ಕೊಪ್ಪಳ ಜಿಲ್ಲೆಯ ವಸತಿ ನಿಲಯಗಳ ಆಹಾರ ಪೂರೈಕೆಯಲ್ಲಿ ಕಡಿತ : ಕೆವಿಎಸ್ ಖಂಡನೆ

Date:

ಸರಕಾರದ ಯಾವುದೇ ಆದೇಶವಿಲ್ಲದೆ ಕಳೆದ 3 ತಿಂಗಳಿಂದ ಕೊಪ್ಪಳ ಜಿಲ್ಲೆಯ ಹಿಂದುಳಿದ ಮತ್ತು ಎಸ್ಸಿ-ಎಸ್ಟಿ ವಸತಿ ನಿಲಯಗಳಿಗೆ ಪೂರೈಸುವ ಮೆನ್ಯು ಚಾರ್ಟ್‌ನಲ್ಲಿ ಆಹಾರ ಕಡಿತಗೊಳಿಸಲಾಗಿದೆ. ಈ ಅನಧಿಕೃತ ಕ್ರಮವನ್ನು ಖಂಡಿಸಿರುವ ಕೆವಿಎಸ್‌ ಸಂಘಟನೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ವಸತಿ ನಿಲಯಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಮನವಿ ಸಲ್ಲಿಸಿದೆ.

“ಅಧಿಕಾರಿಗಳು ಸರಕಾರದ ಯಾವುದೇ ಸೂಚನೆ ಇಲ್ಲದೇ ಹಳೆಯ ಮೆನ್ಯು ಚಾರ್ಟ್ ಬದಲಿಸ ಹೊಸ ಮೆನ್ಯು ಚಾರ್ಟ್ ತಂದಿರುವುದು ನಿಯಮ ಬಾಹಿರ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಹಾಗೂ ಹಳೆ ಮೆನ್ಯುವನ್ನೇ ಮುಂದುವರಿಸಬೇಕು. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಎಲ್ಲಾ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯಗಳಾದ ವ್ಯವಸ್ಥಿತ ಕೊಠಡಿ, ಗುಣಮಟ್ಟದ ಆಹಾರ, ನೀರಿನ ಪೂರೈಕೆ, ಆಟದ ಸಾಮಗ್ರಿಗಳು, ವ್ಯಾಯಾಮ ಕೊಠಡಿ, ಸಾಮಗ್ರಿಗಳು, ಗ್ರಂಥಾಲಯ, ಸ್ಪರ್ಧಾತ್ಮಕ ಹಾಗೂ ಪಠ್ಯಾಧರಿತ ಪುಸ್ತಕಗಳನ್ನು ನೀಡುಬೇಕು” ಎಂದು ಆಗ್ರಹಿಸಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆ ಮುಖಂಡರು ಮಾತನಾಡಿ, “ಕೊಪ್ಪಳ ಜಿಲ್ಲೆಯ ವಸತಿ ನಿಲಯಗಳಲ್ಲಿ ಹಿಂದಿನ ಸರಕಾರದ ಈ ಹಿಂದಿನ ಮೆನ್ಯು ಚಾರ್ಟ್ ಬದಲಿಸಿ ಅಧಿಕಾರಿಗಳು ತಾವೇ ಅಹಾರದ ಮೆನ್ಯು ಚಾರ್ಟ್‌ ತಯಾರಿಸಿ ಅದರ ಪ್ರಕಾರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಆಹಾರ ಪೂರೈಸುತ್ತಿದ್ದಾರೆ. ಇದು ಸರಕಾರದ ಮೂಲ ನಿಯಮ ಉಲ್ಲಂಘಿಸಿದಂತಾಗಿದೆ. ಅಲ್ಲದೆ ಆಧಿಕಾರಿಗಳಿಂದ ವಿದ್ಯಾರ್ಥಿಗಳ ಮೆಲೆ ಮಾನಸಿಕ ಗದಾ ಪ್ರಹಾರದ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಪ್ಪಳ ಹಾಗೂ ಗಂಗಾವತಿಯಲ್ಲಿ ಬಾಲಕ-ಬಾಲಕಿಯರಿಗೆ ಪ್ರತ್ಯೇಕ ವೃತ್ತಿಪರ ವಸತಿ ನಿಲಯಗಳನ್ನು ಸ್ಥಾಪಿಸಬೇಕು. ವಿದ್ಯಾರ್ಥಿಗಳಿಗೆ ಕೊಡಮಾಡುವ ಆಹಾರ ಭತ್ಯೆಯನ್ನು 1650 ರೂ.ಗಳಿಂದ 3250 ರೂಪಾಯಿಗಳವರೆಗೆ ಹೆಚ್ಚಿಸಬೇಕು. ಕೊಪ್ಪಳ ನಗರದಲ್ಲಿ ಇನ್ನೊಂದು ಸಾರ್ವಜನಿಕ ಗ್ರಂಥಾಲಯವನ್ನು ಸ್ಥಾಪಿಸಬೇಕು. ವಸತಿ ನಿಲಯ ಬೇಕೆಂದು ಅರ್ಜಿ ಸಲ್ಲಿಸುವ ಎಲ್ಲಾ ವಿದ್ಯಾರ್ಥಿಗಳನ್ನು ಯಾವುದೇ ಮೆರಿಟ್ ಆಧರಿಸದೆ ಆಯ್ಕೆಮಾಡಿಕೊಳ್ಳಬೇಕು. ನರ್ಸಿಂಗ್ ಹಾಗೂ ನರ್ಸಿಂಗ್ ಸಂಬಂಧಿತ ವಿವಿಧ ಕೋರ್ಸಿನ ಸರ್ಕಾರಿ ಹಾಗೂ ಮ್ಯಾನೆಜಮೆಂಟ್ ಕೋಟಾದಲ್ಲಿ ದಾಖಲಾದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಫ್ ನೀಡಬೇಕು. ಎಲ್ಲಾ ವಸತಿ ನಿಲಯಗಳಲ್ಲಿ ಪ್ರತಿ ವಾರಕ್ಕೆ ಎರಡು ದಿನ ಸ್ಪರ್ಧಾತ್ಮಕ ತರಬೇತಿ ತರಗತಿಗಳನ್ನು ಏರ್ಪಡಿಸಬೇಕು. ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಜಿಮ್ನಾಸ್ಟಿಕ್ ವ್ಯವಸ್ಥೆ ಮಾಡಬೇಕು ಎಂದು ವಿವಿಧ ಹಕ್ಕೊತ್ತಾಯ ಒತ್ತಾಯಿಸಿದರು.

ಇದನ್ನೂ ಓದಿ: ಕೊಪ್ಪಳ | ನಗರಸಭೆ ಅಧ್ಯಕ್ಷರ ಸಹೋದರ & ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

:

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...