ಹೊಸ ಸರ್ಕಾರದ ಯಾವುದೇ ತನಿಖೆಗೂ ನಾವು ಸಿದ್ಧ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Date:

  • ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಹಗರಣದ ಬಗ್ಗೆ ತನಿಖೆಗೆ ಸಿಎಂ ಆದೇಶ
  • ತನಿಖೆ ಪಾರದರ್ಶಕವಾಗಿರಲಿ, ತನಿಖೆ ಕಾಮಗಾರಿಗೆ ಅಡ್ಡಿ ಆಗಬಾರದು: ಬೊಮ್ಮಾಯಿ

ಹೊಸ ಸರ್ಕಾರ ನಮ್ಮ ಬಗ್ಗೆ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ಧ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಬೆಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, “ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

“ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಇರಲಿ. ಯಾವುದೇ ತನಿಖೆ ಮಾಡಬಹುದು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಐಡಿ ತನಿಖೆ ಮಾಡಬಹುದು ಅಂತ ನಾನೇ ಹಿಂದೆ ದೂರು ನೀಡಿದ್ದೆ. ಚುನಾವಣಾ ನೀತಿ ಸಂಹಿತೆ ಇದ್ದ ಹಿನ್ನೆಲೆ ಎಫ್‌ಐಆರ್ ಆಗಿರಲಿಲ್ಲ. ತನಿಖೆ ಪಾರದರ್ಶಕವಾಗಿರಲಿ. ತನಿಖೆ ಕಾಮಗಾರಿಗೆ ಅಡ್ಡಿ ಆಗದಿರಲಿ. ಟಾರ್ಗೆಟ್ ಮಾಡಿ ಕಾಮಗಾರಿ ಬದಲಾವಣೆ ಮಾಡುವ ದುರುದ್ದೇಶ ಆಗಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಠ್ಯ ಪುಸ್ತಕ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, “ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ವಿಚಾರಗಳ ಆಧಾರದ ಮೇಲೆ ಕೆಲವು ಹೊಸದಾಗಿ ಪಠ್ಯಗಳನ್ನು ಪರಿಚಯ ಮಾಡಿದ್ದೆವು. ಅವರು ಅದೇ ಜಾಡನ್ನು ಹಿಡಿದು ಹೊಸ ಸಮಿತಿ ಮಾಡಲು ಹೊರಟಿದ್ದಾರೆ. ಇದಕ್ಕೆ ಸಮಾಜವೇ ಪ್ರತಿಕ್ರಿಯೆ ನೀಡಲಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಪೋಷಕರು ಗಮನಿಸುತ್ತಿದ್ದಾರೆ. ಪಠ್ಯ ಪದೇ ಪದೆ ಬದಲಾವಣೆಯಿಂದ ಮಕ್ಕಳಿಗೆ ಸಮಸ್ಯೆ ಆಗಬಾರದು. ಜವಾಬ್ದಾರಿಯುತ ಸರ್ಕಾರ ಏನು ಮಾಡಲಿದೆ ನೋಡೋಣ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಗ್ಯಾರಂಟಿ ಮತ್ತು ಉಳ್ಳವರ-ಉಂಡವರ ವಿಕೃತಿ

“ಎನ್.ಇ.ಪಿ ಮೂಲಕ ಈಗ ಮಕ್ಕಳು ಅಧ್ಯಯನ ಶುರು ಮಾಡಿದ್ದಾರೆ. ಎನ್.ಇ.ಪಿ ಮಾಡುವಾಗಲೇ ಸಮಿತಿ ಮಾಡಿ, ರಾಜ್ಯದ ಅಭಿಪ್ರಾಯ ತೆಗೆದುಕೊಳ್ಳಲಾಗಿದೆ. ಎಲ್ಲಾ ತಜ್ಞರ ಅಭಿಪ್ರಾಯ ಪಡೆದು ಎನ್.ಇ.ಪಿ ಜಾರಿಗೆ ತರಲಾಗಿದೆ” ಎಂದರು.

“ಉಚಿತ ಯೋಜನೆಗಳ ಬಗ್ಗೆ ನಿನ್ನೆ ಸಿಎಂ ಸಭೆ ಮಾಡಿದ್ದಾರೆ. ಸುದೀರ್ಘ ಸಭೆಯಲ್ಲಿ ಏನಾಗಿದೆ ಗೊತ್ತಿಲ್ಲ. ಎಲ್ಲ ಉಚಿತ ನೀಡಿದರೆ, ಅಭಿವೃದ್ಧಿ ಕಾರ್ಯ ಕುಂಠಿತ ಆಗಲಿದೆ. ಎಲ್ಲರಿಗೂ ಸಿಗುತ್ತದೆ ಅಂತ ಮೊದಲು ಆಶ್ವಾಸನೆ ನೀಡಿದ್ದಾರೆ. ಅತ್ತೆಗೋ, ಸೊಸೆಗೋ ಅಂತ ಮೊದಲು ಹೇಳಿರಲಿಲ್ಲ. ಏನು ಮಾಡಲಿದ್ದಾರೆ ಅಂತ ಕರ್ನಾಟಕದ ಜನತೆಗೆ ಕಾಡುತ್ತಿದೆ. ಒಂದನೇ ತಾರೀಖು ಕ್ಯಾಬಿನೆಟ್ ಇದೆ. ಅಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಆರ್ಥಿಕವಾಗಿ ಕಷ್ಟ ಅನ್ನುವುದು ಮೇಲ್ನೋಟಕ್ಕೇ ಗೊತ್ತಾಗುತ್ತಿದೆ. ಜನರನ್ನು ಯಾಮಾರಿಸಿ ಗೆಲ್ಲಬೇಕು ಅಂತ ಮಾಡಿದ್ದಾರೆ. ಜನ ಈಗ ಅಧಿಕಾರ ಕೊಟ್ಟಿದ್ದಾರೆ. ಏನು ಮಾಡುತ್ತಾರೆ ಕಾದು ನೋಡೋಣ” ಎಂದು ತಿಳಿಸಿದದರು.

“ಫ್ರೀ ಯೋಜನೆ ಘೋಷಣೆ ಜಾರಿ ಮಾಡದೆ ಇದ್ದರೆ ಕೆಲವರು ಕಾನೂನು ಹೋರಾಟ ಮಾಡಲಿದ್ದಾರೆ ಎನ್ನುವ ಎಚ್ಚರಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದವರೇ ಈ ರೀತಿ ಹೋರಾಟ ಮಾಡೋದಕ್ಕೆ ಹೇಳಿ, ಕೋರ್ಟ್ ನಲ್ಲಿ ಫ್ರೀ ಯೋಜನೆಗೆ ತಡೆ ತರುವ ತಂತ್ರ ಇದ್ದರೂ ಇರಬಹುದು. ಹೇಳಲಿಕ್ಕೆ ಆಗುವುದಿಲ್ಲ” ಎಂದು ಬಸವರಾಜ ಬೊಮ್ಮಾಯಿ‌ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...