ಉಡುಪಿ | ಕುಂದಾಪುರದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿಜಯೋತ್ಸವ

Date:

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ‌ ಕಾರ್ಮಿಕ ಕಲ್ಯಾಣ‌ ಮಂಡಳಿಯು  ಅರ್ಜಿ ಸಲ್ಲಿಸಿದ ಎಲ್ಲ ಮಕ್ಕಳಿಗೂ 2021 ಅಧಿಸೂಚನೆ ಅನ್ವಯವೇ ಬಾಕಿ ಇರುವ ಮೂರು ವರ್ಷದ ಶೈಕ್ಷಣಿಕ ಧನಸಹಾಯ ವಿತರಿಸಲು ತ್ವರಿತಗತಿಯಲ್ಲಿ ಕ್ರಮವಹಿಸಬೇಕೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಸ್ವಾಗತಿಸಿ ಇಂದು ರಾಜ್ಯಾದ್ಯಂತ ವಿಜಯೋತ್ಸವ ಆಚರಿಸಲು ಕರೆನೀಡಿದ ಅಂಗವಾಗಿ ತೀರ್ಪು ಜಾರಿಗೊಳಿಸಲು ಆಗ್ರಹಿಸಿ ಕುಂದಾಪುರ ನಗರದಲ್ಲಿರುವ ಸಂಘದ ಕಚೇರಿ ಎದುರು ಆಚರಿಸಲಾಯಿತು.

ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು 2023 ರಿಂದ ಶೇ 70 ರಿಂದ ಶೇ. 80 ರಷ್ಟು ಕಡಿತ ಮಾಡಿತ್ತು. ಕಲ್ಯಾಣ ಮಂಡಳಿಯ ಈ ನಿರ್ಧಾರವನ್ನು ಇದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ‌ಕಟ್ಟಡ ಮತ್ತು ಇತರೆ ನಿರ್ಮಾಣ‌ ಕಾರ್ಮಿಕರ ಫೆಡರೇಷನ್‌ (ಸಿಐಟಿಯು) ಸಂಘಟನೆಯು  ಹೈಕೋರ್ಟ್ ಮೊರೆ ಹೋಗಿತ್ತು.

ಈ  ರಿಟ್  ಅರ್ಜಿಯನ್ನು ಮಾನ್ಯ‌ಮಾಡಿದ್ದ ನ್ಯಾಯಮೂರ್ತಿ ಶ್ರೀ ನಾಗಪ್ರಸನ್ನ  ನೇತೃತ್ವದ ಏಕ‌ಸದಸ್ಯ ಪೀಠವು‌ ಮಾನ್ಯ ಮಾಡಿ 2023 ಏಪ್ರಿಲ್ ನಲ್ಲೇ ಮಧ್ಯಂತರ ಆದೇಶ ನೀಡಿ ಅರ್ಜಿ ಸಲ್ಲಿಸಿದ ಇಬ್ಬರು ವಿದ್ಯಾರ್ಥಿನಿಯರಿಗೆ ದಂಡ ಸಹಿತ ಶೈಕ್ಷಣಿಕ ‌ಧನ ಸಹಾಯ ಪಾವತಿಸಲು ಆದೇಶಿಸಿತ್ತು. ಇದೀಗ ಅಂತಿಮ ತೀರ್ಪು ಹೊರ ಬಂದಿದ್ದು, ಅದರ ಅನ್ವಯ 2020 – 21, 2021 – 22 ಹಾಗೂ 2022 – 23 ನೇ ಸಾಲಿನ ಶೈಕ್ಷಣಿಕ ಸಹಾಯಧನವನ್ನು 2021 ರ ಅಧಿಸೂಚನೆ ಅನ್ವಯವೇ ಬಿಡುಗಡೆ ಮಾಡುವಂತೆ  ಆದೇಶ ನೀಡಿದೆ ಮಾತ್ರವಲ್ಲ ಸದರಿ ಆದೇಶವನ್ನು  ಜಾರಿ ಮಾಡಲು ಅಗತ್ಯ ಕ್ರಮವಹಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶಕ ನೀಡಿದೆ.ಅಲ್ಲದೆ 2023 ರ ಸರ್ಕಾರದ  ಅಧಿಸೂಚನೆಯನ್ನು ರದ್ದುಗೊಳಿಸಿ ಈ ಹಿಂದಿನ  2021 ರ ಅಧಿಸೂಚನೆ ಪ್ರಕಾರವೇ ವಿದ್ಯಾರ್ಥಿ ವೇತನ ವಿತರಿಸಲು ಜನವರಿ10 ರಂದು ಅಂತಿಮ‌ ತೀರ್ಪು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡ ಕಟ್ಟಡ ಕಾರ್ಮಿಕರ ಶೈಕ್ಷಣಿಕ ಬದುಕನ್ನೇ ಕಿತ್ತು ಕೊಂಡಿದ್ದ 2023 ರ ರಾಜ್ಗ ಸರ್ಕಾರದ ಅಧಿಸೂಚನೆ ಯನ್ನು ರದ್ದುಗೊಳಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ನ್ಯಾಯ ‌ನೀಡಿರುವ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ‌ಕಾರ್ಮಿಕರ ಫೆಡರೇಷನ್‌ (ರಿ)  ಕಲ್ಯಾಣ‌ ಮಂಡಳಿಯು‌ ಕೂಡಲೇ 2021 ಅಧಿಸೂಚನೆ ಅನ್ವಯವೇ ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಬಾಕಿ ಸಹಿತ ಶೈಕ್ಷಣಿಕ ಧನ‌ಸಹಾಯವನ್ನು ಅವರ ಖಾತೆಗೆ ವರ್ಗಾಹಿಸಲು ಅಗತ್ಯ ಕ್ರಮವಹಿಸಬೇಕೆಂದು ಆಗ್ರಹಿಸಿದೆ.

ವಿಜಯೋತ್ಸವದಲ್ಲಿ ಸಂಘದ ಗೌರವಾಧ್ಯಕ್ಷ ಚಿಕ್ಕ ಮೊಗವೀರ ಗಂಗೊಳ್ಳಿ, ಕೋಶಾಧಿಕಾರಿ ಚಂದ್ರಶೇಖರ ವಿ, ಕಾರ್ಯದರ್ಶಿ ಸುಧೀರ್ ಕುಮಾರ್, ರತ್ನಾಕರ ಆಚಾರ್ , ಡಿವೈಎಫ್ಐ ಮುಖಂಡ ಗಣೇಶ್ ದಾಸ್, ಎಸ್ ಎಫ್ ಐ ಸಂಚಾಲಕಿ ರಿತಿಕಾ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...