ರಾಯಚೂರು | ಜಿಂದಾಲ್‌ಗೆ ಭೂಮಿ ಮಾರಾಟ: ರಾಜ್ಯ ಸರ್ಕಾರದಿಂದ ದ್ರೋಹ : ರಾಘವೇಂದ್ರ ಕುಷ್ಟಗಿ

Date:

ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಜಿಂದಾಲ್‌ಗೆ ಭೂಮಿ ಕಡಿಮೆ ಬೆಲೆ ಮಾರಾಟಕ್ಕೆ ಮುಂದಾಗಿರುವುದು ರಾಜ್ಯದ್ರೋಹದ ಕೆಲಸವಾಗಿದೆ. ಭೂಮಿಯನ್ನು ಮಾರಾಟ ಮಾಡುವ ಉದ್ದೇಶದ ಹಿಂದೆ ಕಾಂಗ್ರೆಸ್‌ ಹೈಕಮಾಂಡ್ ಸಹ ಭಾಗಿಯಾಗಿದೆ ಎಂದು ಜನಸಂಗ್ರಾಮ ಪರಿಷತ್ ಸಂಸ್ಥಾಪಕ ಆಧ್ಯಕ್ಷ ರಾಘವೇಂದ್ರ ಕುಷ್ಟಗಿ ಆರೋಪಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಭ್ರಷ್ಟಾಚಾರಿ, ಕೋಮುವಾದಿ ಬಿಜೆಪಿಯವರ ನಡೆಯನ್ನು ವಿರೋಧಿಸಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿ ಕಾಂಗ್ರೆಸ್ ಬೆಂಬಲಿಸಲಾಗಿತ್ತು. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಅಕ್ರಮ ಭೂಮಿ ಹಂಚಿಕೆ ಪ್ರಕರಣ, ಭ್ರಷ್ಟಾಚಾರ ಹೆಚ್ಚಾಗಿದೆ. ಸಮಾಜವಾದಿ ಸಿದ್ದಾಂತ ನಂಬಿದ್ದ ಸಿದ್ದರಾಮಯ್ಯ ಬದಲಾಗಿದ್ದಾರೆ ಎಂದು ಬೇಸರವಾಗುತ್ತಿದೆ” ಎಂದು ಹೇಳಿದರು.

ಬಿಜೆಪಿ ಸರ್ಕಾರ ಜಿಂದಾಲ್‌ಗೆ ಭೂಮಿ ನೀಡಲು ಮುಂದಾಗಿದ್ದಾಗ ಪ್ರತಿಪಕ್ಷ ನಾಯಕನಾಗಿ ವಿರೋಧಿಸಿದ್ದ ಸಿದ್ದರಾಮಯ್ಯನವರು ಸಚಿವ ಸಂಪುಟದ ತೀರ್ಮಾನ ಮೂಲಕ ಮಾರಾಟಕ್ಕೆ ಮುಂದಾಗಿರುವುದು ಖಂಡನೀಯ. ಜಿಂದಾಲ್‌ಗೆ ಕಡಿಮೆ ಬೆಲೆಯಲ್ಲಿ ಭೂಮಿ ನೀಡಿರುವುದರ ಹಿಂದೆ ಕಾಂಗ್ರೆಸ್ ನಾಯಕರ ಷಡ್ಯಂತ್ರ ಇರುವ ಸಂಶಯಗಳಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯನಗರ ಉಕ್ಕು ಕಾರ್ಖಾನೆಗೆ ಇಂದಿರಾಗಾಂಧಿ ಅವರು 10 ಸಾವಿರ ಎಕರೆ ಭೂಮಿಯನ್ನು ನೀಡಿದ್ದರು. ಅದು ಜಿಂದಾಲ್‌ಗೆ ನೀಡಲಾಗಿತ್ತು. ಈಗ ಅದೇ ಕಾಂಗ್ರೆಸ್ ಈಗ 3600 ಎಕರೆ ಭೂಮಿ ನೀಡಲು ಮುಂದಾಗಿದೆ. ಗೋಮಾಳ, ಸರ್ಕಾರಿ ಭೂಮಿ ಸೇರಿ ಎಲ್ಲವೂ ಬಾಗಿನ ರೂಪದಲ್ಲಿ ಜಿಂದಾಲ್‌ಗೆ ನೀಡಲು ಸರ್ಕಾರ ಮುಂದಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಜಿಂದಾಲ್ ಕಂಪನಿ ಬಾಲಬಡಕರಾಗಿರುವದು ಸ್ಪಷ್ಟವಾಗಿದೆ. ಕಡಿಮೆ ಬೆಲೆಯಲ್ಲಿ ಭೂಮಿ ನೀಡಲು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ದೊಡ್ಡಮಟ್ಟದಲ್ಲಿ ವ್ಯವಹಾರ ಮಾಡಿರುವ ಅನುಮಾನಗಳಿವೆ. ಸರ್ಕಾರದ ಕ್ರಮವನ್ನು ಖಂಡಿಸಿ, ಗಣಿಭಾದಿತರ ಬದುಕು ಮತ್ತು ಪರಿಸರ ಪುನಶ್ಚೇತನ ಸಂಕಲ್ಪ ಸಮಾವೇಶವನ್ನು ಸೆ.4 ರಂದು ಸಂಡೂರಿನ ಆದರ್ಶ ಸಮುದಾಯ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದರು.

ಇದನ್ನು ಓದಿದ್ದೀರಾ? ಶಿವಮೊಗ್ಗ | ಕೋಟೆಗಂಗೂರು: ಒಂದು ಶಾಲೆ, ಮೂರು ಕಟ್ಟಡ; 2 ಕಿಲೋ ಮೀಟರ್ ಅಂತರ!

ಕಾರ್ಯಕ್ರಮಕ್ಕೆ ಪತ್ರಕರ್ತ ಮತ್ತು ಪರಿಸರ ಹೋರಾಟಗಾರ ನಾಗೇಶ ಹೆಗ್ಡೆ ಚಾಲನೆ ನೀಡಲಿದ್ದಾರೆ. ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್.ಹೀರೆಮಠ ಭಾಗವಹಿಸಲಿದ್ದಾರೆ. ಎರಡು ಗೋಷ್ಠಿಗಳು ನಡೆಯಲಿದೆ. ಪತ್ರಕರ್ತ ಅಖಿಲೇಶ ಚಿಪ್ನಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ. ರಾಯಚೂರು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳ ಹೋರಾಟಗಾರರು ಭಾಗಿಯಾಗಲಿದ್ದಾರೆ. ಗೋಷ್ಠಿಯ ನಂತರ ಮುಂದಿನ ಹೋರಾಟದ ರೂಪರೇಷ ರೂಪಿಸಲಾಗುವುದು ಎಂದು ಜನಸಂಗ್ರಾಮ ಪರಿಷತ್ ಸಂಸ್ಥಾಪಕ ಆಧ್ಯಕ್ಷ ರಾಘವೇಂದ್ರ ಕುಷ್ಟಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ಜಾನವೆಸ್ಲಿ ಕಾತರಕಿ, ಖಾಜಾ ಅಸ್ಲಂ ಅಹ್ಮದ್, ಪರಪ್ಪ ನಾಗೋಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...