ಉಡುಪಿ | ಇಂದಿರಾ ಗಾಂಧಿ ಆಡಳಿತ ಇಡೀ ವಿಶ್ವಕ್ಕೆ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಇಂದಿರಾ ಗಾಂಧಿ ನನ್ನ ಆದರ್ಶ, ನನ್ನಂತಹ ಲಕ್ಷಾಂತರ ಜನರಿಗೆ ಸ್ಫೂರ್ತಿಯ ಸೆಲೆ ಆಗಿದ್ದಾರೆ ಎಂದರು.

ಇಂದಿರಾ ಗಾಂಧಿಯವರ ರಾಜಕಾರಣ ಕೇವಲ ಮಹಿಳೆಯರಿಗಷ್ಟೇ ಅಲ್ಲದೆ, ಪುರುಷರಿಗೂ ಆದರ್ಶ. ಅವರ ನೇತೃತ್ವದಲ್ಲಿ ಭಾರತವು ಅಂತರಾಷ್ಟ್ರೀಯ ಮಟ್ಟದಲ್ಲಿ ಬಲಿಷ್ಠ ರಾಷ್ಟ್ರವಾಗಿ ಗುರುತಿಸಿಕೊಂಡಿತು. ಇಂದಿರಾಗಾಂಧಿ ದೇಶದ ಸ್ವಾವಲಂಬನೆಗಾಗಿ ಬ್ಯಾಂಕ್ ಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿ ಸೇರಿದಂತೆ ಅನೇಕ ಆರ್ಥಿಕ ಮತ್ತು ಸಾಂಸ್ಕೃತಿಕ ಸುಧಾರಣೆಗಳನ್ನು ಆರಂಭಿಸಿದರು ಎಂದು ಹೇಳಿದರು. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1007929215

ಒಂದು ಹೊತ್ತು ಊಟ ಮಾಡಲು ಕಷ್ಟ ಪಡುತ್ತಿದ್ದ ಕಾಲದಲ್ಲಿ ಭಾರತವನ್ನು ಮುನ್ನಡೆಸಿ, ಇಡೀ ವಿಶ್ವಕ್ಕೆ ಮಾದರಿಯಾದರು. ತ್ಯಾಗ ಬಲಿದಾನಕ್ಕೆ ಹೆಸರಾದ ಮಹಿಳೆ, ಅವರ ಅಡಳಿತ ನಮಗೆ ಸ್ಫೂರ್ತಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸೋಕೆ ಪ್ರತಿಯೊಬ್ಬ ಕಾರ್ಯಕರ್ತನ ಶ್ರಮ ಅಗತ್ಯ. ದೇಶ ಉಳಿಬೇಕು ಎಂದರೆ ಕಾಂಗ್ರೆಸ್ ಪಕ್ಷ ಉಳಿಬೇಕು, ಉಡುಪಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳಲ್ಲಿ ಸೋತರೂ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ. ದೇಶದ ಭವಿಷ್ಯ, ಮಕ್ಕಳ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷ ಅತ್ಯಗತ್ಯ ಎಂದು ಹೇಳಿದರು. ‌

ಸರ್ದಾರ್ ವಲ್ಲಭಭಾಯಿ ಪಟೇಲ್ ಅದರ್ಶ ಪುರುಷ
ಹರಿದು ಹಂಚಿ ಹೋಗಿದ್ದ ಭಾರತವನ್ನು ಒಂದುಗೂಡಿಸಿದ ಖ್ಯಾತಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ. ‌ಅಖಂಡ ಭಾರತ ನಿರ್ಮಾಣದಲ್ಲಿ ಅವರ ಪಾತ್ರ ದೊಡ್ಡದು ಎಂದರು.

1007929237

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜ್ಯೋತಿ ಹೆಬ್ಬಾರ್, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...