ಚಿಕ್ಕಬಳ್ಳಾಪುರ | ಕಾರ್ಮಿಕ ವಿರೋಧಿ ಕಾನೂನು ವಿರೋಧಿಸಿ ಮೇ 20ರಂದು ಸಾರ್ವತ್ರಿಕ ಮುಷ್ಕರ

Date:

ಕೇಂದ್ರ ನರೇಂದ್ರ ಮೋದಿ ಸರಕಾರವು ಕಾರ್ಪೊರೇಟ್‌ ಮತ್ತು ಬಂಡವಾಳಶಾಹಿಗಳ ಪರ ನಿಂತಿದ್ದು, ಭೂಸ್ವಾಧೀನದ ಮೂಲಕ ರೈತರನ್ನು ಕೂಲಿಕಾರ್ಮಿಕರನ್ನಾಗಿ ಮಾಡಲು ಹೊರಟಿದೆ. ಇದನ್ನು ವಿರೋಧಿಸಿ ಮೇ 20ರಂದು ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಹೇಳಿದರು.

ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್‌ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದುಡಿಯುವ ವರ್ಗಕ್ಕೆ ಮಾರಕವಾಗಿರುವ ನಾಲ್ಕು ಕಾರ್ಮಿಕ ಕಾಯಿದೆಗಳನ್ನು ಜಾರಿಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ. ಕಾರ್ಮಿಕ ಸಂಘಟನೆಗಳ ಬೇಡಿಕೆಗಳನ್ನು ಗಾಳಿಗೆ ತೂರಿದೆ. ದಿನಕ್ಕೆ 600 ರೂಪಾಯಿ ಕನಿಷ್ಠ ವೇತನ ನಿಗದಿ ಮಾಡಬೇಕು, ಇದಕ್ಕಿಂದ ಕಡಿಮೆ ಹಣಕ್ಕೆ ದುಡಿಸಿಕೊಳ್ಳಬಾರದು ಎಂದು ಕೋರ್ಟ್‌ ಹೇಳಿದೆ ಎಂದರು.

1948ರ ಕನಿಷ್ಠ ವೇತನ ಕಾಯಿದೆಯ ಪ್ರಕಾರ ಪ್ರತಿಯೊಬ್ಬ ಕಾರ್ಮಿಕನ ವೇತನ ಹೆಚ್ಚಳ ಆಗುತ್ತದೆ. ಆದರೆ, ಕೇಂದ್ರ ಸರಕಾರ ವೇತನ ಸಂಹಿತೆಯಡಿ 4 ಕಾನೂನುಗಳನ್ನು ಜಾರಿಗೊಳಿಸಲು ಮುಂದಾಗಿದ್ದು, ಈ ಕಾರ್ಮಿಕ ವಿರೋಧಿ ಕಾನೂನಿಗಳಿಂದ ಇನ್ನು ಮುಂದೆ ಯಾವೊಬ್ಬ ಕಾರ್ಮಿಕನ ವೇತನವೂ ಹೆಚ್ಚಳ ಆಗುವುದಿಲ್ಲ. ಕೇವಲ 187 ರೂಪಾಯಿ ಫ್ಲೋರ್‌ ವೇಜ್‌ ನಿಗದಿ ಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದಲ್ಲಿರುವ ಅತೀ ಹೆಚ್ಚು ಅಸಂಘಟಿತ, ಅನೌಪಚಾರಿಕ ಕಾರ್ಮಿಕರನ್ನು ಕಾರ್ಮಿಕ ಕಾನೂನಡಿಯಲ್ಲಿ ತರಬೇಕೆಂಬ ಕಾರ್ಮಿಕ ಸಂಘಟನೆಗಳ ಬೇಡಿಕೆಯನ್ನು ತಿರಸ್ಕರಿಸಿದೆ. 40 ಜನ ಕಾರ್ಮಿಕರಿದ್ದು, ವಿದ್ಯುತ್‌ ರಹಿತ ಉದ್ಯಮಗಳಲ್ಲಿರುವ ಕಾರ್ಮಿಕರು ಮತ್ತು 50 ಕ್ಕಿಂತ ಕಡಿಮೆ ಗುತ್ತಿಗೆ ಕಾರ್ಮಿಕರನ್ನು ಹೊಂದಿರುವ ಗುತ್ತಿಗೆದಾರರು ಲೈಸೆನ್ಸ್‌ ಪಡೆಯುವಂತಿಲ್ಲ. ಇದರಿಂದಾಗಿ ದೇಶದ ಶೇ.70ರಷ್ಟು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳು ಅನ್ವಯಿಸುವುದಿಲ್ಲ. ಇದರಿಂದ ಕಾರ್ಮಿಕರು ನಾನಾ ಸೌಲಭ್ಯ ವಂಚಿತರಾಗುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

IMG20250503114340
oppo_2

ಮುಷ್ಕರ ಮಾಡುವವರಿಗೆ, ಬೆಂಬಲ ಸೂಚಿಸುವವರಿಗೆ ಜೈಲು, ದಂಡ, ಕೆಲಸದಿಂದ ತೆಗೆಯುವಂತ ಇತ್ಯಾದಿ ಕಾನೂನುಗಳನ್ನು ರೂಪಿಸಲಾಗುತ್ತಿದ್ದು, ಇದರಿಂದ ಇನ್ನು ಮುಂದೆ ಮುಷ್ಕರ ಮಾಡುವಂತಿಲ್ಲ. ಸಂಘಗಳನ್ನು ಕಟ್ಟುವಂತಿಲ್ಲ. ಇಂತಹ ಮಾರಕವಾದ ಅಂಶಗಳನ್ನು ಈ ಕಾಯಿದೆಯಲ್ಲಿ ಅಡಕಗೊಳಿಸಲಾಗಿದ್ದು, ಇದರಿಂದ ದೇಶದ 11 ಕಾರ್ಮಿಕ ಸಂಘಟನೆಗಳ ಹಕ್ಕನ್ನು ಕಸಿಯಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

ಕೆಸಲದ ಅವಧಿಯನ್ನು 8-12ಗಂಟೆವರೆಗೆ ಹೆಚ್ಚಿಸಲು ಮುಂದಾಗಿದ್ದು, 50 ಗಂಟೆ ಇದ್ದ ಓಟಿ ಸಮಯವನ್ನು 125 ಗಂಟೆಗೆ ಹೆಚ್ಚಿಸಲು ಅವಕಾಶ ನೀಡಲಾಗಿದೆ. ಇದರಿಂದ ಕಾರ್ಮಿಕದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದ್ದು, ಹೃದಯ ಸಂಬಂಧಿ ಕಾಯಿಲೆಗಳು, ಒತ್ತಡ, ಮಾನಸಿಕ ಖಿನ್ನತೆಗೆ ಒಳಗಾಗಲಿದ್ದಾರೆ. ಒಟ್ಟಾರೆಯಾಗಿ 4 ಕಾರ್ಮಿಕ ಕಾಯಿದೆಗಳ ಮೂಲಕ ಸುಮಾರು 29 ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಕೇಂದ್ರ ಸರಕಾರ ಮುಂದಾಗಿದ್ದು, ಇದನ್ನು ಕಾರ್ಮಿಕ ಸಂಘಟನೆಗಳು ಬಲವಾಗಿ ವಿರೋಧಿಸುತ್ತವೆ. ಅದಕ್ಕಾಗಿ ಮೇ 20 ರಂದು ಇಡೀ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ, ಜಿಲ್ಲೆಗಳಲ್ಲಿ, ತಾಲೂಕು ಮಟ್ಟದಲ್ಲೂ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಸಿಐಟಿಯು ಕರೆ ನೀಡಿದೆ. ಮುಷ್ಕರದಲ್ಲಿ ಲಕ್ಷಾಂತರ ಕಾರ್ಮಿಕರು ಭಾಗಿಯಾಗಲಿದ್ದಾರೆ. ಕೇಂದ್ರ ಸರಕಾರ ತಾಕತ್ತಿದ್ದರೆ ನಮ್ಮನ್ನ ಬಂಧಿಸಲಿ ಎಂದು ಸವಾಲೆಸೆದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಕಾರ್ಯದರ್ಶಿ ಸಿದ್ದಗಂಗಪ್ಪ, ಸುಜಾತ, ಮಂಜುಳ, ವೆಂಕಟಲಕ್ಷ್ಮಮ್ಮ ಸೇರಿದಂತೆ ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...