ವಿಜಯಪುರ | ಕುಷ್ಠ ರೋಗ ನಿರ್ಮೂಲನಾ ದಿನಾಚರಣೆ

Date:

ಕುಷ್ಟರೋಗವನ್ನು ಕಳಂಕವೆಂದು, ಆ ರೋಗಿಗಳನ್ನು ಮುಚ್ಚಿಸಿಕೊಳ್ಳಬಾರದೆಂಬ ಮೂಡನಂಬಿಕೆ ಜನರಲ್ಲಿ ತುಂಬಿಕೊಂಡಿದೆ. ಇಂತಹ ಅಪನಂಬಿಕೆಯ ವಿರುದ್ಧ ಅರಿವು ಮೂಡಿಸಲು ಅನೌಪಚಾರಿಕ ಶಿಕ್ಷಣ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಸಂಸ್ಥೆಯ ಮುಖಂಡ ಫಾದರ್ ಟಿಯೊಲ್ ಮಚಾದೊ ಹೇಳಿದ್ದಾರೆ.

ವಿಜಯಪುರದ ಮಹಾತ್ಮ ಗಾಂಧಿ ಕಾಲೋನಿಯಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆ ಮತ್ತು ನವಜೀವನ್ ಒಕ್ಕೂಟ ಆಯೋಜಿಸಿದ್ದ ಕುಷ್ಠ ರೋಗ ನಿರ್ಮೂಲನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. “ಕುಷ್ಟ ರೋಗಿಗಳು ಇಚ್ಛಾಸಕ್ತಿ ಇದ್ದರೆ ಏನೆಲ್ಲ ಮಾಡಬಹುದು ಎಂಬುದಕ್ಕೆ ಮಹಾತ್ಮ ಗಾಂಧಿ ಕಾಲೋನಿಯಲ್ಲಿದ್ದ ರೋಗಿಗಳೇ ನಿದರ್ಶನ. ಒಂದು ವರ್ಷದಲ್ಲಿ ಕುಷ್ಠ ರೋಗ ಪತ್ತೆ ಹಚ್ಚಲು 101 ಕ್ಯಾಂಪುಗಳನ್ನು ಮಾಡಿದ್ದೇವೆ. ಅದರಲ್ಲಿ ಬರಿ ಕುಷ್ಟರೋಗ ಮಾತ್ರವಲ್ಲದೆ, ಇತರ ಕಾಯಿಲೆಗಳನ್ನು ಕೂಡ ಪತ್ತೆಹಚ್ಚಲಾಗಿದೆ” ಎಂದರು.

“ಇವತ್ತಿನ ದಿನಮಾನಗಳಲ್ಲಿ ಬಿಪಿ, ಶುಗರ್ ಸಣ್ಣ ವಯಸ್ಸಿನಲ್ಲಿಯೇ ಕಾಣಿಸಿಕೊಳ್ಳುತ್ತಿದೆ. ನಮ್ಮ ಸಂಸ್ಥೆಯ ಸೇವಕರು ಇಂಥ ಹಲವಾರು ರೋಗಿಗಳ ಮಧ್ಯೆ ಸುಮಾರು 30 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಸರ್ಕಾರವು ಸಹಾಯ ಮಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಬಸವರಾಜ್ ಹುಬ್ಬಳ್ಳಿ, “ನಾವು ಬರೀ ನಮ್ಮ ಆಸ್ಪತ್ರೆಗೆ ಬಂದವರಿಗೆ ಮಾತ್ರ ಚಿಕಿತ್ಸೆ ಕೊಡುತ್ತೇವೆ. ಆದರೆ, ಸಂಸ್ಥೆಯು ಹಳ್ಳಿ ಹಳ್ಳಿಗೆ ಹೋಗಿ ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಿದೆ” ಎಂದರು.

ಕಾರ್ಯಕ್ರಮದಲ್ಲಿ ಫಾದರ್ ಫ್ಯಾನ್ಸಿಸ್ ಮೆನೆಜೆಸ್, ಡಾ. ಸಂಪತ್ ಗುಣಾರಿ, ಸಿಸ್ಟರ್ ಶಾಂತಿ, ಕರಿಷ್ಮಾ ಶಿಂದೆ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು, ಮಹಾತ್ಮ ಗಾಂಧಿ ಕಾಲೋನಿಯ ಎಲ್ಲಾ ಗಣ್ಯರು ಊರಿನ ಹಿರಿಯರು ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...