ಪ್ರಧಾನಿ ಮೋದಿ ಬಳಿಗೆ ಕರೆದೊಯ್ಯುವಂತೆ ಬಿಜೆಪಿ ನಾಯಕರ ಬಳಿ ಬೇಡಿಕೆ ಇಟ್ಟ ಸೌಜನ್ಯ ತಾಯಿ

Date:

  • ’11 ವರ್ಷದಿಂದ ನಮ್ಮ ಸಂಸದರು ಧ್ವನಿ ಎತ್ತಿರಲಿಲ್ಲ’ ಎಂದು ಆರೋಪಿಸಿದ ಸೌಜನ್ಯ ತಾಯಿ
  • ಡಾ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯ ಸ್ಥಾನದಿಂದ ಕೆಳಗಿಳಿಸಿ: ಕುಸುಮಾವತಿ ಆಗ್ರಹ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಪ್ರಕರಣವನ್ನು ಮರು ತನಿಖೆ ನಡೆಸುವಂತೆ ವಿವಿಧ ಸಂಘಟನೆಗಳು ಆಗ್ರಹಿಸಿವೆ.

ಈ ನಡುವೆ ಬಿಜೆಪಿ ಕೂಡ ಸೌಜನ್ಯ ಪರ ಹೋರಾಟಕ್ಕೆ ಧುಮುಕಿದ್ದು, ಹೀಗಾಗಿ ಇಂದು ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ದಕ್ಷಿಣ ಕನ್ನಡ ಸಂಸದ, ಶಾಸಕರು ಹಾಗೂ ಉಡುಪಿಯ ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿದ್ದರು.

ಬೆಳ್ತಂಗಡಿಯ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಕೂಡ ಭಾಗವಹಿಸಿ, ಮಾತನಾಡಿದ್ದು, ಪ್ರಧಾನಿ ಬಳಿಗೆ ಕರೆದೊಯ್ಯುವಂತೆ ಬೇಡಿಕೆ ಇಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
bjp 11

ಪ್ರತಿಭಟನೆಯಲ್ಲಿ ಮಾತನಾಡಿದ ಕುಸುಮಾವತಿ, “ಡಾ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯ ಸ್ಥಾನದಿಂದ ಕೆಳಗಿಳಿಸಬೇಕು.ಅಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರ ಬಳಿ ನಮ್ಮನ್ನು ಕರೆದುಕೊಂಡು ಹೋಗುತ್ತೀರಾ? ನನಗೆ ಮಾತು ಕೊಡಿ” ಎಂದು ಬಿಜೆಪಿ ಮುಖಂಡರ ಬಳಿ ನೇರವಾಗಿ, ಧೈರ್ಯದಿಂದಲೇ ಕೇಳಿದರು. ಅದಕ್ಕೆ ವೇದಿಕೆಯಲ್ಲಿದ್ದ ಬಿಜೆಪಿ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಇತರರು ತಲೆ ಅಲ್ಲಾಡಿಸಿದ್ದಾರೆ.

belthangady

“ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮನೆಗೆ ಬಂದು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕೇಳಿದ್ದಕ್ಕಾಗಿ ಇಲ್ಲಿಗೆ ಬಂದಿದ್ದೇನೆ. 11 ವರ್ಷದಿಂದ ನ್ಯಾಯಕ್ಕಾಗಿ ಅಲೆದಾಡುತ್ತಿದ್ದೇನೆ. ಈವರೆಗೆ ನಮ್ಮ ಸಂಸದರು ಧ್ವನಿ ಎತ್ತಿರಲಿಲ್ಲ. 11 ವರ್ಷ ಕಳೆದ ಬಳಿಕ ಮಾತನಾಡಿದ್ದಾರೆ. ಹಾಗಾಗಿ, ಮೋದಿಯವರ ಬಳಿಗೆ ನಮ್ಮನ್ನು ಕರೆದುಕೊಂಡು ಹೋಗಿ’ ಎಂದು ನಳಿನ್ ಕುಮಾರ್ ಹೆಸರೆತ್ತದೆ ಪರೋಕ್ಷವಾಗಿ ಸೌಜನ್ಯ ತಾಯಿ ಕುಸುಮಾವತಿ ಹೇಳಿಕೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಇನ್ನೂ ಕೂಡ ಪ್ರತಿಭಟನೆಗೆ ಆಗಮಿಸಿರಲಿಲ್ಲ.

nalin kumar kateel 2

’17 ವರ್ಷದಿಂದ ಸಾಕಿ ಸಲಹಿದ್ದ ನನ್ನ ಮಗಳನ್ನು ಒಂದು ದಿನದಲ್ಲಿ ನನ್ನ ಮಗಳನ್ನು ಅತ್ಯಾಚಾರಗೈದು, ಕೊಲೆ ಮಾಡಿ ಬಿಸಾಡಿ ಹೋಗಿದ್ದಾರೆ. ಮಲ್ಲಿಕ್ ಜೈನ್, ಉದಯ್ ಜೈನ್, ಧೀರಜ್ ಜೈನ್ ಹಾಗೂ ವೀರೇಂದ್ರ ಹೆಗ್ಗಡೆಯವರ ತಮ್ಮ ಮಗನ ನಿಶ್ಚಲ್ ಜೈನ್ ಈ ಪ್ರಕರಣದಲ್ಲಿ ಇದ್ದಾನೆ ಎಂದು ಈ ಬಹಿರಂಗ ಸಭೆಯಲ್ಲಿ ಹೇಳುತ್ತಿದ್ದೇನೆ. ನನಗೆ ನ್ಯಾಯ ಕೊಡಿ’ ಎಂದು ನೇರವಾಗಿ ಹೆಸರೆತ್ತಿ ಹೇಳಿ, ನ್ಯಾಯ ಕೊಡಿ ಎಂದು ಕೇಳಿದರು.

ಆ ಬಳಿಕ ಬಂದ ಸಂಸದ ನಳಿನ್ ಕುಮಾರ್ ಮಾತನಾಡಿ, ಸೌಜನ್ಯ ಪ್ರಕರಣವನ್ನು ಮರು ತನಿಖೆ ಆಗಬೇಕು ಎಂಬುದು ನಮ್ಮ ಬೇಡಿಕೆ. ಪ್ರಕರಣದ ಹಿಂದೆ ಯಾರೇ ಇದ್ದರೂ ಅವರ ಬಂಧನವಾಗಬೇಕು. ಪ್ರಕರಣ ಸಿಬಿಐ ತನಿಖೆ ನಡೆಸುತ್ತಿರುವಾಗ ಜನಪ್ರತಿನಿಧಿಗಳಾದವರು ಮಾತನಾಡುವ ಹಾಗಿಲ್ಲ. ಮರು ತನಿಖೆ ಆಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರನ್ನು ಶೀಘ್ರವೇ ಭೇಟಿ ಮಾಡಲಿದ್ದೇವೆ. ಸೌಜನ್ಯಳ ಕುಟುಂಬಕ್ಕೆ ನ್ಯಾಯ ಒದಗಿಸಲು ಬಿಜೆಪಿ ಕೊನೆಯವರೆಗೂ ಹೋರಾಟ ನಡೆಸಲಿದೆ’ ಎಂದು ತಿಳಿಸಿದರು.

ಸೌಜನ್ಯ ತಾಯಿ ಕುಸುಮಾವತಿ

‘ಸೌಜನ್ಯ ಪ್ರಕರಣದ ಕುರಿತಂತೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹಾಕಬೇಕು. ನಾನು ಅಥವಾ ಶಾಸಕ ಹರೀಶ್ ಪೂಂಜ ಆ ಕೆಲಸ ಮಾಡುತ್ತೇವೆ’ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು‌.

ವಿಡಿಯೋ ಕೃಪೆ: V4 NEWS

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...