ಬೀದರ್‌ | ಕಂದಾಯ ಇಲಾಖೆ ಸರ್ಕಾರಿ ಆಸ್ತಿ ರಕ್ಷಣೆಗೆ ಮುಂದಾಗಲಿ: ಓಂಪ್ರಕಾಶ ರೊಟ್ಟೆ

Date:

  • ಕಂದಾಯ ಅಧಿಕಾರಿಗಳಿಂದ ಸಾರ್ವಜನಿಕರು ಹಲವು ಸಮಸ್ಯೆಗಳು ಎದುರಿಸುತ್ತಿದ್ದಾರೆ.
  • ರಾಜ್ಯದ ಸರ್ಕಾರಿ ಇಲಾಖೆಗಳ ನಿವೇಶನವನ್ನು ಸರ್ವೆ ನಡೆಸಿ ಆಸ್ತಿ ಕಾಪಾಡಬೇಕು

ಸರ್ಕಾರದ ಆಸ್ತಿಗಳನ್ನು ಸಾರ್ವಜನಿಕರ ಪಾಲಾಗದಂತೆ ತಡೆಗಟ್ಟಲು ಕಂದಾಯ ಇಲಾಖೆ ಕೂಡಲೇ ಕ್ರಮ ಕೈಗೊಳ್ಳುವಂತೆ ವಿಶ್ವಕ್ರಾಂತಿ ದಿವ್ಯಪೀಠ ಟ್ರಸ್ಟ್‌ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಆಗ್ರಹಿಸಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಬೀದರ್‌ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರು ನಿಗದಿತ ಸ್ಥಳದಲ್ಲಿ ವಾಸ ಮಾಡದ ಕಾರಣ ಸಾರ್ವಜನಿಕರು ಹಲವು ಸಮಸ್ಯೆಗಳು ಎದುರಿಸುತ್ತಿದ್ದಾರೆ. ಭೂ ದಾಖಲೆ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಕಂದಾಯ ಇಲಾಖೆ ಅಧಿಕಾರಿಗಳನ್ನು ಹುಡುಕಲು ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಅಧಿಕಾರಿಗಳು ಎಲ್ಲಿ ಸಿಗುತ್ತಾರೆ ಎಂಬುದು ನಿಖರವಾಗಿಲ್ಲ, ಇನ್ನು ಕರೆ ಮಾಡಿದರೆ ಸರಿಯಾಗಿ ಸ್ಪಂದಿಸುವುದಿಲ್ಲ, ರೈತರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಸರ್ಕಾರ ಕಂದಾಯ ಇಲಾಖೆಯ ಸದರಿ ಅಧಿಕಾರಿಗಳಿಗೆ ನಿಗದಿತ ಸ್ಥಳ ಗೊತ್ತುಪಡಿಸಿ ಸಾರ್ವಜನಿಕರ ಹಿತ ಕಾಪಾಡಬೇಕೆಂದು” ಅವರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ರೈತರಿಗೆ ಬರಗಾಲದ ದಿಗಿಲು; ಅಧಿಕಾರಿಗಳಿಗೆ ಪರಿಹಾರದ ಫಸಲು!

“ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಇಲಾಖೆಗಳ ನಿವೇಶನವನ್ನು ಸರ್ವೆ ನಡೆಸಿ ಸರ್ಕಾರದ ಆಸ್ತಿ ಕಾಪಾಡಬೇಕು. ಸರ್ಕಾರಿ ಖಾಲಿ ನಿವೇಶನ ಹಾಗೂ ಕಟ್ಟಡಗಳಿಗೆ ಸುತ್ತುಗೋಡೆ ನಿರ್ಮಿಸಬೇಕು. ಇನ್ನು ವಿವಿಧ ಇಲಾಖೆಗಳಿಗೆ ತಮ್ಮ ಇಲಾಖೆಗಳ ಜಾಗ ಎಷ್ಟಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಇಲ್ಲ. ಇದರಿಂದ ಸರ್ಕಾರಿ ಆಸ್ತಿಗಳನ್ನು ಒತ್ತುವರಿ ಮೂಲಕ ಉಳ್ಳವರ ಪಾಲಾಗುತ್ತಿದೆ. ಕೂಡಲೇ ಈ ಬಗ್ಗೆ ಪರಿಶೀಲಿಸಿ ಎಲ್ಲಾ ಇಲಾಖೆಗಳ ಭೂ ಆಸ್ತಿ ಕುರಿತು ದಾಖಲೆ ಸಂಗ್ರಹಿಸಿ ಸರ್ಕಾರದ ಆಸ್ತಿ ರಕ್ಷಿಸಬೇಕೆಂದು” ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...