ಧರ್ಮಸ್ಥಳ ಪ್ರಕರಣ ಕೆದಕಿದ್ದಕ್ಕಾಗಿ ಸಿದ್ದರಾಮಯ್ಯ ಬೆಲೆ ತೆರಬೇಕಾಗುತ್ತದೆ: ವಿ. ಸೋಮಣ್ಣ

Date:

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು ಎಸ್‌ಐಟಿ ಬಂಧಿಸಿದ ಬೆನ್ನಲ್ಲೇ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, “ಧರ್ಮಸ್ಥಳ ಸಾವಿರಾರು ವರ್ಷ ಇತಿಹಾಸವಿರುವ ಪುಣ್ಯಕ್ಷೇತ್ರ. ಇದರ ವಿರುದ್ಧ ಮಾಡಿದ್ದ ಷಡ್ಯಂತ್ರ ಬಯಲಾಗಿದೆ. ಎಸ್‌ಐಟಿ ರಚಿಸಿದ್ದ ಸಿಎಂ ಸಿದ್ದರಾಮಯ್ಯನವರು ಪಾಪದ ಪ್ರಾಯಶ್ಚಿತ್ತಕ್ಕಾಗಿ ದಯವಿಟ್ಟು ಧರ್ಮಸ್ಥಳಕ್ಕೆ ಹೋಗಿ ಒಂದೆರಡು ದಿನ ಇರಬೇಕು” ಎಂದು ತಿಳಿಸಿದ್ದಾರೆ.

ತುಮಕೂರಿನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸೋಮಣ್ಣ, “ಧರ್ಮಸ್ಥಳದ ವಿಚಾರವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಗಿನಿಗೂಟ ಆಗಲಿದೆ. ಧರ್ಮಸ್ಥಳವು ಭಕ್ತರಿಗೆ ನೆಮ್ಮದಿ, ಶಾಂತಿ ಬದುಕುವ ಮಾರ್ಗ ಕೊಟ್ಟಿರುವ ಪವಿತ್ರ ಕ್ಷೇತ್ರ. ಒಂದಿಬ್ಬರು ಬುದ್ಧಿವಂತರು, ನಾನು ದೆಹಲಿಯಲ್ಲಿ ಧರ್ಮಸ್ಥಳದ ಮುಖ್ಯಸ್ಥರನ್ನು ಭೇಟಿ ಮಾಡಿ ಅವೆಲ್ಲವೂ ಫೇಕ್ ಅಂತ ಹೇಳಿದ್ದೆವು. ಸರ್ಕಾರ ನಮ್ಮ ಮಾತನ್ನು ನಂಬದೆ ಎಸ್‌ಐಟಿ ರಚಿಸಿತ್ತು. ಸಾಕ್ಷಿ ದೂರುದಾರನ ಬಂಧನದ ಬಳಿಕ ಈಗ ಎಲ್ಲವೂ ಬಯಲಾಗಿದೆ” ಎಂದು ತಿಳಿಸಿದ್ದಾರೆ.

“ಸತ್ಯ ಎಷ್ಟೇ ಕಹಿಯಾಗಿರಬಹುದು‌ ಸತ್ಯವಿರುತ್ತದೆ. ಸುಳ್ಳನ್ನು ಒಂದು ದೊಡ್ಡ ಕಂತೆಯನ್ನ ಮಾಡಿದ್ರು ಅದು ಸುಳ್ಳೇ. ಧರ್ಮಸ್ಥಳದಲ್ಲಿನ ಬೆಳವಣಿಗೆಯ ಬಗ್ಗೆ ಇಡೀ ವಿಶ್ವವೇ ನೋಡುವಂತಾಯಿತು. ಮಾಧ್ಯಮಗಳೂ ಕೂಡ ಇದರ ಬಗ್ಗೆ ಫೋಕಸ್ ಮಾಡಿತ್ತು. ಜನ ಅದನ್ನೇ ಫಾಲೋ ಮಾಡಬೇಕಾಗಿ ಬಂತು. ನಾವೆಲ್ಲರೂ ಕೂಡ ಅದನ್ನೇ ಸ್ವಾಗತ ಮಾಡಿದ್ದೆವು. ಆದರೆ, ಇಂತಹ ಪಾಪದ ಕೃತ್ಯ ಭಾರತ ದೇಶದಲ್ಲಿ ನಡೆದಾಗ ಮನ್ನಣೆ ಇರುವುದಿಲ್ಲ. ಸತ್ಯಕ್ಕೆ ದಾರಿಯನ್ನು ಭಾರತ ಮಾತೆ ತೋರಿಸ್ತಾಳೆ. ಈ ಪಾಪದ ಕೃತ್ಯಕ್ಕೆ ಯಾರಾದರೂ ಹೊಣೆಗಾರರಿದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ” ಎಂದು ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ಅವರು ಇದಕ್ಕೆ ಬೆಲೆ ತೆರಬೇಕಾಗುತ್ತದೆ. ಕೇವಲ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಕುಟುಂಬಕ್ಕೆ ಮಾತ್ರವಲ್ಲದೆ ಕೋಟ್ಯಂತರ ಭಕ್ತರಿಗೆ ನೋವಾಗಿದೆ. ಯಾರದ್ದೋ ಕೋಮುವಾದಿಗಳ, ಎಡಪಂಥೀಯರ ಮಾತನ್ನು ಕೇಳಿಕೊಂಡು ಕರ್ನಾಟಕ ಜನರ ಮನಸ್ಸನ್ನು ನೀವು ಕೆದಕಿದ್ದೀರಿ. ಇದೆಲ್ಲವನ್ನೂ ವ್ಯವಸ್ಥಿತವಾಗಿ ಮಾಡಿದ್ದಾರೆ. ಈ ನಾಟಕಕ್ಕೆ ತೆರೆ ಎಳೆಯುವ ಕಾಲ ಬಂದಿದೆ. ಇದು ಸಿದ್ದರಾಮಯ್ಯ ಅವರಿಗೂ ಮನವರಿಕೆಯಾಗಿದೆ” ಎಂದು ಸೋಮಣ್ಣ ತಿಳಿಸಿದರು.

ಇದನ್ನು ಓದಿದ್ದೀರಾ? ಧರ್ಮಸ್ಥಳ | ದೂರು ಕೊಟ್ಟಿದ್ದವನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

“ಸಿದ್ದರಾಮಯ್ಯ ಅವರೇ, ದಯವಿಟ್ಟು ಧರ್ಮಸ್ಥಳಕ್ಕೆ ಹೋಗಿ ಒಂದೆರಡು ದಿನ ಇದ್ದು ಬನ್ನಿ. ಪಾಪದ ಪ್ರಾಯಶ್ಚಿತ್ತಕ್ಕಾಗಿಯಾದರೂ ದರ್ಶನ ಮಾಡಿಕೊಂಡು ಬನ್ನಿ. ಇದರಿಂದ ನಿಮಗೂ ಮತ್ತು ರಾಜ್ಯಕ್ಕೂ ಒಳ್ಳೆಯದಾಗುತ್ತದೆ” ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...