ಚಿಕ್ಕಮಗಳೂರು | ಜನರ ನೋವಿಗೆ ಮಾಧ್ಯಮ ದನಿಯಾಗಲಿ : ಭರತ್‌ ಹೆಬ್ಬಾಳ

Date:

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರು ರುದ್ರಮುನಿಶ್ವರ ಕಲ್ಯಾಣ ಮಂಟಪದಲ್ಲಿ ಈದಿನ.ಕಾಮ್ʼ ಮಾಧ್ಯಮ ಸಂಸ್ಥೆಯು ಎರಡು ವರ್ಷ ಪೂರೈಸಿದ ಹಿನ್ನಲೆ ಆಯೋಜಿಸಿದ್ದ ʼಈದಿನ ಸಮಾಗಮ ಹಾಗೂ ಮಲೆನಾಡಿನ ಬಿಕ್ಕಟ್ಟುಗಳುʼ ಕುರಿತು ವಿಶೇಷ ʼಸಮಾಗಮʼ ಕಾರ್ಯಕ್ರಮ ಜರುಗಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ʼಈದಿನ.ಕಾಮ್ʼ ಮಾಧ್ಯಮದ ಸಂಪನ್ಮೂಲ ವ್ಯಕ್ತಿ ಭರತ್ ಹೆಬ್ಬಾಳ ಮಾತನಾಡಿ, ʼಸಮಾಜದಲ್ಲಿ ನೊಂದ, ನಿರ್ಗತಿಕ, ದೀನ ದಲಿತರ ಸಮಸ್ಯೆಗಳಿಗೆ ಮುಕ್ತಿಗೊಳಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸಮಾಜಮುಖಿ ಪತ್ರಿಕೋದ್ಯಮ ನಡೆಸಲು ನಾವು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇವೆ. ಕಳೆದ ಚುನಾವಣೆಗಳಲ್ಲಿ ಕರಾರುವಕ್ಕಾಗಿ ಸಮೀಕ್ಷೆ ನಡೆಸುವ ಮೂಲಕ ದೇಶದ ಗಮನ ಸೆಳೆದಿದ್ದೇವೆ ಎಂದರು. ಈದಿನ ಮಾಧ್ಯಮದ ಮುಂದಿನ ಕಾರ್ಯಗಳೇನು ಹಾಗೂ ಜನರಭಾಗಿತ್ವ ನಮ್ಮೊಂದಿಗೆ ಹೇಗಿರಬೇಕುʼ ಎಂದು ಮಾಹಿತಿ ನೀಡಿದರು.

ಈದಿನ ಕೇಂದ್ರೀಯ ಸಂಯೋಜಕ ಸಂತೋಷ್ ಎಚ್.ಎಂ ಮಾತನಾಡಿ, ʼಈದಿನʼ ಮಾಧ್ಯಮ ಎಂಬುದು ನಾಗರಿಕ ಪತ್ರಕರ್ತರನ್ನು ಹುಟ್ಟು ಹಾಕುವ ಮೂಲಕ ಜನರ ಕುಂದು ಕೊರತೆಗಳಿಗೆ ಜನರೇ ಸುದ್ದಿ ಬರೆಯುವಂತೆ ಪ್ರೇರಣೆ ನೀಡಿ ಪ್ರೋತ್ಸಾಹಿಸುವ ವಿಶಿಷ್ಟ ಮಾಧ್ಯಮವಾಗಿದೆ. ಈದಿನ ಮಾಧ್ಯಮ ಮತ್ತಷ್ಟು ಗಟ್ಟಿಗೊಳಿಸಲು ಈ ಭಾಗದಲ್ಲಿ ಹೆಚ್ಚಿನ ನಾಗರಿಕ ಪತ್ರಕರ್ತರ ಅಗತ್ಯವಿದೆ. ಇದು ಒಂದು ಸಂಸ್ಥೆಯಲ್ಲದೇ ಜನರೇ ರೂಪಿಸಿಕೊಂಡ ಮಾಧ್ಯಮವಾಗಿದ್ದು, ಇದಕ್ಕೆ ನಿಮ್ಮೆಲ್ಲರ ಸಹಕಾರ ಮುಖ್ಯವಾಗಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 01 at 3.08.10 PM
ಸಮಾಗಮದಲ್ಲಿ ವಿವಿಧ ತಾಲೂಕಿನ 60ಕ್ಕೂ ಹೆಚ್ಚಿನ ʼಈದಿನʼ ನಾಗರಿಕ ಪತ್ರಕರ್ತರು ಪಾಲ್ಗೊಂಡಿದ್ದರು.

ಮಲೆನಾಡಿನ ಬಿಕ್ಕಟ್ಟುಗಳು ಹಾಗೂ ಸಮಸ್ಯೆಗಳಿಗೆ ಮಾಧ್ಯಮ ಸ್ಪಂದಿಸಬೇಕು ಕುರಿತು ಪರಿಸರವಾದಿ
ಡಾ.ಕಲ್ಕುಳಿ ವಿಠಲ ಹೆಗ್ಡೆ ಅವರು ವಿಸ್ತ್ರತವಾಗಿ ವಿವರಿಸಿದರು. ಮಲೆನಾಡಿನ ಪ್ರತಿ ತಾಲೂಕು, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳ ಗಮನಕ್ಕೆ ಬರುವಂತೆ ಪ್ರಕಟಿಸಬೇಕು ಎಂದು ತಿಳಿಸಿದರು.

ಈದಿನ ಚಿಕ್ಕಮಗಳೂರು ಜಿಲ್ಲಾ ಸಂಯೋಜಕಿ ಗಿರಿಜಾ ಎಸ್.ಜಿ ಪ್ರಾಸ್ತಾವಿಕವಾಗಿ ಮಾತಾಡಿದರು. ಸಮಾಗಮದಲ್ಲಿ ಭಾಗವಹಿಸಿದ ಈದಿನ ಮಾಧ್ಯಮ ಓದುಗರು ತಮ್ಮ ಅಭಿಪ್ರಾಯ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅತ್ಯಾಚಾರ : 17 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರ್ಯಕ್ರಮದಲ್ಲಿ ಲೇಖಕ ಗುರುಮೂರ್ತಿ ಜೋಗಿಬೈಲು, ರೈತ ಸಂಘಟನೆ ಹಿರಿಯ ಮುಖಂಡ ಸುರೇಶ್ ಭಟ್ರು , ಹಿರಿಯ ಪತ್ರಕರ್ತ ಯಜ್ಞಾಪುರುಷ ಭಟ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಎಂಟು ತಾಲ್ಲೂಕಿನ ಪತ್ರಕರ್ತರು, ಬರಹಗಾರರು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪರಿಸರ ಪ್ರೇಮಿಗಳು ಭಾಗವಹಿಸಿದ್ದರು. ಈದಿನ ಜೋನಲ್‌ ಸಂಯೋಜಕ ಮುಹಮ್ಮದ್ ಶಾರೂಖ್ ನಿರೂಪಿಸಿ, ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...