ರಾಜಧಾನಿ ಸೇರಿ ವಿವಿಧ ಜಿಲ್ಲೆಗಳಲ್ಲಿ ʼಶಕ್ತಿ ಯೋಜನೆʼ ಜಾರಿಯ ಸಂಭ್ರಮ

Date:

ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರರು ಸೇರಿದಂತೆ) ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಏಕಕಾಲದಲ್ಲಿ ರಾಜ್ಯಾದ್ಯಂತ ಚಾಲನೆ ನೀಡಲಾಯಿತು.

ರಾಜ್ಯದ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ. ರಾಜಧಾನಿ ಮತ್ತು ವಿವಿಧ ಜಿಲ್ಲೆಗಳ ʼಶಕ್ತಿ ಯೋಜನೆʼ ಜಾರಿಯ ಸಂಭ್ರಮದ ಚಿತ್ರಗಳು ಇಲ್ಲಿವೆ.

ಶಕ್ತಿ ಯೋಜನೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದ ನಂತರ ವಿಧಾನಸೌಧದಿಂದ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ತೆರಳಿ ರಾಜ್ಯದ ವಿವಿಧ ಭಾಗಗಳಿಗೆ ತೆರಳುವ ಬಸ್‌ಗಳಿಗೆ ಚಾಲನೆ ನೀಡಿದರು.
ಶಕ್ತಿ ಯೋಜನೆ
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ ಉದ್ಘಾಟಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್‌ವರೆಗೆ ಬಸ್‌ ಪ್ರಯಾಣ ಮಾಡಿದರು
ಶಕ್ತಿ ಯೋಜನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಚೀಟಿ ನೀಡಿದ ಕ್ಷಣ 
ಶಕ್ತಿ ಯೋಜನೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಸ್‌ ನಿಲ್ದಾಣದಲ್ಲಿ ಮೀನುಗಾರಿಕೆ ಸಚಿವ ಮಂಕಾಳ್‌ ವೈದ್ಯ ಅವರು ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿಕೊಡುವ ಶಕ್ತಿ ಯೋಜನೆಗೆ ಚಾಲನೆ ನೀಡಿದರು
ಶಕ್ತಿ ಯೋಜನೆ
ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದರು
ಶಕ್ತಿ ಯೋಜನೆ
ತುಮಕೂರು ಬಸ್ ನಿಲ್ದಾಣದಲ್ಲಿ ಸಚಿವ ಡಾ. ಜಿ ಪರಮೇಶ್ವರ್‌ ಅವರು ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು
ಶಕ್ತಿ ಯೋಜನೆ
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಅವರು ಉಡುಪಿಯ ಬಸ್‌ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು
ಶಕ್ತಿ ಯೋಜನೆ
ಮಹಿಳೆಯರಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸುವ ರಾಜ್ಯ ಸರ್ಕಾರದ 'ಶಕ್ತಿ' ಯೋಜನೆಗೆ ಕೋಲಾರ ಜಿಲ್ಲೆಯ ಕೆಜಿಎಫ್ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಭಾನುವಾರ ಕೆಜಿಎಫ್ ಶಾಸಕಿ ರೂಪಕಲಾ ಚಾಲನೆ ನೀಡಿದರು.
ಶಕ್ತಿ ಯೋಜನೆ
ಬೆಳಗಾವಿ ಜಿಲ್ಲಾ ಉಸ್ತುವಾರಿ ಸತೀಶ್‌ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು.
ಶಕ್ತಿ ಯೋಜನೆ
ಮೈಸೂರು ಜಿಲ್ಲಾ ಉಸ್ತುವಾರಿ ಎಚ್‌ ಸಿ ಮಹದೇವಪ್ಪ ಅವರು ಮೈಸೂರಿನಲ್ಲಿ ಮಹಿಳೆಯರಿಗೆ ಸಿಹಿ ಹಂಚುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...