ಉಡುಪಿ | ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ (ಕೋಟೇಶ್ವರ)ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೈತರು ಕೃಷಿಯಲ್ಲಿ ಆಧುನಿಕರಣ ಕಂಡುಕೊಳ್ಳಬೇಕು, ರೈತರು ಸುಖಿಯಾಗಿದ್ದಾಗ ಮಾತ್ರ ದೇಶ ಅಭಿವೃದ್ಧಿಯಾದಂತೆ ಎಂದು ಹೇಳಿದರು.

1005361446

ರೈತ ಸಂಪರ್ಕ ಕೇಂದ್ರಗಳು ರೈತರಿಗೆ ಅನುಕೂಲವಾಗಿದೆ. ಕೃಷಿಯ ಬಗ್ಗೆ ಅಧಿಕಾರಿಗಳು ರೈತರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸಲಹೆ ನೀಡಬೇಕು. ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕು, ಅಧಿಕಾರಿಗಳು ರೈತರು ಹಾಗೂ ಸರ್ಕಾರದ ಮಧ್ಯೆ ಕೊಂಡಿಯಾಗಿ ಕೆಲಸ ಮಾಡಬೇಕು, ರೈತರ ಮಿತ್ರರಾಗಿ ಕೆಲಸ ಮಾಡಬೇಕು ಎಂದು ಸಚಿವರು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಪರ ಸರ್ಕಾರ, ರೈತರ ಪರ ಕಾಳಜಿ ಹೊಂದಿರುವ ಸರ್ಕಾರ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ರೈತರ ಕೃಷಿ ಚಟುವಟಿಕೆ ನಿರಂತರವಾಗಿರುತ್ತದೆ. ಕೃಷಿ ಚಟುವಟಿಕೆ, ಕೃಷಿ ಸಲಕರಣೆಗಳು, ಸಬ್ಸಿಡಿ ಸಿಗುವ ಬಗ್ಗೆ ರೈತರಿಗೆ ಮಾಹಿತಿ ಸಿಗುವಂತಾಗಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮಾಹಿತಿ ಫಲಕ ಅಳವಡಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಭಾರತ ಕೃಷಿ ಪ್ರಧಾನವಾದ ದೇಶ, ಭಾರತದ ದೇಶ ಹಳ್ಳಿಗಳ ದೇಶ, ರೈತರ ದೇಶ, ನಮಗೆ ಕೃಷಿಯೇ ಪ್ರಧಾನವಾಗಿದೆ. ಅದಕ್ಕಾಗಿಯೇ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಜೈಜವಾನ್ ಜೈ ಕಿಶಾನ್ ಅಂತ ಕರೆಕೊಟ್ಟಿದ್ದರು.. ರೈತ ಸುಮ್ಮನೆ ಕುಳಿತರೆ ನಾವೆಲ್ಲರೂ ಉಪವಾಸ ಕೂರಬೇಕಾಗುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

1005361399

ಬ್ರಿಟಿಷರು ಸ್ವತಂತ್ರ ಕೊಟ್ಟು ಹೋಗುವಾಗ ನಮ್ಮ ಕೃಷಿಗೆ ಪೆಟ್ಟು ನೀಡಿಯೇ ಹೋದರು. ಭಾರತ ಮುಂಚೂಣಿಗೆ ಬರಬಾರದು ಅಂತ ಕೃಷಿ ಉತ್ಪನ್ನಗಳಿಗೆ ರಾಸಾಯನಿಕ ಬೆರಸಿಹೋಗಿದ್ದರು. ಆದರೆ, ನಮಗೆ ಕೃಷಿಯೇ ಪ್ರಧಾನವಾಗಿದೆ. ಕೃಷಿಯಿಂದಲೇ ನಾವು ವಿಶ್ವಗುರುವಿನ ಪಟ್ಟದತ್ತ ನಡೆಯುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ದೇವರ, ಜನರ ಆಶೀರ್ವಾದಿಂದ ಬದುಕುಳಿದಿರುವೆ

ಅಪಘಾತದಿಂದಾಗಿ ನಾನು ವಾಪಸ್ ಬರುತ್ತೀನಿ ಅಂತ ಅಂದುಕೊಂಡಿರಲಿಲ್ಲ. ಆ ದೇವರ, ಜನರ ಆಶೀರ್ವಾದಿಂದ ಬದುಕುಳಿದು, ನಿಮ್ಮ ಸೇವೆಗೆ ವಾಪಸ್ ಬಂದಿರುವೆ. ದೇವರು ದೊಡ್ಡವನು ಎನ್ನುತ್ತಾ ಸಚಿವರು ಗದ್ಗದಿತರಾದರು.

ಕಾರ್ಯಕ್ರಮದಲ್ಲಿ ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾದ ದಿನೇಶ್ ಹೆಗಡೆ, ಜಿಲ್ಲಾ ಕೆಡಿಪಿ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ, ಹರಿ ಪ್ರಸಾದ್ ಶೆಟ್ಟಿ, ಶಿವರಾಮ ಶೆಟ್ಟಿ, ವಿಕಾಸ ಹೆಗಡೆ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...