ಉಡುಪಿ | ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

Date:

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ.‌ ನೈತಿಕ ಅಧಿಕಾರ ಎಂದರೇನು?. ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು ನೀಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡುವ ಸಚಿವರಿಗೆ ನೈತಿಕತೆ ಇಲ್ಲ ಎಂಬ ಸುನೀಲ್ ಕುಮಾರ್ ಅವರ ಆರೋಪಕ್ಕೆ ಶನಿವಾರ ಪ್ರತಿಕ್ರಿಯಿಸಿದ ಸಚಿವರು, ಉಸ್ತುವಾರಿ ಸಚಿವೆಗೆ ನೈತಿಕತೆ ಇಲ್ಲ ಅಂದರೆ ಏನು. ಸುನೀಲ್ ಕುಮಾರ್ ಬಹಳ ಚಂದ ಮಾತುಗಾರರು, ಅವರನ್ನು ಅವರೇ ಬುದ್ಧಿವಂತ, ಸರ್ವಜ್ಞ ಎಂದು ತಿಳಿದುಕೊಂಡಿದ್ದಾರೆ. ಬೇರೆಯವರನ್ನು ದಡ್ಡರು ಎಂದು ತಿಳಿದುಕೊಂಡಿದ್ದಾರೆ ಎಂದು ಕಿಡಿ ಕಾರಿದರು‌.

ಸಚಿವರು ತಮ್ಮ ಇಲಾಖೆ ವ್ಯಾಪ್ತಿಗೆ
ಎಷ್ಟು ಅಂಗನವಾಡಿಗಳಿವೆ ಲೆಕ್ಕ ಕೊಡಿ ಎಂದು ಸುನೀಲ್ ಕುಮಾರ್ ಕೇಳಿದ್ದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 69,000 ಅಂಗನವಾಡಿ ಕಟ್ಟಡ ಇದೆ, 12,000 ಕಟ್ಟಡ ಬಾಡಿಗೆಯಲ್ಲಿದೆ. ಸುನೀಲ್ ಕುಮಾರ್ ಬಗ್ಗೆ ನಾನು ಎಲ್ಲಾ ಮಾತನಾಡಬೇಕಾ?. ನನ್ನ ಇಲಾಖೆ ಬಗ್ಗೆ ಕೇಳ್ತೀರಾ? ಬನ್ನಿ ನಿಮಗೆ ನಾನು ಎಲ್ಲಾ ಡೀಟೇಲ್ಸ್ ಕೊಡುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಅಂಗನವಾಡಿಗಳು ಎಷ್ಟಿವೆ. ಕಾರ್ಯಕರ್ತರು ಎಷ್ಟಿದ್ದಾರೆ ಎಲ್ಲಾ ನನಗೆ ಗೊತ್ತು. ಬಾಡಿಗೆ ಕಟ್ಟಡ ಎಷ್ಟು? ಸ್ವಂತ ಕಟ್ಟಡ ಎಷ್ಟು? ಹಳ್ಳಿಯಲ್ಲಿ ಎಷ್ಟಿದೆ! ಪೇಟೆಯಲ್ಲಿ ಎಷ್ಟಿದೆ ಎಷ್ಟು ಸೋರುತ್ತಿದೆ ಎಲ್ಲವೂ ಗೊತ್ತು. ನಿಮ್ಮ ಕ್ಷೇತ್ರದಲ್ಲಿ ಎಷ್ಟು ಇದೆ ಅನ್ನೋದು ಗೊತ್ತು ಎಂದರು‌.

  • ಪ್ರತಿಭಟನೆ ಸಂವಿಧಾನ ಬದ್ಧ ಹಕ್ಕು

ಪ್ರತಿಭಟನೆಗೆ ಪ್ರಾಮುಖ್ಯತೆ ಇದೆ, ವಿರೋಧ ಪಕ್ಷಕ್ಕೆ ಮಾಡಲು ಬೇರೆ ಕೆಲಸ ಇಲ್ಲ ಪ್ರತಿಭಟನೆ ಮಾಡಲಿ, ಜಿ ಎಸ್ ಟಿ ತರಲು ಆಗಿಲ್ಲ. ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅದರ ವಿರುದ್ಧ ಪ್ರತಿಭಟನೆ ಮಾಡಲಿ, ಅಸಮರ್ಥ ಸಂಸದರ ಬಗ್ಗೆ ಪ್ರತಿಭಟನೆ ಮಾಡಲಿ ಎಂದರು.

ನರೇಗಾ ಹಣ ಬಿಡುಗಡೆಯಾಗಿಲ್ಲ, ಅದರ ಬಗ್ಗೆ ಪ್ರತಿಭಟನೆ ಮಾಡಲು ಸಾಧ್ಯವೇ, ಜನರ ದಿಕ್ಕು ತಪ್ಪಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಪಕ್ಷದ ಆಂತರಿಕ ಕಚ್ಚಾಟಗಳನ್ನು ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ. ಇದು ಬಿಜೆಪಿಯ ಡ್ರಾಮಾ.‌ ಬಿಜೆಪಿಯ ಕಾರ್ಯಕರ್ತರೇ ಬೇಸತ್ತು ಹೋಗಿದ್ದಾರೆ. ಹೋದಲ್ಲಿ ಬಂದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.‌ ಜನರ‌ ದಿಕ್ಕು ತಪ್ಪಿಸಲು ಹೋರಾಟ, ಪ್ರತಿಭಟನೆ ಮಾಡಿ, ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.

ಸರ್ಕಾರ ಯಾರನ್ನು ಟಾರ್ಗೆಟ್ ಮಾಡುತ್ತಿಲ್ಲ

ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಗೆ ಬಾಗಲಕೋಟೆಗೆ ಮೂರು ತಿಂಗಳು ಬ್ಯಾನ್ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯಾವ ವಾಗ್ಮಿಗಳನ್ನು, ಭಾಷಣಕಾರರನ್ನು ನಾವು ಟಾರ್ಗೆಟ್ ಮಾಡುತ್ತಿಲ್ಲ‌. ಯಾವುದೇ ವಿಷಯಗಳು ವಿಷಯಧಾರಿತವಾಗಿರಬೇಕು, ವಿಷಯಾಂತರ ಆಗಬಾರದು ಎಂದರು‌.

ಸಮಾಜದ ಕೋಮು ಸೌಹಾರ್ದತೆ ಕೆಡಿಸಬಾರದು ಹಿತಾಸಕ್ತಿ ಕಾಪಾಡಬೇಕು. ವಿಷ ಬೀಜ ಬಿತ್ತಿ ಸಮಾಜ ಒಡೆಯಬಾರದು. ಅಂತವರ ವಿರುದ್ಧ ಕಾನೂನು ಕ್ರಮ ಆಗುತ್ತದೆ. ಶ್ರೀಕಾಂತ ಶೆಟ್ಟಿ ಹಿಂದಿನ ಭಾಷಣಗಳನ್ನು ತೆಗೆದು ನೋಡಬೇಕು. ಆಗ ಎಲ್ಲ ವಿಚಾರ ಅರಿವಾಗುತ್ತೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...