ಬೀದರ್‌ | ಎದೆಗಿಳಿಯುವ ಸಾಹಿತ್ಯ ರಚನೆಯಾಗಲಿ : ಶಿವಕುಮಾರ ಶೀಲವಂತ

Date:

ಇಂದಿನ ಯುವಕರು ಯಾಂತ್ರಿಕ ಬದುಕಿನ ಕಡೆಗೆ ಹೆಚ್ಚು ವಾಲುತ್ತಿದ್ದಾರೆ. ತಾಳ್ಮೆ ಕಳೆದುಕೊಂಡು ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಯನ್ನು ಮರೆಯುತ್ತಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಕಳವಳ ವ್ಯಕ್ತಪಡಿಸಿದರು.

ಕರ್ನಾಟಕ ಸಾಹಿತ್ಯ ಸಂಘ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ಜರುಗಿದ ಬಹುಭಾಷಾ ಕವಿಗೋಷ್ಠಿ ಉದ್ಘಾಟನೆ ನೆರವೇರಿಸಿ ಮಾತನಾಡಿ, ʼನಾವು ರಚಿಸುವ ಸಾಹಿತ್ಯ ವ್ಯಕ್ತಿಯ ಎದೆಗಿಳಿದು ಬದುಕು ಪರಿವರ್ತನೆ ಆಗುವಂತಿರಬೇಕು. ಇಂದಿನ ಕವಿಗೋಷ್ಠಿಗಳಲ್ಲಿ ಅಂತಹ ಸಾಹಿತ್ಯ ಮಾರ್ದನಿಸಿದ್ದು ಶ್ಲಾಘನೀಯʼ ಎಂದರು.

ʼಇಂದಿನ ಕವಿಗೋಷ್ಠಿಯಲ್ಲಿ ಬದುಕು, ಕೇರಳದ ವಯನಾಡಿನ ಮಳೆಯ ರೌದ್ರನರ್ತನ, ಪರಿಸರ, ಸ್ವಾತಂತ್ರ್ಯ ಮುಂತಾದ ವಿಷಯಗಳ ಮೇಲೆ ಬೆಳಕು ಚೆಲ್ಲುವ ಗಟ್ಟಿ ಕವಿತೆಗಳು ಮೂಡಿ ಬಂದಿದ್ದವು ಎಂದರು. 18 ವರ್ಷ ಮೇಲ್ಪಟ್ಟ ಯುವಕ, ಯುವತಿಯರು ಗುರುತಿನ ಚೀಟಿ ನೋಂದಣಿ ಮಾಡಿಸಿಕೊಳ್ಳಬೇಕುʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಡಾ.ಜಗನ್ನಾಥ ಹೆಬ್ಬಾಳೆ ಪ್ರಾಸ್ತಾವಿಕವಾಗಿ ಮಾತನಾಡಿ, ʼಮನುಷ್ಯ ಮನುಷ್ಯನಂತೆ ಬದುಕಲು ಸಾಹಿತ್ಯ ಸಹಕಾರಿಯಾಗಿದೆ. ಮೊಬೈಲ್‌ಗಳಲ್ಲಿ ಮಗ್ನರಾದ ಇಂದಿನ ಯುವಕರು ಸಾಹಿತ್ಯದ ಅಭಿರುಚಿ ಕಳೆದುಕೊಳ್ಳುತ್ತಿದ್ದಾರೆ. ಆದರೆ ಸಾಹಿತ್ಯ ರಚನೆಯಿಂದ ಸಹಕಾರ, ಸಹಾನುಭೂತಿ, ಸಹಯೋಗ ಮತ್ತು ಪ್ರೀತಿ, ವಾತ್ಸಲ್ಯ ಮೂಡುತ್ತದೆ. ಕವಿತೆಗಳು ವಾಸ್ತವತೆಯನ್ನು ಜನರ ಮುಂದಿಡುತ್ತವೆ, ಸಮಾಜವ ತಿದ್ದುವ ಕೆಲಸ ಮಾಡುತ್ತವೆ. ಯುವಕರಿಗೆ ಸಾಹಿತ್ಯ ಕುರಿತು ಒಲವು ಹೆಚ್ಚಾಗಲಿ ಎನ್ನುವ ಉದ್ದೇಶದಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕವಿಗೋಷ್ಠಿ ಆಯೋಜಿಸಲಾಗಿದೆʼ ಎಂದರು.

WhatsApp Image 2024 08 13 at 7.37.12 PM

ಕವಿಗೋಷ್ಠಿಯಲ್ಲಿ ಮಹಿಳೆ, ಕೇರಳದ ವಯನಾಡಿನ ಅತಿವೃಷ್ಠಿ, ಆಗಸ್ಟ್ ಪಂದ್ರಾ, ನಮ್ಮನ್ನು ನಾವು ಪ್ರೀತಿಸಬೇಕು, ಆರ್.ವಿ.ಬಿಡಪ್ ಸಾಧನೆಗಳು, ಹೊಸ ನಿರ್ಭಯಾ ಎಂಬ ಕವಿತೆಗಳು ಮಾರ್ದನಿಸಿದವು. ಕವಿಗಳಾದ ಪ್ರೊ.ಎಸ್.ವಿ.ಕಲ್ಮಠ, ಭಾರತಿ ವಸ್ತ್ರದ್, ಡಾ. ಶ್ರೇಯಾ ಮಹಿಂದ್ರಕರ್, ರೂಪಾ ಪಾಟೀಲ, ಪುಷ್ಪ ಕನಕ, ಜಗದೇವಿ ದುಬಲಗುಂಡಿ, ಮಹಾರುದ್ರ ಡಾಕುಳಗಿ, ಅಸೃತ್ ಖಾದ್ರಿ, ಮಾರುತಿ ಭೀಮಣ್ಣ, ವೀರಶೆಟ್ಟಿ ಚೌಕನಪಳ್ಳಿ, ಡಾ. ಮಹಾದೇವಿ ಹೆಬ್ಬಾಳೆ, ಹಂಸಕವಿ, ಡಾ.ರಾಮಚಂದ್ರ ಗಣಾಪುರ, ಡಾ.ಮುಸ್ತಾಕಂ, ಮಲ್ಲಮ್ಮ ಸಂತಾಜಿ, ಡಾ.ಸಾವಿತ್ರಿ ಹೆಬ್ಬಾಳೆ ಸೇರಿದಂತೆ ಇನ್ನಿತರರು ಸ್ವರಚಿತ ಕವನ ವಾಚಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಒಳ್ಳೆಯ ಮನುಷ್ಯನಾಗಲು ಓದಿನ ಅಗತ್ಯವಿದೆ : ಡಾ.ಶಿವಾಜಿ ಮೇತ್ರೆ

ಸಮಾರಂಭದಲ್ಲಿ ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣವರ್, ಕರ್ನಾಟಕ ಸಾಹಿತ್ಯ ಸಂಘದ ಟ್ರಸ್ಟ್ ಅಧ್ಯಕ್ಷ ಶಂಕ್ರೆಪ್ಪ ಹೊನ್ನಾ, ಕಾರ್ಯಕ್ರಮದ ದಾಸೋಹಿ ಅಶೋಕ ಹೆಬ್ಬಾಳೆ, ಪ್ರಕಾಶ ಕನ್ನಾಳೆ ಉಪಸ್ಥಿತರಿದ್ದರು. ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಕಾರ್ಯದರ್ಶಿ ಡಾ.ರಾಜಕುಮಾರ ಹೆಬ್ಬಾಳೆ ಸ್ವಾಗತಿಸಿದರು. ಎಸ್.ಬಿ.ಕುಚಬಾಳ ನಿರೂಪಿಸಿದರು. ನಿಜಲಿಂಗಪ್ಪ ತಗಾರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...