ಉಡುಪಿ | ಕುಂದಾಪುರದಲ್ಲಿ ಅನೈತಿಕ ಪೊಲೀಸ್ ಗಿರಿ, ಓರ್ವ ಅರೆಸ್ಟ್

Date:

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕ ಬಾಲಕಿಯರಿಗೆ ಹಲ್ಲೆ ನಡೆಸಿ ಬೆದರಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ. ಎ.8ರಂದು ಅಪ್ರಾಪ್ತ ಬಾಲಕಿ ತನ್ನ ಸ್ನೇಹಿತರೊಂದಿಗೆ ಉಡುಪಿಗೆ ಹೋಗಿ ವಾಪಾಸು ಮನೆಗೆ ಬರಲು ಉಡುಪಿಯಿಂದ ಖಾಸಗಿ ಬಸ್ ನಲ್ಲಿ ಹೊರಟು ಸಂಜೆ ಕುಂದಾಪುರ ಶಾಸ್ತ್ರಿ ಪಾರ್ಕ್ ನಲ್ಲಿ ಇಳಿದಿದ್ದು, ಮುಂದಿನ ಪ್ರಯಾಣಕ್ಕಾಗಿ ಇನ್ನೊಂದು ಬಸ್ಸಿಗಾಗಿ ಬಸ್ ನಿಲ್ದಾಣದ ಕಡೆಗೆ ಹೋಗುವಾಗ ಸಂಜೆ ಸುಮಾರು 06:45 ಗಂಟೆಗೆ ಮಹೇಶ್ ಬಾಲಕಿಯ ಹೆಸರನ್ನು ಕೇಳಿ ನಂತರ ಅವಳ ಜೊತೆಯಲ್ಲಿದ್ದವರ ಹೆಸರನ್ನು ಕೇಳಿದನು. ಬಳಿಕ ಅವರನ್ನು ಉದ್ದೇಶಿಸಿ ಆತ, ನಿಮಗೆ ತಿರುಗಾಡಲು ಹಿಂದೂ ಹುಡುಗಿ ಬೇಕಾ ಎಂದು ಅವಾಚ್ಯ ಶಬ್ದದಿಂದ ಬೈದು ಒಬ್ಬ ಹುಡುಗನಿಗೆ ಕೈಯಿಂದ ಹೊಡೆದಿದನು ಎಂದು ದೂರಲಾಗಿದೆ.

ಈ ವೇಳೆ ಸ್ಥಳೀಯರು ಸೇರಿ ಹೊಡೆಯದಂತೆ ತಡೆದಾಗ ಮಹೇಶ್ ಬಾಲಕಿಯನ್ನುದ್ದೇಶಿಸಿ ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ಅಸಭ್ಯವಾಗಿ ಅಲ್ಲಿ ಸೇರಿದ್ದ ಸಾರ್ವಜನಿಕರ ಎದುರು ನಿಂದಿಸಿ ಬೈದನು. “ನೀನು ಇದೇ ರೀತಿ ಮುಸ್ಲಿಂ ಹುಡುಗರ ಜೊತೆಯಲ್ಲಿ ತಿರುಗಾಡಿದರೆ ಮುಂದಕ್ಕೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿದನು ಎಂದು ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹೇಶ್ ಸಾರ್ವಜನಿಕ ಸ್ಥಳದಲ್ಲಿ ನನ್ನ ಮಗಳ ಮಾನಕ್ಕೆ ಕುಂದುಂಟಾಗುವಂತೆ ನಿಂದಿಸಿ, ಅಶಾಂತಿ ಹರಡುವಂತೆ ಮಾಡಿ, ಬೈದು, ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದಾಗಿ ಬಾಲಕಿಯ ತಾಯಿ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕಾಲಂ 126(2) 115(2) 352 351(2) 75,353
ಬಿಎನ್ ಎಸ್ ಕಾಲಂ 75 JJ ACT ನಂತೆ ಪ್ರಕರಣ ದಾಖಲಾಗಿದೆ.

ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿ ಮಹೇಶ್ ನನ್ನು ಎ.10 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಹೇಶ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ಇಂದು ಸಂಜೆ ವೇಳೆ ಕುಂದಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗಿದೆ. ಆಹೋರಾತ್ರಿ ಧರಣಿ ಕುಳಿತಿರುವ ಶಾಸಕ ಗುರುರಾಜ್ ಗಂಟಿಹೊಳೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಧಮನಿಸುವ ಕಾರ್ಯಕ್ಕೆ ಪೊಲಿಸರು ಬಳಿಸಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಲವ್ ಜಿಹಾದ್, ಗೋಹತ್ಯೆ, ಅಕ್ರಮ ಗೋ ಸಾಗಾಟಗಳಂತಹಾ ಪ್ರಕರಣಗಳು ಹೆಚ್ಚುತ್ತಿವೆ. ಮುಸ್ಲಿಂ ಓಲೈಕೆಯಲ್ಲಿ ತೊಡಗಿರುವ ಕಾಂಗ್ರೆಸ್ ಹಿಂದೂಗಳನ್ನು ಧಮನಿಸುವ ಕೆಲಸಕ್ಕೆ ಕೈ ಹಾಕಿದರೆ ಹಿಂದೂ ಸಂಘಟನೆಗಳು ಕೈಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದ್ದಲ್ಲದೇ, ಹಿಂದು ಯುವತಿಯನ್ನು ಚುಡಾಯಿಸಿದ ಮುಸ್ಲಿಂ ಯುವಕರನ್ನು ಬಂಧಿಸಿ ಕ್ರಮ ಕೈಗೊಳ್ಳುವವರೆಗೆ ಆಹೋರಾತ್ರಿ ಧರಣಿ ಮುಂದುವರೆಸುವುದಾಗಿಯೂ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...