ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ, ಸ್ಥಗಿತ ಎಂಬುದು ಸುಳ್ಳು: ಲಕ್ಷ್ಮಿ ಹೆಬ್ಬಾಳ್ಕರ್​

Date:

  • ನೋಂದಣಿ ಕಾರ್ಯ ಸ್ಥಗಿತ ಆಗಿದೆ ಅಂತಾ ಕೇಳಿ ನನಗೆ ಆಶ್ಚರ್ಯ ಆಗಿದೆ
  • ‘ಸಾಮಾಜಿಕ ಜಾಲತಾಣ ನಿರ್ವಹಿಸುವವರ ವಿರುದ್ಧ​ ಕ್ರಮ ಆಗಲಿದೆ’

‘ಗೃಹಲಕ್ಷ್ಮೀ’ ಯೋಜನೆಯ ನೋಂದಣಿ ಕಾರ್ಯ ಸ್ಥಗಿತ ಆಗಿದೆ ಅಂತಾ ಕೇಳಿ ನನಗೆ ಆಶ್ಚರ್ಯ ಆಗಿದೆ. ತಕ್ಷಣ ಇಲಾಖೆ ಕಾರ್ಯದರ್ಶಿ, ನಿರ್ದೇಶಕರ ಕರೆದು ಮಾತನಾಡಿದ್ದು, ಅತಾಚುರ್ಯದಿಂದ ನಮ್ಮ ಇಲಾಖೆಯಿಂದ ಟ್ವೀಟ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ವಿಚಾರವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಸಾಮಾಜಿಕ ಜಾಲತಾಣ ನಿರ್ವಹಿಸುವವರ ವಿರುದ್ಧ​ ಕ್ರಮ ಆಗಲಿದೆ. ಏಕೆ ಆ ರೀತಿ ಆಯ್ತು ಗೊತ್ತಾಗುತ್ತಿಲ್ಲ. ಟ್ವೀಟ್​ ಸಂಬಂಧ ಎಲ್ಲರಿಗೂ ನೋಟಿಸ್​ ಜಾರಿ ಮಾಡಿದ್ದೇವೆ” ಎಂದರು.

ಗೃಹಲಕ್ಷ್ಮೀ ಯೋಜನೆಗೆ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಇಂದು ಟ್ವೀಟ್​ ಮಾಡಲಾಗಿತ್ತು. ಯೋಜನೆ ಸ್ಥಗಿತ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರವಾಗುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಇಲಾಖೆ ಅಧಿಕಾರಿಗಳು ಟ್ವೀಟ್ ಡಿಲೀಟ್​ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಪಾದಕರ ಬಾಯಿ ಬಡಿಯುವುದು ವಿಕಟ ವಿಡಂಬನೆ 

ನಿರಂತರವಾಗಿ ನಡೆಯುವ ಯೋಜನೆ

“ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ. ನಮ್ಮ ಇಲಾಖೆಯಿಂದ ಈಗಾಗಲೇ ಹಣ ವರ್ಗಾವಣೆ ಆಗಿದೆ. ಬ್ಯಾಂಕ್​ನಿಂದ ಮಾತ್ರ ಹಣ ಸ್ಲೋ ಆಗಿದೆ. ಇನ್ನು ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗುತ್ತದೆ. ನಿಧಾನವಾಗಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆಗುತ್ತಿದೆ. ಫಲಾನುಭವಿಗಳಿಗೆ ನಮ್ಮ ಇಲಾಖೆಯಿಂದ ಹಣ ಕಳುಹಿಸುತ್ತಿದ್ದೇವೆ. ಹೊಸದಾಗಿ ನೋಂದಣಿ ಮಾಡಿಕೊಂಡವರಿಗೂ ಲಾಭ ಸಿಗಲಿದೆ” ಎಂದು ಹೇಳಿದರು.

“1.8 ಕೋಟಿ ರೂ. ಅಕೌಂಟ್​​ಗೆ ಇಲ್ಲಿಯವರೆಗೆ ಹಣ ಡಿಬಿಟಿ ಪ್ರೊಸೆಸ್ ಆಗಿದೆ. ಅದರಲ್ಲಿ 63 ಲಕ್ಷ ರೂ. ಅಕೌಂಟ್​ಗೆ ಹಣ ತಲುಪಿ ಆಗಿದೆ. ಬ್ಯಾಂಕ್​ನಿಂದ ಮಾತ್ರ ಹಣ ನಿಧಾನ ಆಗಿದೆ. ನಮ್ಮಿಂದ ಹಣ ಈಗಾಗಲೇ ವರ್ಗಾವಣೆ ಆಗಿದೆ. ಸರ್ಕಾರದಿಂದ ಯಾವುದೇ ತೊಂದರೆ ಆಗಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣ ಇದೆ. ಇನ್ನೂ ನಾಲ್ಕೈದು ದಿನಗಳಲ್ಲಿ ಹಣ ಎಲ್ಲರಿಗೂ ವರ್ಗಾವಣೆ ಆಗಲಿದೆ. 1.28 ಕೋಟಿ ಯಜಮಾನಿಯರಿಗೆ ಹಣ ಹೋಗಲಿದೆ. ಹೊಸದಾಗಿ ನೋಂದಣಿ ಆದವರಿಗೂ ಯೋಜನೆ ಲಾಭ ಸಿಗಲಿದೆ” ಏಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...