗೆ ಇತ್ತೀಚೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಾನ್ಯ ರೋಹಿಣಿ ಸಿಂಧೂರಿ, ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಮಾನ್ಯ ಶಾಸಕರಿಗೂ ಮನವಿ ನೀಡಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ದ ಅಧ್ಯಕ್ಷ ಸುರೇಶ್ ಕಲ್ಲಾಗರ ಹೇಳಿದರು.

ddd

ಮಂಡಳಿಯು ಇಂತಹ ಇಳಿವಯಸ್ಸಿನ ವಂಚಿತರಿಗೆ ಅವರ ಆರೋಗ್ಯಕ್ಕೆ ವೆಚ್ಚಕ್ಕೆ ಹಣ ಇಲ್ಲದ ಸಂದರ್ಭದಲ್ಲಿ ಮಂಡಳಿ ಪಿಂಚಣಿ ಆಸರೆ ಆಗಿತ್ತು, ಆದರೆ ಮಂಡಳಿ ಆಧಾರ್ ಕಾರ್ಡ್ ವಯಸ್ಸೆ ಕಡ್ಡಾಯ ಮಾಡಿರುವುದರಿಂದ ಪಿಂಚಣಿಯಿಂದ ವಂಚಿತರನ್ನಾಗಿ ಮಾಡಲಾಗಿದೆ. ಕಟ್ಟಡ ಕಾರ್ಮಿಕರ ಮಂಡಳಿ ಕಟ್ಟಡ ಕಾರ್ಮಿಕರ ಪರವಾಗಿರಬೇಕು. ಮಂಡಳಿಯ ತಂತ್ರಾಂಶದಿಂದ ಹಲವು ವರ್ಷಗಳ ಪಿಂಚಣಿ ಕಳೆದುಕೊಂಡಿದ್ದಾರೆ. ಈಗಲಾದರೂ ತಂತ್ರಾಂಶದಲ್ಲಿ ಇಂತಹ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿಯನ್ನು ಕುಂದಾಪುರ ಕಾರ್ಮಿಕ ನಿರೀಕ್ಷಕರಾದ ವಿಜೇಂದ್ರ ಅವರ ಮೂಲಕ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನೀಡಲಾಯಿತು ಅದರ ಪ್ರತಿಗಳನ್ನು ಕಾರ್ಮಿಕ ಸಚಿವರು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಾನ್ಯ ಶಾಸಕರಿಗೆ ಮತ್ತೊಮ್ಮೆ ಇಂದು ನೀಡುತ್ತಿದ್ದೇವೆ ಎಂದು ಅವರು ಹೇಳಿದರು.

ಪ್ರತಿಭಟನೆ ನೇತೃತ್ವ ಪಿಂಚಣಿದಾರ ಸಂಘದ ಅಧ್ಯಕ್ಷ ಚಿಕ್ಕ ಮೊಗವೀರ ಗಂಗೊಳ್ಳಿ, ಕಾರ್ಯದರ್ಶಿ ಕ್ರಷ್ಣ ಪೂಜಾರಿ ಹಂಗಳೂರು, ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಂತೋಷ್ ಹೆಮ್ಮಾಡಿ, ಸಿಐಟಿಯು ಜಿಲ್ಲಾ ಮುಖಂಡರಾದ ಬಲ್ಕೀಸ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...