ರೈತರ‌‌ ಅನುಕೂಲಕ್ಕಾಗಿ ಏಕೀಕೃತ ಕರೆ ಕೇಂದ್ರಕ್ಕೆ ಚಾಲನೆ: ಸಚಿವ ಚಲುವರಾಯಸ್ವಾಮಿ

Date:

  • 1800-425-3553 ನೂತನ ಏಕೀಕೃತ ಸಹಾಯವಾಣಿ ಆರಂಭ
  • ಸಚಿವರಿಂದ ಭೀಮಾ ಪಲ್ಸ್ ತೊಗರಿ ಬೇಳೆ ಬ್ರಾಂಡ್ ಬಿಡುಗಡೆ

ಕೃಷಿಗೆ ಸಂಬಂಧಿತ ಮಾಹಿತಿ, ಸಲಹೆ ಮಾರ್ಗದರ್ಶನ‌ ಪಡೆಯಲು ಏಕೀಕೃತ ರೈತ ಕರೆ ಕೇಂದ್ರ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಕೃಷಿ ಇಲಾಖೆಯ ಕೃಷಿ ಆಯುಕ್ತಾಲಯದಲ್ಲಿ ರೈತ ಕರೆ ಕೇಂದ್ರ ಉದ್ಘಾಟಿಸಿ, ನಂತರ ಸಂಗಮ ಸಭಾಂಗಣದಲ್ಲಿ 2023-24 ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ಮಾಸ್ಟರ್ ತರಬೇತುದಾರರಿಗೆ ಏರ್ಪಡಿಸಿದ್ದ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸುವ ಮೂಲಕ ಭೀಮಾ ಪಲ್ಸ್ ತೊಗರಿ ಬೇಳೆ ಬ್ರಾಂಡ್ ಬಿಡುಗಡೆ ಮಾಡಿ ಮಾತನಾಡಿದರು.

“ಬೆಳೆ, ಹವಾಮಾನ, ವಿಮೆ, ರೈತ ವಿದ್ಯಾನಿಧಿ, ಕೃಷಿ ಸಂಜೀವಿನಿ, ಪಿಎಂ ಕಿಸಾನ್, ಕೆ‌ ಕಿಸಾನ್, ಬೆಳೆ ಸಮೀಕ್ಷೆ ಮತ್ತಿತರ ವಿಷಯಗಳಲ್ಲಿ ಉಪಯುಕ್ತ ಮಾಹಿತಿ, ಸಲಹೆ ಹಾಗೂ ಮಾರ್ಗದರ್ಶನಗಳನ್ನು ಸುಲಭವಾಗಿ ಒದಗಿಸುವುದು ಏಕೀಕೃತ ರೈತ ಕರೆ ಕೇಂದ್ರದ ಉದ್ದೇಶ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ವಿವಿಧ ಯೋಜನೆಗಳಿಗೆ ಇದ್ದ 8 ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಏಕೀಕೃತ ಕರೆ ಕೇಂದ್ರ ಸ್ಥಾಪಿಸಲಾಗಿದೆ
1800-425-3553 ನೂತನ ಏಕೀಕೃತ ಸಹಾಯವಾಣಿ ಕರೆ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ” ಎಂದು ಸಚಿವರು ವಿವರಿಸಿದರು.

“ಮಾಹಿತಿ ಹಾಗೂ ತಾಂತ್ರಿಕ ನೆರವಿನ ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೂ ಇಲಾಖೆ ಮುಂದಾಗಿದೆ ಇದರ ಅಂಗವಾಗಿ ಭೀಮಾ ಫಲ್ಸ್ ಎಂಬ ಬ್ರಾಡ್ ತೊಗರಿ ಬೇಳೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

“ರೈತರಿಗೆ ಸರ್ಕಾರದ ‌ಯೋಜನೆಗಳು ಸಮರ್ಪಕವಾಗಿ ತಲುಪಲು ಬೆಳೆ ಸಮೀಕ್ಷೆ ಕೂಡ ಪ್ರಮುಖ. ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆ ನಡೆಸುವವರಿಗೆ ತಾಂತ್ರಿಕ ಅರಿವು ಹಾಗೂ ಇತರ ಮಾಹಿತಿ ಅಗತ್ಯ. ಹೀಗಾಗಿ ರಾಜ್ಯ ಮಟ್ಟದಲ್ಲಿ ಬೆಳೆ ಸಮೀಕ್ಷೆ ಮಾಸ್ಟರ್ ತರಬೇತುದಾರರ ತರಬೇತಿ ಹಮ್ಮಿಕೊಳ್ಳಲಾಗಿದೆ. ಎಲ್ಲ ಅಧಿಕಾರಿ ಸಿಬ್ಬಂದಿ ಜವಾಬ್ದಾರಿಯಿಂದ ರೈತರ ಹಿತ ಗಮ‌ದಲ್ಲಿಟ್ಟು ಸಮೀಕ್ಷೆ ನಡೆಸಬೇಕು” ಎಂದು ಅವರು ಹೇಳಿದರು.

ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ಅನ್ಬುಕುಮಾರ್, ಕೃಷಿ ಇಲಾಖೆ ಆಯುಕ್ತ ವೈ ಎಸ್ ಪಾಟೀಲ್, ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ ಎಸ್ ರಮೇಶ್, ರೇಷ್ಮೆ ಅಭಿವೃದ್ಧಿ ಆಯುಕ್ತ ರಾಜೇಶ್ ಗೌಡ, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ನಿರ್ದೆಶಕ ಮಾಧುರಾಮ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...