ಜಮೀನಿನ ಮೌಲ್ಯ ಪರಿಷ್ಕರಣೆಗೆ ಸರ್ಕಾರದ ಚಿಂತನೆ: ಸಚಿವ ಕೃಷ್ಣಭೈರೇಗೌಡ

Date:

  • ವಿರೋಧ ಪಕ್ಷದ ಸದಸ್ಯ ಮುನಿರಾಜೇಗೌಡ ಪ್ರಶ್ನೆಗೆ ಉತ್ತರ
  • ‘ರೈತರ ಭೂಮಿಗೆ ಮಾರುಕಟ್ಟೆ ಮೌಲ್ಯ ನಿಗದಿಗೆ ಅನುಕೂಲ’

ಸರ್ಕಾರಕ್ಕೆ ಮುದ್ರಾಂಕ ಶುಲ್ಕ ಪರಿಷ್ಕರಿಸುವ ಆಲೋಚನೆ ಇಲ್ಲ. ಆದರೆ, ರೈತರಿಗಾಗುತ್ತಿರುವ ಅನ್ಯಾಯ ತಡೆಯುವ ನಿಟ್ಟಿನಲ್ಲಿ ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ ನೀಡಿದರು.

ಬುಧವಾರದ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ವಿರೋಧ ಪಕ್ಷದ ಸದಸ್ಯ ಮುನಿರಾಜೇಗೌಡ ಅವರು, ಮುದ್ರಾಂಕ ಶುಲ್ಕ ಪರಿಷ್ಕರಣೆ ಬಗ್ಗೆ ಪ್ರಶ್ನಿಸಿದಾಗ ಸಚಿವರು ಉತ್ತರಿಸಿ, “ಮುದ್ರಾಂಕ ಶುಲ್ಕವನ್ನು ಪರಿಷ್ಕರಿಸುವ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಚನೆ ಇಲ್ಲ. ಆದರೆ ಜಮೀನಿನ ಮೌಲ್ಯ ಪರಿಷ್ಕರಣೆ ನಡೆಸಿ ಕನಿಷ್ಠ ನಾಲ್ಕು ವರ್ಷವಾಗಿದೆ. ಹೀಗಾಗಿ ಜಮೀನು ಮೌಲ್ಯ ಪರಿಷ್ಕರಣೆ ನಡೆಸಲಾಗುವುದು” ಎಂದರು.

ಮುಂದುವರೆದು, “ಜಮೀನಿನ ಮೌಲ್ಯ ಪರಿಷ್ಕರಣೆಯ ಆಧಾರದಲ್ಲಿ ರೈತರ ಭೂಮಿಗಳಿಗೆ ಮಾರುಕಟ್ಟೆ ಮೌಲ್ಯ ನಿಗದಿಯಾಗುತ್ತದೆ‌. ಆದರೆ, ಕಳೆದ ನಾಲ್ಕು ವರ್ಷದಿಂದ ಮೌಲ್ಯ ಪರಿಷ್ಕರಣೆಯಾಗದ ಕಾರಣ ರೈತರಿಗೆ ಅನ್ಯಾಯವಾಗುತ್ತಿದೆ. ರೈತರು ಜಮೀನು ಮಾರಾಟಕ್ಕೆ ಮುಂದಾಗುವಾಗ ಅವರಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಅಲ್ಲದೆ, ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಹಣದ ವಹಿವಾಟು ಅಧಿಕವಾಗಿದ್ದು ಕಪ್ಪು ಹಣ ಪರಿವರ್ತನೆಗೂ ಕಾರಣವಾಗಿದೆ. ಹೀಗಾಗಿ ಜಮೀನಿನ ಮೌಲ್ಯವನ್ನು ಶೀಘ್ರದಲ್ಲೇ ಪರಿಷ್ಕರಿಸಲಾಗುವುದು” ಎಂದು ಸ್ಪಷ್ಟನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಧಿವೇಶನ | ನೀರಾವರಿ ಇಲಾಖೆಯಿಂದ 4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ: ಡಿಕೆ ಶಿವಕುಮಾರ್

ಇದೇ ಸಂದರ್ಭದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದೂ ಪರಿಷತ್ ಸದಸ್ಯ ಮುನಿರಾಜೇಗೌಡ ಸದನದ ಗಮನ ಸೆಳೆದರು.

ಈ ಪ್ರಶ್ನೆಗೂ ಸೂಕ್ತ ಉತ್ತರ ನೀಡಿದ ಸಚಿವರು, “ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಅಧಿಕ ಸಂಖ್ಯೆಯಲ್ಲಿ ಜನ ಬರುವ ಕಾರಣ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ನಿರ್ವಹಣೆ ಸವಾಲಿನ ಕೆಲಸವಾಗಿದೆ. ಆದರೆ ಮುಂದಿನ ಒಂದು ವರ್ಷದಲ್ಲಿ ಎಲ್ಲ ಕಚೇರಿಗಳಲ್ಲೂ ಉತ್ತಮ ಜನಸ್ನೇಹಿ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಪಾಸ್‌ಪೋರ್ಟ್ ಕಚೇರಿಗಳ ಮಾದರಿಯಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲೂ ಉತ್ತಮ ಮೂಲಭೂತ ಸೌಲಭ್ಯ ನೀಡಲಾಗುವುದು” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...