ಮದ್ದೂರು | ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು : ಹೆಚ್.ಹನುಮಂತರಾಯಪ್ಪ

Date:

ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು. ಬಾಲ್ಯದಲ್ಲಿ ಶಿಕ್ಷಣ ಪಡೆಯುವಾಗ ಅನೇಕ ಕಷ್ಟಗಳನ್ನು ಅನುಭವಿಸಿ ಬೆಳೆದದ್ದರಿಂದ ಇದು ಸಾಧ್ಯ ಆಯಿತು. ಹಾಗೇ ಅವರು ಏಕಲವ್ಯ, ಶಂಭೂಕನ ಬಗ್ಗೆ ಬರೆದರು. ಹೀಗೆ ಮನುಷ್ಯ ಹುಟ್ಟುವಾಗ ವಿಶ್ವ ಮಾನವ, ಬೆಳೆಯುತ್ತಾ ಬೆಳೆಯುತ್ತಾ ಅಲ್ಪ ಮಾನವನಾಗುತ್ತಾನೆ ಎಂದು ಸರ್ವೋದಯ ಕಾಲೇಜಿನ ಪ್ರಾಂಶುಪಾಲ ಹೆಚ್ ಹನುಮಂತರಾಯಪ್ಪ ತಿಳಿಸಿದರು.

IMG 20241230 WA0011

ಅವರು ಮದ್ದೂರು ಪಟ್ಟಣದ ರಾಜ್ಯ ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ ಕಛೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾ ಗೌರವಾಧ್ಯಕ್ಷ ಹಾಗೂ
ಪುರಸಭಾ ಮಾಜಿ ಅಧ್ಯಕ್ಷರಾದ ಎಂ.ಸಿ. ಬಸವರಾಜು ಮಾತನಾಡಿ, ಕುವೆಂಪು ಒಂದು ಕಡೆ ಹೇಳುತ್ತಾರೆ ಯಾವ ಕಾಲದ ಶಾಸ್ತ್ರ ಏನು ಹೇಳಿದರೇನು, ಎದೆಯ ದನಿಗಳು ಮಿಗಿಲು ಶಾಸ್ತ್ರ ಇರುವುದೇನು ಎಂದಿದ್ದರು. ಹಿಂದಿನ ಋಷಿಗಳು ನಮ್ಮಂತೆ ಮಾನವರು ಎಂದು ಹೇಳುತ್ತಿದ್ದರು. ಮೌಢ್ಯವನ್ನು ಬಿಟ್ಟು ವಿಜ್ಞಾನ ದೀವಿಗೆಯನ್ನು ಹಿಡಿಯ ಬನ್ನಿ ಎಂದು ಸಾರಿದೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241230 WA0010

ಕುವೆಂಪು ಒಂದು ಸಾರಿ ಮೈಸೂರಿನಲ್ಲಿ ಭಾಷಣ ಮಾಡುವಾಗ ವಿಚಾರ ಕ್ರಾಂತಿಗೆ ಕೆರೆ ಕೊಟ್ಟರು. ಅವರ ಭಾಷಣ ಮೆಚ್ಚಿ ಎಲ್ಲಾರೂ ಅವರ ಕಾಲಿಗೆ ನಮಸ್ಕಾರ ಮಾಡಿದರು. ಅಗ ಕುವೆಂಪು ಈ ಜನ ನನ್ನನ್ನು ಮೇಲೆ ಎತ್ತಿ ಕುಣಿದಾಡಿಸುತ್ತಾರೆ ಅದರಿಂದ ನಾವು ಸಭೆ ಸಮಾರಂಭಗಳಿಗೆ ಹೋಗುವ ಬದಲು ಕೃತಿಗಳ ಮೂಲಕ ಬರಹ ಬರೆಯುವುದು ಸರಿ ಎಂದು ತೀರ್ಮಾನಕ್ಕೆ ಬಂದರು. ಬರವಣಿಗೆಯ ಕೃತಿ ಶ್ವಾಶ್ವತ ಎಂದು ಹೇಳಿ ಬರವಣಿಗೆ ಹೆಚ್ಚು ಒತ್ತು ನೀಡಿದರು. ಅದರಲ್ಲು ಕುವೆಂಪು ಕನ್ನಡಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ‌ ಅವರ ಕಾವ್ಯ, .ಕೃತಿಗಳಿಗೆ ನೋಬೆಲ್ ಪುರಸ್ಕಾರವೇ ದೊರಬೇಕಿತ್ತು. ಆದರೆ ಅವರು ಶೂದ್ರ ಶಕ್ತಿ ಎಂದು ತಿಳಿದು ಪ್ರಶಸ್ತಿ ಸಿಗದೇ ಇರಲು ಕಾರಣವಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಶ್ರೀರಂಗಪಟ್ಟಣ | ಕುವೆಂಪು ಕನ್ನಡ ನಾಡಿಗೆ ಕೀರ್ತಿ ಕಳಶ: ಸಿ.ಎಸ್.ವೆಂಕಟೇಶ್

ಕಾರ್ಯಕ್ರಮದಲ್ಲಿ ಸಾಹಿತಿ ಬಿ.ವಿ ಹಳ್ಳಿ ನಾರಾಯಣ್, ನಿವೃತ್ತ ಶಿಕ್ಷಕ ಚನ್ನಪ್ಪ, ಜಿಲ್ಲಾ ಅಧ್ಯಕ್ಷ ಸಿ. ಶಿವಲಿಂಗಯ್ಯ ಮಾತನಾಡಿದರು. ಸಭೆಯಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಅಧ್ಯಕ್ಷ ಡಿ.ಸಿ. ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಟಿ. ಶಿವಕುಮಾರ್, ಪದಾಧಿಕಾರಿಗಳಾದ ಸಿ.ಕೆ. ಶಂಕರಯ್ಯ, ಪುಟ್ಟಸ್ವಾಮಿ, ಶಶಿ ಕುಮಾರ್ ಪಿ, ಮಹದೇವಯ್ಯ, ರಾಚಯ್ಯ, ಪ್ರಿಯಾಂಕ, ರಾಮಲಿಂಗಯ್ಯ, ಇಂತಿಯಾಜ್ ಉಲ್ಲಾ ಖಾನ್, ಮರಿಸ್ವಾಮಿ, ಕೆ‌.ಎಸ್. ಮಧುಸೂದನ್ ಹಾಗೂ ಇತರರು ಇದ್ದರು.

ಇದನ್ನು ನೋಡಿದ್ದೀರಾ? ಮಂಡ್ಯ | ‘ರಸ್ತೆ ಮೇಲೆ ಓಡಾಡಲು ನಿರ್ಬಂಧ; ಸಂಕಷ್ಟಕ್ಕೆ ಸಿಲುಕಿದ ಕುಟುಂಬ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...