ಉಡುಪಿ | ಕುಂದಾಪುರ ಜಾನಪದದ ತವರು – ಡಾ ಜಾನಪದ ಎಸ್ ಬಾಲಾಜಿ

Date:

ಕುಂದಾಪುರ ಜಾನಪದದ ತವರು ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಭಾರತ ಸರ್ಕಾರದ ಐಸಿಸಿಆರ್ ಸದಸ್ಯ ಡಾ ಜಾನಪದ ಎಸ್ ಬಾಲಾಜಿ ತಿಳಿಸಿದರು.

ಹಾಲಾಡಿಯ ರಾಜೀವ್ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ ಅಂಗ ಸಂಸ್ಥೆ ಜಾನಪದ ಯುವ ಬ್ರಿಗೇಡ್ ಉಡುಪಿ ಜಿಲ್ಲಾ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಕುಂದಾಪುರದ ಗ್ರಾಮೀಣ ಭಾಗಗಳಲ್ಲಿ ಮೂಲ ಜಾನಪದ ಸಂಸ್ಕೃತಿ ಜೀವಂತವಾಗಿದೆ, ಅಳಿವಿನ ಅಂಚಿನಲ್ಲಿರುವ ಮೂಲ ಜಾನಪದ ಕಲೆಗಳನ್ನು ದಾಖಲಿಕಾರಣ ಮೂಲಕ ಜಾನಪದ ಯುವ ಬ್ರಿಗೇಡ್ ಉಡುಪಿ ಜಿಲ್ಲಾ ಘಟಕ ಜಾನಪದ ಸಂರಕ್ಷಣೆ ಕಾರ್ಯದಲ್ಲಿ ತೊಡಗಲಿದೆ ಎಂದು ತಿಳಿಸಿದರು. ಯುವಜನರು ಸ್ಥಳೀಯ ಜಾನಪದ ಕಲೆಯನ್ನು ಅನುಕರಣೆ ಮಾಡಿ ಅದನ್ನೇ ಅಭ್ಯಾಸ ಮಾಡಬೇಕೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಅಶೋಕ್ ಶೆಟ್ಟಿ ಮಾತನಾಡಿ ನಶಿಸಿಹೋಗುವ ಜಾನಪದ ಕಲೆಗಳನ್ನು ಪುನರ್ಜೀವ ಕೊಡುವ ಕಾರ್ಯ ಜಾನಪದ ಯುವ ಬ್ರಿಗೇಡ್ ಮೂಲಕ ಆಗುತ್ತಿರುವುದು ಉತ್ತಮ ಬೆಳವಣಿಗೆಯನ್ನು ತಿಳಿಸಿದರು.

ಕನ್ನಡ ಜಾನಪದ ಪರಿಸರ ರಾಜ್ಯ ಮಹಿಳಾ ಘಟಕ ಸಂಚಾಲಕಿ ಡಾ ಭಾರತಿ ಮರವಂತೆ ಪ್ರಾಸ್ತಾವಿಕವಾಗಿ ಮಾತನಾಡಿ ಕನ್ನಡ ಜಾನಪದ ಪರಿಷತ್ ಮೂಲಕ ಯುವಜನರನ್ನು ಜಾನಪದ ಜಾಗೃತಿ ಮೂಡಿಸುವ ಕಾರ್ಯ ರಾಜ್ಯಾದ್ಯಂತ ಪ್ರಾರಂಭವಾಗಿದೆ, ಸ್ಥಳೀಯ ಜನಪದ ಸಂಪ್ರದಾಯ ಕಲೆಗಳನ್ನು ತರಬೇತಿ ಹಾಗೂ ದಾಖಲೀಕರಣದ ಮೂಲಕ ಯುವಜನರು ಎಂದು ತಿಳಿಸಿದರು.

ಸಾಹಿತಿ ಮಂಜುನಾಥ್ ಕಾಮತ್ ಮಾತನಾಡಿ ಜಾನಪದ ಯುವ ಬ್ರಿಗೇಡ್ ಇಂದಿನ ದಿನಗಳಲ್ಲಿ ಅಗತ್ಯತೆ ಬಹಳಷ್ಟಿದೆ ಯುವ ಜನರ ಮೂಲಕ ಸಂಸ್ಕೃತಿ ಉಳಿಸುವ ಕನ್ನಡ ಜಾನಪದ ಪರಿಷತ್ ಪ್ರಯತ್ನ ಮೆಚ್ಚುಗೆಗೆ ಪಾತ್ರ ಎಂದರು.

ಜಾನಪದ ಯುವ ಬ್ರಿಗೇಡ್ ಜಿಲ್ಲಾ ಸಂಚಾಲಕರಾಗಿ ವಿನಯ್, ಸಹ ಸಂಚಾಲಕರಾಗಿ ಶರತ್ ಪೂಜಾರಿ, ಬೈಂದೂರ್ ಸಂಚಾಲಕರಾಗಿ ದರ್ಶನ್ ಪೂಜಾರಿ, ಸ್ವಸ್ಟಿಕ್ ಬಂಡಾರಿ, ಪ್ರಕೃತಿ ಸಾಲಿಗ್ರಾಮ, ಸೌಪಣಿಕ ಪದವಿ ಸ್ವೀಕರಿಸಿದರು. ಹಾಲಾಡಿ ಚಂಡೆ ತಂಡ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಂದ ಜನಪದ ಕಾರ್ಯಕ್ರಮ ಹಾಗೂ ಯಕ್ಷಗಾನ ಪ್ರದರ್ಶನ ನೀಡಲಾಯಿತು.

ಗ್ರಾಮ ಪಂಚಾಯತ್ ಸದಸ್ಯರಾದ ಗುರುಪ್ರಸಾದ್ ಶೆಟ್ಟಿ, ಜನಾರ್ಧನ್ ಹಾಲಾಡಿ,ಪುನೀತ್ ಪೂಜಾರಿ, ಕಾಲೇಜಿನ ಉಪನ್ಯಾಸಕರು ಪ್ರಕಾಶ್, ಚಂದ್ರಶೇಖರ, ಗಣಪತಿ ಹೆಗಡೆ, ಕುಮಾರ್ ಕಲಾವಿದ ಗುಂಡು ಪೂಜಾರಿ, ಜಾನಪದ ಯುವ ಬ್ರಿಗೇಡ್ ರಾಜ್ಯ ಸಂಚಾಲಕರು ಅಭಿ ಶೆಟ್ಟಿ, ಕರಾವಳಿ ವಿಭಾಗ ಸಂಚಾಲಕರು ಸಂದೇಶ್ ನಾಯಕ, ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರು ಸಂಪತ್ ಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...