ಬೆಳಗಾವಿ | ಸಿಎಂ ಕುತ್ತಿಗೆಪಟ್ಟಿ ಹಿಡಿದು ಪ್ರಶ್ನಿಸಿದ್ದ ಕಾರ್ಮಿಕರ ನಾಯಕ ವಿ ಪಿ ಕುಲಕರ್ಣಿ ಇನ್ನಿಲ್ಲ

Date:

  • ವಿ ಪಿ ಕುಲಕರ್ಣಿ ಅವರ ಬದುಕಿನ ಕುರಿತು ಮಗ ನಿಖಿಲ ಕುಲಕರ್ಣಿ ಬರಹ
  • ಬಾಲಕನಿದ್ದಾಗಲೇ ತಂದೆ ತಾಯಿ ಕಳೆದುಕೊಂಡು ಹೋರಾಟಕ್ಕೆ ದುಮುಕಿದ್ದರು

ಬೆಳಗಾವಿ ಜಿಲ್ಲೆಯ ಕಾರ್ಮಿಕರ ನಾಯಕ, 17ನೇ ವಯಸ್ಸಿನಲ್ಲಿಯೇ ಮುಖ್ಯಮಂತ್ರಿಯ ಕುತ್ತಿಗೆ ಪಟ್ಟಿ ಹಿಡಿದು ಪ್ರಶ್ನಿಸಿದ್ದ ವಿ.ಪಿ ಕುಲಕರ್ಣಿ(70) ನಿಧನರಾಗಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಶುಕ್ರವಾರ ಮುಂಜಾನೆ ಅವರ ಸ್ವಗ್ರಾಮ ಮುದೇನಕೊಪ್ಪದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನಕೊಪ್ಪದಲ್ಲಿ ಜನಿಸಿದ ವಿ.ಪಿ ಕುಲಕರ್ಣಿ ಪ್ರಜಾಸತ್ತಾತ್ಮಕ ಹೋರಾಟ ಪ್ರಾರಂಭಿಸಿದ್ದರು. ದುಡಿಯುವ ಜನರಿಗೆ ಧ್ವನಿಯಾಗಿ ಬೆಳಗಾವಿ ಜಿಲ್ಲೆಯಲ್ಲಿ ರೈತ ಕಾರ್ಮಿಕರ ಪರ ನಿರಂತರ ಹೋರಾಟ ನಡೆಸಿದ್ದರು.

ಶ್ರೀಮಂತರ ಬದುಕು, ಬಡವರ ಬದುಕಿನ ನಡುವಿನ ಅಗಾಧ ವ್ಯತ್ಯಾಸ ಅವರನ್ನು ಬಾಲ್ಯದಿಂದಲೇ ಬಹುವಾಗಿ ಕಾಡಲಾರಂಭಿಸಿತ್ತು. ಅಸಮಾನತೆಯ ವಿರುದ್ಧದ ಧ್ವನಿ ಅವರ ಆಂತರ್ಯದಲ್ಲಿ ಮೊಳಗಲು ಶುರು ಮಾಡಿತ್ತು. ಮಾರ್ಕ್ಸ್‌, ಲೆನಿನ್, ಭಗತ್‌ ಸಿಂಗ್ ಅವರ ಚಿಂತನೆಗಳಿಂದ ಅವರು ಪ್ರಭಾವಿತರಾಗಿದ್ದರು. 15ನೇ ವಯಸ್ಸಿಗೆ ಧಾರವಾಡದ ಟೈವಾಕ್ ಕಂಪನಿಯಲ್ಲಿ ಕಾರ್ಮಿಕನಾಗಿ ಅವರು ಸೇರಿದ್ದರು. ಎಡ ಚಿಂತನೆಗಳಿಗೆ ಆಕರ್ಷಿತಗೊಂಡು, ಎಡ ಕಾರ್ಮಿಕ ಸಂಘಟನೆಯ ಸದಸ್ಯರಾದ ಅವರು 17ನೇ ವಯಸ್ಸಿನಲ್ಲಿ ಪ್ರತಿಭಟನೆಯ ಸಂದರ್ಭದಲ್ಲಿ‌ ಆಗಿನ ಮುಖ್ಯಮಂತ್ರಿಯ ಕೊರಳು ಪಟ್ಟಿ ಹಿಡಿದು ಎಳೆದು ಬಿಟ್ಟಿದ್ದರು. ಅದಕ್ಕಾಗಿ ಜೈಲಿಗೂ ಸೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆಯ ಹೆಚ್ಚುವರಿ ಜವಾಬ್ದಾರಿಗಳನ್ನು‌ ನಿರ್ವಹಿಸಲು ಬೆಂಗಳೂರಿಗೆ ತೆರಳಿದರು. ಬೆಂಗಳೂರಿನ ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷನಾಗಿ, ಪ್ರತಿಭಟನಾ ಮೆರವಣಿಗೆ ಸಂದರ್ಭದಲ್ಲಿ‌ ವಿರೋಧಿಗಳಿಂದ ಚಾಕು ಇರಿತಕ್ಕೆ ಒಳಗಾಗಿ, ಸಾವು ಬದುಕಿನ ಹೋರಾಟದಲ್ಲಿ ಅಂತಿಮವಾಗಿ‌ ಜಯಗಳಿಸಿ, ಮತ್ತೆ ಹೋರಾಟದಲ್ಲಿ ತೊಡಗಿಸಿಕೊಂಡವರು.

ಬೆಳಗಾವಿಗೆ ಮರಳಿ, ರಾಮದುರ್ಗದಲ್ಲಿ‌ ಬೀಡಿ ಕಾರ್ಮಿಕರು, ಕಟ್ಟಡ‌ ಕೂಲಿ ಕಾರ್ಮಿಕರ ಸಂಘಗಳನ್ನು ಸ್ಥಾಪಿಸಿ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ಆರಂಭಿಸಿದ್ದರು. ಪುರಸಭೆ ಚುನಾವಣೆಯಲ್ಲಿ ಜಯಗಳಿಸಿ, ಅಲ್ಲಿನ ಭ್ರಷ್ಟಾಚಾರ ಮತ್ತು ಕಾರ್ಮಿಕ ವಿರೋಧಿ ನೀತಿ ಖಂಡಿಸಿ, ಕೇವಲ 15 ದಿನದಲ್ಲಿ ರಾಜೀನಾಮೆ ನೀಡಿ ಕುಲಕರ್ಣಿ ಹೊರಬಂದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...