ಬೀದರ್‌ | ಶರಣರ ವಚನಗಳು ಜನಮಾನಸಕ್ಕೆ ತಲುಪಲಿ : ವೀರಶೆಟ್ಟಿ ಕಾಗಾ

Date:

12ನೇ ಶತಮಾನದಲ್ಲಿ ಬಸವಾದಿ ಶರಣರ ಅನುಭಾವದ ನುಡಿಗಳು ವಚನಗಳಾಗಿ ಮಾರ್ಪಟ್ಟಿವೆ. ಇಂದಿನ ಜನಮಾನಸಕ್ಕೆ ವಚನ ಸಾಹಿತ್ಯ ಮುಟ್ಟಿಸುವ ಕಾರ್ಯವಾಗಬೇಕಾಗಿದೆ ಎಂದು ಸತ್ಸಂಗ ಧ್ಯಾನ ಮಂದಿರದ ಸಂಚಾಲಕ ವೀರಶೆಟ್ಟಿ ಕಾಗಾ ಹೇಳಿದರು.

ಬೀದರ್‌ ನಗರದ ರಾಂಪೂರೆ ಬ್ಯಾಂಕ್‌ ಕಾಲೋನಿಯಲ್ಲಿ ಪ್ರಾಧ್ಯಾಪಕ ಬಸವರಾಜ ಮೂಲಗೆ ಅವರ ನಿವಾಸದಲ್ಲಿ ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಆಯೋಜಿಸಿದ್ದ ʼಮಾಸಿಕ ಶರಣ ಸಂಗಮ ಹಾಗೂ ಸತ್ಸಂಗʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,”ನಾಡು-ನುಡಿ, ಮಾತೃ ಭಾಷೆ, ಸಂಸ್ಕೃತಿ ಪರಂಪರೆ ಉಳಿವಿಗಾಗಿ ನಾವು ಶ್ರಮಿಸಬೇಕು. ಕನ್ನಡ ಭಾಷೆಯ ಮೇಲೆ ಹೆಚ್ಚಿನ ಪ್ರೀತಿ, ಸ್ವಾಭಿಮಾನ ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ಸಂಜೀವಕುಮಾರ ಅತಿವಾಳೆ ಮಾತನಾಡಿ, “ತಂತ್ರಜ್ಞಾನದ ಜಗತ್ತಿನಲ್ಲಿ ಮನುಷ್ಯನಿಗೆ ನೆಮ್ಮದಿ, ಶಾಂತಿಗಾಗಿ ಪ್ರಾರ್ಥನೆ, ಭಜನೆ, ಧ್ಯಾನ, ಸತ್ಸಂಗದ ಅವಶ್ಯಕತೆವಿದೆ. ಬುದ್ದ ಹಾಗೂ ಬಸವಾದಿ ಶರಣರು ನಿಷ್ಠೆಯ ಬದುಕು ರೂಪಿಸಿಕೊಂಡು ಜಗತ್ತಿಗೆ ಮಹಾಬೆಳಕು ನೀಡಿದ್ದಾರೆ. ಶರಣರ, ಮಾಹಾತ್ಮರ ಜೀವನ ಮೌಲ್ಯಗಳನ್ನು ಜೀವನದಲ್ಲಿಅಳವಡಿಸಿಕೊಂಡಾಗ ಬದುಕು ಭವ್ಯವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕಿ ಪ್ರತಿಭಾ ಚಾಮಾ ಅವರು ಬುದ್ಧ, ಬಸವಣ್ಣನವರ ಕುರಿತು ಮಾತನಾಡಿ, “ನಾವು ಯಾವುದೇ ಪದವಿ, ಪ್ರಶಸ್ತಿ, ಬಿರುದುಗಳ ಹಿಂದೆ ಬೀಳದೆ ನಿಸ್ವಾರ್ಥ ಸೇವೆಗೈಯುವ ಮನೋಭಾವ ಮೈಗೂಡಿಸಿಕೊಳ್ಳಬೇಕು. ಸಾಮಾಜಿಕ ಸುಧಾರಕರು ಜಾತಿ, ಧರ್ಮ, ವರ್ಗ ತಾರತಮ್ಯ ಮಾಡಲಾರದೆ ಸಮಾಜದಲ್ಲಿ ಸಾಮರಸ್ಯ ಭಾವದೊಂದಿಗೆ ಮಾನವೀಯ ಮೌಲ್ಯಗಳನ್ನು ಬೋಧಿಸಲು ಮುಂದಾಗಬೇಕು” ಎಂದು ನುಡಿದರು.

ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷೆ ಸುನಿತಾ ದಾಡಗೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, “ಮನ ಮಾಸಿದಡೆ ಶರಣರ ಸಂಗವು ಮಾಡಬೇಕು ಎಂಬ ಶರಣರು ನುಡಿದಂತೆ ಭಕ್ತಿಯಿಂದ ಸತ್ಸಂಗ ಮಾಡಬೇಕು. ಶರಣರ ವಚನಗಳು ಬಂಗಾರದ ಖಣಿ ಇದ್ದಂತೆ, ಅವುಗಳನ್ನು ಆಚರಣೆಗೆ ತಂದಾಗ ಮನ ಶುದ್ಧಿಯಾಗುತ್ತದೆ” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ಲಿಂಗೈಕ್ಯರಾದ ಬಸವ ಸೇವಾ ಪ್ರತಿಷ್ಠಾನ ಹಾಗೂ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ತಾಯಿ ಅವರ ಜೀವನ-ಸಾಧನೆ ಕುರಿತು ಸ್ಮರಿಸಿ, ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಾಗತಿಕ ಮಟ್ಟದಲ್ಲಿ ಬಸವ ಚಿಂತನೆ ತಲುಪಿಸುವುದು ಇಂದಿನ ತುರ್ತು : ಆರ್.ಕೆ.ಹುಡುಗಿ

ಕಾರ್ಯಕ್ರಮದಲ್ಲಿ ಪ್ರಮುಖರಾದ ಅಶೋಕ ಬೂದಿಹಾಳ, ಶೈಲಜಾ ಚಳಕಾಪೂರೆ, ಹೆಮಲತಾ ವೀರಶೆಟ್ಟೆ, ಕಲ್ಯಾಣರಾವ ಚಳಕಾಪೂರೆ, ಬಸವರಾಜ ಮಳಚಾಪೂರೆ, ಧೂಳಪ್ಪಾ, ಬಂಡೆಪ್ಪಾ ಎಕಲಾರೆ, ಶೀತಲ ಅಮೃತ ಚೌವ್ಹಾಣ, ಮಲ್ಲಿಕಾರ್ಜುನ ಮಾಯಕೊಡ, ರಾಜಕುಮಾರ ವರದಾ, ಶಂಕರ, ಸ್ವಪ್ನಾ, ಶಿವಕುಮಾರ ಮಠ, ಸರಸ್ವತಿ ಚನ್ನಬಸಪ್ಪಾ ಧತ್ತರಗಿ, ಬಸವರಾಜ ಸ್ವಾಮಿ, ಅನಂತರೆಡ್ಡಿ, ಸುವರ್ಣಾ ರಾಜಶೇಖರ ಮೀಸೆ, ನಾಗನಾಥ, ಬಸವರಾಜ, ಗುರುನಾಥ, ಗೌರಮ್ಮಾ ಸೇರಿದಂತೆ ಅನೇಕರಿದ್ದರು. ಬಸವರಾಜ ಮೂಲಗೆ ಸ್ವಾಗತಿಸಿದರು, ಉಮಾಕಾಂತ ಮೀಸೆ ನಿರೂಪಿಸಿದರು, ಸುನಿತಾ ಮೂಲಗೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...