SCSP/TSP ಅಡಿ ವಿಶ್ವವಿದ್ಯಾಲಯಗಳ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್: ಸಿದ್ದರಾಮಯ್ಯ

Date:

  • SCSP/TSP ಅಡಿ 230 ಕೋಟಿ ರೂ. ಒದಗಿಸುವಂತೆ ಅಧಿಕಾರಿಗಳಿ ಸೂಚನೆ
  • ಎಲ್ಲ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಲು ಕ್ರಮ

ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಎಸ್‌.ಪಿ.ಎಸ್.ಪಿ. / ಟಿ.ಎಸ್.ಪಿ. ಅಡಿ ಲ್ಯಾಪ್‌ ಟಾಪ್‌ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು.

ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸಭೆ ನಡೆಯುವಾಗಲೇ ದೂರವಾಣಿ ಮೂಲಕ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿವಿಗಳಲ್ಲಿರುವ ಎಲ್ಲ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಬೇಕಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಹೇಳಿದರು.

ರಾಜ್ಯದ ವಿವಿಗಳಲ್ಲಿ ಮಂಜೂರಾದ ಹುದ್ದೆಗಳ ಶೇ. 50 ಕ್ಕೂ ಹೆಚ್ಚು ಖಾಲಿ ಇದ್ದು, 1882 ಹುದ್ದೆಗಳಷ್ಟೇ ಭರ್ತಿಯಾಗಿವೆ. ವಿಶ್ವವಿದ್ಯಾಲಯಗಳ ಸಂಪನ್ಮೂಲದಿಂದಲೇ 2865 ಅತಿಥಿ ಉಪನ್ಯಾಸಕರಿಗೆ ವೇತನ ಭರಿಸುವ ಕಾರಣ, ಅವರಿಗೆ ಆರ್ಥಿಕ ಹೊರೆಯಾಗಿದೆ ಎಂಬುದನ್ನು ಕುಲಪತಿಗಳು ಮತ್ತು ಅಧಿಕಾರಿಗಳು ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ನಿವೃತ್ತಿ ವೇತನ ವಿತರಣೆಯಲ್ಲಿ ಹಳೆಯ ವಿವಿಗಳು ವಿಭಜನೆಯಾದರೂ ಹಳೆಯ ವಿವಿಗಳು ಮಾತ್ರ ನಿವೃತ್ತಿ ವೇತನ ಪಾವತಿಸುತ್ತಿದ್ದಾರೆ. ಇದರಿಂದ ಹಳೆಯ ವಿವಿಗಳ ಆರ್ಥಿಕ ಹೊರೆ ಹೆಚ್ಚಾಗಿದೆ. ಪ್ರಸಕ್ತ ಆಯವ್ಯಯದಲ್ಲಿ ಒಟ್ಟಾರೆಯಾಗಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ 5470 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, 2474 ಕೋಟಿ ರೂ. ಹೆಚ್ಚುವರಿ ಅನುದಾನದ ಅಗತ್ಯವಿದೆ ಎಂದು ಕುಲಪತಿಗಳು ಮುಖ್ಯಮಂತ್ರಿಗಳಿಗೆ ಸಮಸ್ಯೆ ಹೇಳಿಕೊಂಡರು.

ಆಯವ್ಯಯ ಹಂಚಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದ ನಾವು ಗುಣಮಟ್ಟದ ಶಿಕ್ಷಣವನ್ನು ನಿರೀಕ್ಷಿಸಲು ಹೇಗೆ ಸಾಧ್ಯ? ಇದಲ್ಲದೆ ಉನ್ನತ ಶಿಕ್ಷಣ ಇಲಾಖೆಯ ಆಯವ್ಯಯದಲ್ಲಿ ಶೇ. 88 ರಷ್ಟು ಅನುದಾನ ವೇತನಕ್ಕೆ ಬಳಕೆಯಾಗುತ್ತಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯು ಕೈಗಾರಿಕೋದ್ಯಮಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್‌ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...