ಕುಡಿಯುವ ನೀರಿಗಾಗಿಯಾದರೂ ಸರ್ಕಾರ ಹೋರಾಟ ಮಾಡಲಿ: ಬೊಮ್ಮಾಯಿ ಆಗ್ರಹ

Date:

  • ‘ವಾಸ್ತವದ ಆಧಾರದಲ್ಲಿ ಸುಪ್ರೀಂ ಕೋರ್ಟ್ ಸೂಚನೆ ನೀಡಬೇಕಿತ್ತು’
  • ‘ತಮಿಳುನಾಡು ಡ್ಯಾಮ್‌ಗಳಲ್ಲಿನ ನೀರಿನ ಮಟ್ಟ ಲೆಕ್ಕ ಹಾಕಬೇಕು’

15 ದಿನ ಸಿಡಬ್ಲುಎಂಎ ಆದೇಶ ಪಾಲನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿರುವುದು ದುರದೃಷ್ಟಕರ. ಮತ್ತೊಮ್ಮೆ ಕರ್ನಾಟಕ ತನ್ನ ವಸ್ತುಸ್ಥಿತಿಯನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಬೇಕಿದೆ. ಸಿಡಬ್ಲುಎಂಎ ಆದೇಶ ಅಂತಿಮವಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ಕಾವೇರಿ ವಿಚಾರದಲ್ಲಿ ತನಗೆ ಸಂಬಂಧ ಇಲ್ಲ ಎನ್ನುವುದು ಸರಿಯಲ್ಲ. ಕೇವಲ ಕರ್ನಾಟಕದ ಡ್ಯಾಮ್‌ಗಳ ನೀರಿನ ಮಟ್ಟ ಲೆಕ್ಕ ಹಾಕುವುದಲ್ಲ. ತಮಿಳುನಾಡು ಡ್ಯಾಮ್‌ಗಳಲ್ಲಿನ ನೀರಿನ ಮಟ್ಟವನ್ನೂ ಲೆಕ್ಕ ಹಾಕಬೇಕು” ಎಂದು ಆಗ್ರಹಿಸಿದರು.

“ಕಾವೇರಿ ವಿಚಾರದಲ್ಲಿ ಸುಪ್ರೀಂ ಕೊರ್ಟ್ ಎರಡು ರಾಜ್ಯಗಳ ವಾದ ಕೇಳಿ ಸಿಡಬ್ಲುಎಂಎ ಆದೇಶ ಎತ್ತಿ ಹಿಡಿದಿದೆ.
ಸಿಡಬ್ಲುಎಂಎ ಮೊದಲ ಆದೇಶ ಬಂದಾಗಲೇ ರಾಜ್ಯ ಸರ್ಕಾರ ಸುಪ್ರೀಂ ‌ಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸಬೇಕಿತ್ತು. ಸರ್ಕಾರ ಎರಡು ಬಾರಿ ನೀರು ಬಿಟ್ಟು ಈಗ ಸುಪ್ರೀಂ ಕೊರ್ಟ್ ಮುಂದೆ ಹೋಗಿದೆ. ಸುಪ್ರೀಂಕೋರ್ಟ್ ಸಂಪೂರ್ಣವಾಗಿ ಸಿಡಬ್ಲುಎಂಎ ಮೇಲೆ ಅವಲಂಬನೆ ಆಗಿದೆ. ಸಿಡಬ್ಲುಆರ್‌ಸಿ, ಸಿಡಬ್ಲುಎಂಎ ಎರಡೂ ಧೋರಣೆ ಸರಿಯಿಲ್ಲ. ಸಿಡಬ್ಲುಎಂಎ ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ನೋಡಬೇಕು. ಕೇವಲ ಅಂಕಿ ಅಂಶಗಳನ್ನು ಇಟ್ಟುಕೊಂಡು ಆದೇಶ ಮಾಡುತ್ತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರಿಂದ ಆಡಳಿತ: ಕುಮಾರಸ್ವಾಮಿ ಕಿಡಿ

ಕುಡಿಯುವ ನೀರಿಗಾಗಿ ಹೋರಾಟ ಮಾಡಲಿ

“ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಹೇಳಿದೆ. ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ. ಅದನ್ನು ಸುಪ್ರೀಂಕೋರ್ಟ್ ಗಮನಕ್ಕೆ ತರಬೇಕು. ರಾಜ್ಯ ಸರ್ಕಾರ ಕೇವಲ ನಮ್ಮಲ್ಲಿ ನೀರಿಲ್ಲ ಅಂತ ಹೇಳುವುದಷ್ಟೇ ಅಲ್ಲ. ಬೆಂಗಳೂರು ಒಂದು ಅಂತಾರಾಷ್ಟ್ರೀಯ ನಗರ ಇಲ್ಲಿ ಎಲ್ಲ ಭಾಗದ ಜನರು ಬರುತ್ತಾರೆ. ಬೆಂಗಳೂರಿಗೆ ಕುಡಿಯಲು ಪ್ರತ್ಯೇಕವಾಗಿ ನೀರು ಇಟ್ಟಿದ್ದಾರೆ. ಅದನ್ನು ಸುಪ್ರೀಂ ಕೋರ್ಟ್ ಮುಂದೆ ವಾದ ಮಾಡಬೇಕು” ಎಂದು ಹೇಳಿದರು.

ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಲಿ

“ತಮಿಳುನಾಡಿಗೆ ನವೆಂಬ‌ರ್‌ನಲ್ಲಿ ಮತ್ತೊಂದು ಹಿಂಗಾರು ಮಳೆ ಬರುತ್ತದೆ. ಆದರೆ, ಕರ್ನಾಟಕಕ್ಕೆ ಮುಂಗಾರು ಮುಗಿಯುವ ಹಂತದಲ್ಲಿದೆ. ಇದೆಲ್ಲವನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಬೇಕು. ಕುಡಿಯುವ ನೀರಿಗಾಗಿಯಾದರು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಹೋರಾಟ ಮಾಡಬೇಕು. ಇದರಲ್ಲಿ ನಮಗೆ ರಾಜಕಾರಣ ಮಾಡಲು ಇಷ್ಟ ಇಲ್ಲ. ಈಗಾಗಲೇ ರೈತರ ಬೆಳೆ ಒಣಗಿ ಹೋಗುತ್ತಿದೆ. ರಾಜ್ಯ ಸರ್ಕಾರ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...