ಮಳವಳ್ಳಿ | ಜಾನಪದ ಅಧ್ಯಯನ ಆಸಕ್ತರ ಕೊರತೆ ಆತಂಕಕ್ಕೀಡು ಮಾಡಿದೆ: ಸಾಹಿತಿ ಟಿ ಸತೀಶ್ ಜವರೇಗೌಡ

Date:

ಮಂಡ್ಯ ಜಿಲ್ಲೆ, ಮಳವಳ್ಳಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಳವಳ್ಳಿ ಸುಂದ್ರಮ್ಮ ಸಾಂಸ್ಕೃತಿಕ ವೇದಿಕೆಯ ವತಿಯಿಂದ ಜನಪದ ಚೇತನ ಮಹದೇವಮ್ಮನವರ ಸ್ಮರಣಾರ್ಥ ನಡೆದ ‘ಲಾದಸ್ವರ’ ಕಲಿಕಾ ಕೇಂದ್ರ ಉದ್ಘಾಟನೆ ಹಾಗೂ ಮಳವಳ್ಳಿ ಪಿ. ನಾಗರತ್ನಮ್ಮ ಸಂಪಾದಿತ ‘ಗಣಪತರಾಜನ ಜನಪದ ಕಾವ್ಯ’ ಲೋಕಾರ್ಪಣೆ ಸಮಾರಂಭದಲ್ಲಿ ಬರಹಗಾರರ ಬಳಗದ ಅಧ್ಯಕ್ಷ ಹಾಗೂ ಸಾಹಿತಿ ಟಿ. ಸತೀಶ್ ಜವರೇಗೌಡ ಮಾತನಾಡಿ, ‘ಜಾನಪದ ಅಧ್ಯಯನ ಆಸಕ್ತರ ಕೊರತೆ ಆತಂಕಕ್ಕೀಡು ಮಾಡಿದೆ
ಎಂದರು.

“ಇತ್ತೀಚಿನ ವರ್ಷಗಳಲ್ಲಿ ಜಾನಪದ ಸಾಹಿತ್ಯದಲ್ಲಿ ಕ್ಷೇತ್ರಕಾರ್ಯ, ಸಂಗ್ರಹ, ಸಂಪಾದನೆ, ಸಂಶೋಧನೆಯ ಕಾರ್ಯ ಕ್ಷೀಣಿಸುತ್ತಿದೆ. ಜಾನಪದ ಅಧ್ಯಯನ ಮಾಡುವ ಆಸಕ್ತರು ವಿರಳವಾಗುತ್ತಿದ್ದಾರೆ. ವಿಶ್ವವಿದ್ಯಾಲಯ ಜಾನಪದ ವಿಭಾಗಗಳು ವಿದ್ಯಾರ್ಥಿಗಳಿಲ್ಲದೆ ಮುಚ್ಚುತ್ತಿವೆ. ಜಾನಪದ ಮತ್ತು ಕನ್ನಡ ಪ್ರಾಧ್ಯಾಪಕರಿಗೂ ಜನಪದ ಸಾಹಿತ್ಯದ ಕಡೆಗೆ ಆಸಕ್ತಿ ಇಲ್ಲವಾಗಿದೆ. ಆದ್ದರಿಂದ, ಹೊಸ ತಲೆಮಾರಿನ ವಿದ್ಯಾರ್ಥಿಗಳು ಜಾನಪದ ಸಾಹಿತ್ಯದ ಅಧ್ಯಯನ ಮತ್ತು ಸಂಗ್ರಹದೆಡೆಗೆ ಅಭಿರುಚಿ ಬೆಳೆಸಿಕೊಳ್ಳಬೇಕು. ಜನಪದ ಕಲೆಗಳ ಕಲಿತು ಪ್ರದರ್ಶನ ಮಾಡುವ ಹವ್ಯಾಸ ರೂಢಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನ ಸಾಧನಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಮೊಬೈಲ್, ಟಿವಿ, ಸಿನಿಮಾದ ವ್ಯಸನಕ್ಕೆ ತುತ್ತಾಗಿದ್ದಾರೆ. ಇದರಿಂದಾಗಿ, ಅವರ ಓದುವ ಮತ್ತು ಜ್ಞಾನ ಸಂಪಾದಿಸುವ ಸಮಯ ವ್ಯರ್ಥವಾಗುತ್ತಿದೆ. ಆದ್ದರಿಂದ, ವಿದ್ಯಾರ್ಥಿಗಳು ತಂತ್ರಜ್ಞಾನ ಸಾಧನಗಳ ಬಳಕೆಗೆ ಸ್ವಯಂ ಕಡಿವಾಣ ಹಾಕಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಸಹ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ. ಜೆ. ರಾಜು ಗುಂಡಾಪುರ ಮಾತನಾಡಿ, “ಜನಪದವಿಲ್ಲದೆ ನಮ್ಮ ಬದುಕಿಲ್ಲ. ಆದ್ದರಿಂದ, ಜಾನಪದ ಸಾಹಿತ್ಯಕ್ಕೆ ಎಂದೂ ಸಾವಿಲ್ಲ. ಅದನ್ನು ಯಾವ ತಂತ್ರಜ್ಞಾನವೂ ಅಳಿಸಲು ಸಾಧ್ಯವಿಲ್ಲ. ಹೊಸ ಹೊಸ ರೂಪದಲ್ಲಿ ಅದು ತನ್ನ ಅಸ್ತಿತ್ವ ಸ್ಥಾಪಿಸಿಕೊಂಡಿದೆ. ಕನ್ನಡದಲ್ಲಿ 55 ಗೀತಪದಗಳಿವೆ. 5 ಮಹಾಕಾವ್ಯಗಳಿವೆ. 85 ಖಂಡಕಾವ್ಯಗಳಿವೆ. ಇವುಗಳಲ್ಲಿ ಮಲೆಯ ಮಹದೇಶ್ವರ ಮತ್ತು ಮಂಟೇಸ್ವಾಮಿ ಮಹಾಕಾವ್ಯಗಳು ಜನಪದ ಧರ್ಮವನ್ನು ಕಟ್ಟಿವೆ. ಸಮಾಜದಲ್ಲಿನ ಶೂದ್ರ ವರ್ಗದವರು ಕಟ್ಟಿ ಬೆಳೆಸಿದ ಜನಪದಕ್ಕೆ ಅದೆಷ್ಟೇ ಶತಮಾನವಾದರೂ, ಅದಕ್ಕೆ ಅಳಿವಿಲ್ಲ” ಎಂದು ಹೇಳಿದರು.

ಅಸ್ಪೃಶ್ಯರಿಗೆ ಮೊದಲು ಅಕ್ಷರ ಜ್ಞಾನ ಕೊಟ್ಟ ತಲಕಾಡು ರಂಗೇಗೌಡರ ಮೊಮ್ಮಗ ಎನ್. ಹರ್ಷ, ಸಾಹಿತಿ ಟಿ. ಸತೀಶ್ ಜವರೇಗೌಡ, ಸಂಘಟಕ ಪೊತೇರ ಮಹದೇವ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಪೌರ ಕಾರ್ಮಿಕರಾದ ನಿತಿನ್ ಕುಮಾರ್, ಬಿ. ವೆಂಕಟೇಶ್, ಎಂ.ಜಿ. ರವಿಚಂದ್ರ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಈ ವಿಶೇಷ ಸುದ್ದಿ ಓದಿದ್ದೀರಾ? ಘನತೆಯ ಬದುಕಿಗಾಗಿ, ಸ್ವಾವಲಂಬಿ ಬೇಸಾಯದತ್ತ ಮುಖ ಮಾಡೋಣ

ಸಮಾರಂಭದಲ್ಲಿ ಟಿ ನರಸೀಪುರದ ರಾಮರೂಢ ಮಠದ ವೇದವತಿ ಮಾತಾಜಿ, ಸಂಘಟಕ ಪೊತೇರ ಮಹದೇವ, ಹೈಕೋರ್ಟ್ ವಕೀಲ ಕಾಳಯ್ಯ, ಮಳವಳ್ಳಿ ಸುಂದ್ರಮ್ಮ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷೆ ಮಳವಳ್ಳಿ ಪಿ. ನಾಗರತ್ನಮ್ಮ, ಆಕಾಶವಾಣಿ ಉದ್ಘೋಷಕ ಡಾ. ಮೈಸೂರು ಉಮೇಶ್, ನಿವೃತ್ತ ಉಪ ನಿರ್ದೇಶಕ ಜಯಪ್ರಕಾಶ್, ರಂಗಕರ್ಮಿ ಕಿರಣ್ ಗಿರ್ಗಿ, ಖ್ಯಾತ ಜನಪದ ಗಾಯಕ ಡಾ. ಮಳವಳ್ಳಿ ಮಹದೇವಸ್ವಾಮಿ, ಮೈಸೂರು ಗುರುರಾಜ್, ತಾಲ್ಲೂಕು ಕಸಾಪ ಅಧ್ಯಕ್ಷ ಎಲ್. ಚೇತನ್ ಕುಮಾರ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...