ಉಡುಪಿ | ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ, ಪೊಲೀಸರಿಂದ ನೋಟಿಸ್ ಜಾರಿ

Date:

ಕುಂದಾಪುರದ ಮೊಗವೀರ ಸಭಾಭವನದಲ್ಲಿ ಜೂ.20ರಿಂದ ಜೂ.22ರವರೆಗೆ ಕುಂದಾಪುರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಷಯದ ಕುರಿತ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮ ಆಯೋಜಕರಿಗೆ ಕುಂದಾಪುರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಿದ್ದು ಹಲವು ಅಂಶಗಳನ್ನು ಪಾಲಿಸುವಂತೆ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

ಸೂಲಿಬೆಲೆ ಸ್ಥಾಪಿಸಿದ ಯುವ ಬ್ರಿಗೇಡ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಪ್ರತಿದಿನ ಸಂಜೆ 6 ಗಂಟೆಗೆ ಚಕ್ರವರ್ತಿ ಸೂಲಿಬೆಲೆ ಅವರು ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿಯನ್ನು ನೀಡಬೇಕು. ಕಾರ್ಯಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲ್ಲಿ ಭಾಗಿಯಾಗುವ ಗಣ್ಯರ ಬಗ್ಗೆ ಮತ್ತು ವೇದಿಕೆ ಹಂಚಿಕೊಳ್ಳುವವರ ವಿವರವನ್ನು ನೀಡಬೇಕು. ಉಪನ್ಯಾಸ ನೀಡುವಾಗ ಅನ್ಯ ಧರ್ಮಗಳ ಬಗ್ಗೆ ನೋವಾಗುವ ರೀತಿಯಲ್ಲಿ ಅಥವಾ ದಕ್ಕೆ ಉಂಟಾಗ ದಂತೆ ಉಪನ್ಯಾಸ ನೀಡದಂತೆ ಎಚ್ಚರಿಕೆ ವಹಿಸಬೇಕು. ಉಪನ್ಯಾಸದ ವಿಷಯಕ್ಕೆ ಸಂಬಂಧಪಟ್ಟಂತೆ ಅದರ ವ್ಯಾಪ್ತಿಯಲ್ಲಿ ಮಾತ್ರ ಉಪನ್ಯಾಸ ನೀಡುವುದು ಹೊರತು ಬೇರೆ ರಾಜಕೀಯ ವಿಚಾರವಾಗಿ ಅಥವಾ ರಾಜಕೀಯ ನಾಯಕರ ತೇಜೋವಧೆ ಮಾಡದಂತೆ ನಿಗಾವಹಿಸಬೇಕು. ಕಾರ್ಯಕ್ರಮವನ್ನು ನಿಗದಿತ ಅವಧಿಯಲ್ಲಿ ಪ್ರಾರಂಭಿಸಿ ನಿಗದಿಪಡಿಸದ ಅವಧಿಯೊಳಗೆ ಕಡ್ಡಾಯವಾಗಿ ಮುಕ್ತಾಯಗೊಳಿಸಬೇಕು.

ಕಾರ್ಯಕ್ರಮದಲ್ಲಿ ಭಾಗವಹಿಸುವ ವ್ಯಕ್ತಿಗಳು ಶಾಂತಿಯುತವಾಗಿ ವರ್ತಿಸುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಎಷ್ಟು ಜನ ಸಾರ್ವಜನಿಕರು ಭಾಗವಹಿಸುತ್ತಾರೆ ? ಹಾಗೂ ಯಾವ ಯಾವ ಭಾಗ ಗಳಿಂದ ಸಾರ್ವಜನಿಕರು ಭಾಗವಹಿಸುತ್ತಾರೆ? ಎಂಬ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಕಾರ್ಯಕ್ರಮಕ್ಕಾಗಿ ಬಂದ ವ್ಯಕ್ತಿಗಳು ಕಾರ್ಯಕ್ರಮ ಮುಗಿದ ಬಳಿಕ ಕೂಡಲೇ ಶಾಂತಿಯುತವಾಗಿ ಮನೆಗೆ ಹೋಗುವಂತೆ ನೋಡಿಕೊಳ್ಳಬೇಕು. ವಾಹನಗಳ ಸಂಚಾರಕ್ಕೆ ಅಡ್ಡಿಯಾಗಂದೆತ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ಧ್ವನಿವರ್ಧಕದ ಬಳಕೆಗೆ ನಿಯಮಾನುಸಾರ ಅನುಮತಿಯನ್ನು ಪಡೆಯಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಶಾಂತಿಯುತವಾಗಿ ಸೌಹಾರ್ದ ತೆಯಿಂದ ಕಾರ್ಯಕ್ರಮವನ್ನು ನಡೆಸಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಪೊಲೀಸ್ ಇಲಾಖೆ/ಜಿಲ್ಲಾಡಳಿತವು ಕಾಲಕಾಲಕ್ಕೆ ನೀಡುವ ಸೂಚನೆಯನ್ನು ಪಾಲಿಸಬೇಕು. ಯಾವುದೇ ಕಾನೂನು ಭಂಗ/ಶಾಂತಿಭಂಗ ಉಂಟಾದಲ್ಲಿ ಸಂಘಟಕರನ್ನೇ ಸಂಪೂರ್ಣ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಸಂಘಟಕರಿಗೆ ನೀಡಿದ ನೋಟೀಸಿನಲ್ಲಿ ತಿಳಿಸಲಾಗಿದೆ.

1005853615
1005853686

ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ ಕಾರ್ಯಕ್ರಮದ ಕುರಿತಂತೆ ಪರಿಸರದಲ್ಲಿ ಸೌಹಾರ್ದತೆ ಕೆಡದಂತೆ ಸೂಕ್ತ ಕ್ರಮ ವಹಿಸುವಂತೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ಠಾಣಾಧಿಕಾರಿಯವರಿಗೆ ಪತ್ರ ಬರೆದು ಒತ್ತಾಯಿಸಿದೆ.

ಯುವಬ್ರಿಗೇಡ್ ಎಂಬ ಸಂಸ್ಥೆಯಿಂದ ಮೂರು ದಿನಗಳ ಕಾಲ ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಚಾರದಲ್ಲಿ ಉಪನ್ಯಾಸ ಕಾರ್ಯಕ್ರಮವನ್ನು ಕುಂದಾಪುರದ ಚಿಕ್ಕ ಸಾಲು ರಸ್ತೆಯ ಸಭಾ ಭವನದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕೋಮುವಾದಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಎಂಬ ವ್ಯಕ್ತಿ ಉಪನ್ಯಾಸ ನೀಡಲಿದ್ದಾರೆ ಎಂಬ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಮತ್ತು ಈ ಕುರಿತಾಗಿ ಪ್ಲೆಕ್ಸ್‌ಗಳನ್ನು ಕುಂದಾಪುರ ಪೇಟೆಯಲ್ಲಿ ಅಳವಡಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ಚಕ್ರವರ್ತಿ ಸೂಲಿಬೆಲೆ ಎಂಬ ವ್ಯಕ್ತಿಯ ಮೇಲೆ ದ್ವೇಷ ಭಾಷಣ ಮಾಡಿ ಧರ್ಮಗಳ ನಡುವಿನ ಸೌಹಾರ್ದತೆ ಯನ್ನು ಕೆಡಿಸಿದ ಕುರಿತು ರಾಜ್ಯದ ವಿವಿಧ ಪೋಲಿಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಅವರ ಮೇಲೆ ಹಲವು ತ್ರಿಮಿನಲ್ ಕೇಸುಗಳು ಕೂಡ ದಾಖಲಾಗಿರುವ ಕುರಿತು ಸುದ್ದಿಪತ್ರಿಕೆಗಳಲ್ಲಿ ವರದಿಯಾಗಿದೆ. ಕುಂದಾಪುರವು ಸೌಹಾರ್ದತೆಗೆ ಹೆಸರಾಗಿರುವ ಸ್ಥಳವಾಗಿದ್ದು ಇಲ್ಲಿ ಶಾಂತಿ ನೆಲೆಸಿದೆ. ಆದ್ದರಿಂದ ಈ ಚಕ್ರವರ್ತಿ ಸೂಲಿಬೆಲೆ ಪ್ರಚೋದನಕಾರಿ ಭಾಷಣ ಮಾಡಿದ್ದಲ್ಲಿ ಇಲ್ಲಿ ಶಾಂತಿ ಸೌಹಾರ್ದತೆ ಕೆಡುವ ಸಾಧ್ಯತೆಯಿದ್ದು ತಾವು ಈ ಕುರಿತು ಪರಿಶೀಲಿಸಿ ಉಪನ್ಯಾಸದಲ್ಲಿ ಕೋಮುವಾಧಿ ಭಾಷಣದ ಮೂಲಕ ಕುಂದಾಪುರ ಪರಿಸರದಲ್ಲಿ ಸೌಹಾರ್ದತೆ ಕೆಡದಂತೆ ಸೂಕ್ತ ಕ್ರಮವಹಿಸಬೇಕಾಗಿ ಕೋರುತ್ತೇನೆ ಎಂದು ಹರಿಪ್ರಸಾದ್ ಶೆಟ್ಟಿ ಪೊಲೀಸರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸರ ನೋಟೀಸಿಗೆ ಸೂಲಿಬೆಲೆ ಟೀಕೆ

ತಮ್ಮ ಉಪನ್ಯಾಸ ಕಾರ್ಯಕ್ರಮದ ಕುರಿತಂತೆ ಕುಂದಾಪುರ ಪೊಲೀಸರು ಸಂಘಟಕರಿಗೆ ನೀಡಿರುವ ನೋಟೀಸಿನ ಕುರಿತಂತೆ ಚಕ್ರವರ್ತಿ ಸೂಲಿಬೆಲೆ ತನ್ನ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ವ್ಯಂಗ್ಯ ಭರಿತ ಟೀಕೆ ಮಾಡಿದ್ದಾರೆ.

‘ಇವರು ಮತ್ತೆ ವರಾತ ಶುರು ಮಾಡಿದರು. ನಾನು ಕುಂದಾಪುರಕ್ಕೆ ಹೋಗಬಾರದಂತೆ, ಅಲ್ಲಿನ ಜನರೊಡನೆ ಮಾತನಾಡಬಾರದಂತೆ. ಇದೊಂದು ಅಘೋಷಿತ ಗಡಿಪಾರು ಮಾಡಿಸುವ ಪ್ರಯತ್ನ. ಅವರ ಮಾತು ಕೇಳಿ ಪೊಲೀಸರೊಂದು ನೋಟೀಸು ಬೇರೆ ಜಾರಿ ಮಾಡಿದ್ದಾರೆ.’ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ನನಗೇನು ಇದು ಹೊಸತಲ್ಲ. ಉದ್ರೇಕಿಸುವ ಭಾಷಣ ಮಾಡಬಾರದೆಂದು ಬಹಳ ಕಡೆಗಳಲ್ಲಿ ಕೊಟ್ಟಿದ್ದಾರೆ. ಆದರೆ ಈ ಬಾರಿ ರಾಜಕೀಯ ಮಾತನಾಡಬಾರದು ಮತ್ತು ಯಾವುದೇ ನಾಯಕರ ತೇಜೋವಧೆ ಮಾಡ ಬಾರದೆಂದು ಸೇರಿಸಿದ್ದಾರೆ. ಅದರರ್ಥ ನೆಹರೂ, ಇಂದಿರಾ, ರಾಜೀವ್, ಇವರ ಕುರಿತಂತೆ ಮಾತನಾಡ ಬಾರದು ಎಂತಲೋ ಘಜಿ, ಘೋರಿ, ಔರಂಗಜೇಬರಂತಹ ಕ್ರೂರಿಗಳ ತೇಜೋವಧೆ ಮಾಡಬಾರದೆಂತಲೋ! ನನಗಂತೂ ಗೊತ್ತಾಗಿಲ್ಲ, ರಾಜಕೀಯ ಮಾತನಾಡಬಾರದೆನ್ನುವುದು ಕರ್ನಾಟಕದಲ್ಲಿ ಎಂದಿನಿಂದ ಜಾರಿಯಾಯ್ತು ಎನ್ನುವುದರ ಬಗ್ಗೆ ಕೂಡ ಕುಂದಾಪುರದ ಪೊಲೀಸರು ಮಾಹಿತಿ ಕೊಟ್ಟರೆ ಒಳ್ಳೆಯದ್ದು ಎಂದು ಅವರು ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...