ಉಡುಪಿ | ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೈಂದೂರು ವಿಧಾನ ಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಅಭಿವೃದ್ಧಿ ಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿ ಗೆ ಎಲ್ಲರೂ ಕೈಜೋಡಿಸೋಣ ಎಂದರು.

ಬೈಂದೂರು ಕ್ಷೇತ್ರದಲ್ಲಿ ಮಾಜಿ ಶಾಸಕ ಗೋಪಾಲ್ ಪೂಜಾರಿ ಹಾಗೂ ಶಾಸಕ ಗುರುರಾಜ್ ಗಂಟಿಹೊಳೆ ಇಬ್ಬರು ಕ್ಷೇತ್ರದ‌ ದೃಷ್ಟಿಯಿಂದ ಯಾವುದೇ ರಾಜಕೀಯ ಇಲ್ಲದೆ, ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇದು ರಾಜಕಾರಣಿಗಳಿಗೆ ಬೇಕಿರುವ ಬದ್ಧತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1005877645

ಉಡುಪಿ ಜಿಲ್ಲೆ ಬುದ್ದಿವಂತರ, ‌ಸಂವೇದನಾ ಶೀಲತೆ ಹೊಂದಿರುವ ಜಿಲ್ಲೆ. ಅಧಿಕಾರಿಗಳು ಉಡುಪಿ ಜಿಲ್ಲೆಗೆ ಕೆಲಸ ಮಾಡಲು ಬರಬೇಕು ಅಂದರೆ ಎರಡ್ಮೂರು ಬಾರಿ ಯೋಚನೆ ಮಾಡುತ್ತಾರೆ.ಉಡುಪಿ ಜಿಲ್ಲಾ ಉಸ್ತುವಾರಿ ನನಗೆ ಸಿಕ್ಕಿದ್ದು, ಶ್ರೀಕೃಷ್ಣ ನ ಆಶೀರ್ವಾದ ಸಿಕ್ಕಂತಾಯಿತು.ಇದು ನನ್ನ ಸೌಭಾಗ್ಯ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್, ಬಡವರಿಗೆ ಕಡಿಮೆ ದುಡ್ಡಿನಲ್ಲಿ ಪೌಷ್ಟಿಕ ಆಹಾರ ನೀಡುವ‌ ಉದ್ದೇಶದಿಂದ ಈ ಕ್ಯಾಂಟೀನ್ ಆರಂಭಿಸಲಾಯಿತು. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ, ಇಷ್ಟು ಕಡಿಮೆ ದುಡ್ಡಿನ ಲ್ಲಿ‌ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

ಸಿದ್ದರಾಮಯ್ಯನವರ ಅಂದಿನ ಸರ್ಕಾರದಲ್ಲಿ ಅಕ್ರಮ ಸಕ್ರಮ ಜಾರಿಗೆ ತಂದು, ಜನರಿಗೆ ಹತ್ತಿರ ಆಗುವಂತ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಸಿಕ್ಕಂತ ಅವಕಾಶಗಳನ್ನು ಸೂಕ್ತ ವಾಗಿ ಬಳಸಿಕೊಂಡಿದ್ದೇವೆ. ರಾಜಕೀಯ ಅಷ್ಟು ಸುಲಭವಲ್ಕ, ಜನಸೇವೆಯೇ ಜನಾರ್ದನನ ಸೇವೆ ಅಂದುಕೊಂಡಿದ್ದೇವೆ, ವೈಯಕ್ತಿಕ ಕೆಲಸವನ್ನು ಪಕ್ಕಕ್ಕಿಟ್ಟು ಮಾಡುತ್ತಿದ್ದೇವೆ.‌ ಜನ ಪ್ರತಿನಿಧಿಗಳು ಜವಾಬ್ದಾರಿ ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು. ‌

1005877643

ಅಂಗನವಾಡಿ ಆರಂಭಗೊಂಡು ‌ಐವತ್ತು ವರ್ಷಗಳಾಯಿತು,ಇಂದಿರಾ ಗಾಂಧಿಯವರು ಶುರು ಮಾಡಿದರು, ಇದೇ ಅಕ್ಟೋಬರ್ ಎರಡನೇ ತಾರೀಖು ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಲಾಗುವುದು ಎಂದರು.

ವಿದ್ಯಾರ್ಥಿಗಳಿಗೆ ಕ್ಯಾಂಟೀನ್ ಊಟ ಕೊಡಿಸಿದ ಸಚಿವರು
ಕ್ಯಾಂಟೀನ್ ಉದ್ಘಾಟಿಸಿ ವಾಪಸ್ ತೆರಳುವ ವೇಳೆ ಸ್ವಾಗತಿಸಲು‌ ಸಾಲಾಗಿ ನಿಂತಿದ್ದ ವಿದ್ಯಾರ್ಥಿಗಳನ್ನು ಕಂಡ ಸಚಿವರು, ಮತ್ತೆ ಕಾರಿನಿಂದ ಕೆಳಗಿಳಿದು ಕ್ಯಾಂಟೀನ್ ಒಳಗೆ ಕರೆದೊಯ್ದು ಊಟ ನೀಡುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು. ಕಾರಿನಲ್ಲಿ ಕುಳಿತಾಗ ಸಚಿವರೊಂದಿಗೆ ಸೆಲ್ಫಿ‌ ಕ್ಲಿಕಿಸಿಕೊಳ್ಳಲು ಬಂದಾಗ, ಬನ್ನಿ ಕ್ಯಾಂಟೀನ್ ನಲ್ಲಿ ತಿಂಡಿ ತಿನ್ನಿ ಎಂದು ವಿದ್ಯಾರ್ಥಿನಿಯರನ್ನು ಕೈಹಿಡಿದು ಒಳಗೆ ಕರೆದುಕೊಂಡು ಬಂದರು.

ಸಮಾರಂಭದಲ್ಲಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕೊಡವೂರು,ಉದಯ್ ಕುಮಾರ್ ಶೆಟ್ಟಿ, ನಾಗರಾಜ್ ಗಾಣಿಗ, ಸದಾಶಿವ.ಡಿ, ಮೋಹನ್ ಪೂಜಾರಿ, ರಾಜು ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ಉಪ ವಿಭಾಗಧಿಕಾರಿ ರಶ್ಮಿ ಎಸ್.ಆರ್, ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಎಚ್.ರಾಮಚಂದ್ರಪ್ಪ, ಪಟ್ಟಣ ಪಂಚಾಯತ್ ಅಜಯ್ ಭಂಡಾರ್ಕರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...