ರಾಜ್ಯದ ಸಾಹಿತಿಗಳಿಗೆ ಜೀವ ಬೆದರಿಕೆ: ಸೂಕ್ತ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Date:

ನಾಡಿನ ಅರಿವನ್ನು ವಿಸ್ತರಿಸುತ್ತಿರುವ ಹಲವಾರು ಲೇಖಕರು ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ತಮ್ಮನ್ನು ಭೇಟಿ ಮಾಡಿದ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಈ ಭರವಸೆ ನೀಡಿದರು.

ಹಿರಿಯ ಸಾಹಿತಿ ಡಾ.ಕೆ ಮರುಳಸಿದ್ದಪ್ಪ ಅವರು ಮಾತನಾಡಿ, ಹಲವಾರು ಸಾಹಿತಿಗಳಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು ಆತಂಕ, ಮುಜುಗರದಿಂದ ಬದುಕುವ ಪರಿಸ್ಥಿತಿ ಉಂಟಾಗಿದೆ ಎಂದು ಹಲವು ಪ್ರಕರಣಗಳನ್ನು ಉದಾಹರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಂ. ವೀರಭದ್ರಪ್ಪ, ಡಾ. ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಅವರುಗಳಿಗೆ ಅತಿ ಹೆಚ್ಚು ಬೆದರಿಕೆಗಳು ಬಂದಿವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದ, ವಾತಾವರಣ ಸೃಷ್ಟಿಯಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಅವರಿಗೆ ಒದಗಿದ ಗತಿ ಒದಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಬೆದರಿಕೆ ಪತ್ರಗಳ ಬಗ್ಗೆ ಒಂದು ತಂಡ ರಚಿಸಿದ್ದು, ಇನ್ನಷ್ಟು ಪರಿಣಾಮಕಾರಿಯಾಗಿರುವ, ವೃತ್ತಿಪರವಾಗಿರುವ ಖಡಕ್ ಅಧಿಕಾರಿಗಳ ಪೊಲೀಸ್ ತಂಡವನ್ನು ರಚಿಸಬೇಕು ಎಂದರು.

ಸಾರ್ವಜನಿಕ ಪ್ರತಿಭಟನೆಗಳನ್ನು ಸ್ವಾತಂತ್ರ್ಯ ಉದ್ಯಾನವನಕ್ಕೆ ಮಾತ್ರ ಸೀಮಿತಗೊಳಿಸಿದ್ದು, ಇತರೆಡೆ ಪ್ರತಿಭಟನೆ ಮಾಡಲು ಇರುವ ನಿಷೇಧವನ್ನು ತೆಗೆಯಬೇಕೆಂದು ಮನವಿ ಮಾಡಿದರು.

ಈವರೆಗೆ ಸುಮಾರು 15 ಪತ್ರಗಳು ಬಂದಿವೆ. ಈ ಸರ್ಕಾರ ಬಂದ ನಂತರ ಮೂರು ಪತ್ರಗಳು ಬಂದಿವೆ. ಒಂದೇ ರೀತಿಯ ಒಕ್ಕಣೆ ಇರುವ ಪತ್ರಗಳು ಬಂದಿವೆ ಎಂದು ಸಾಹಿತಿ ಡಾ. ವಸುಂಧರಾ ಭೂಪತಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸಂಸದ ತೇಜಸ್ವಿ ಸೂರ್ಯನನ್ನು ತರಾಟೆಗೆ ತೆಗೆದುಕೊಂಡ ರೈತ ಮುಖಂಡರು; ಕಾಲ್ಕಿತ್ತ ಸಂಸದ

ರಾಜ್ಯ ಶಿಕ್ಷಣ ನೀತಿ
ರಾಜ್ಯಕ್ಕೆ ಸೂಕ್ತವಾದ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ. ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಖಾಸಗಿ ವಲಯದಲ್ಲಿ ಹೆಚ್ವಿನ ಉದ್ಯೋಗಾವಕಾಶಗಳಿರುವುದರಿಂದ ಹೆಚ್ಚಿನವರು ಆಂಗ್ಲ ಮಾಧ್ಯಮಕ್ಕೆ ಮೊರೆ ಹೋಗುತ್ತಾರೆ. ಇದಕ್ಕೆ ಒಂದು ಮಧ್ಯಮ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಮರುಳಸಿದ್ದಪ್ಪ ತಿಳಿಸಿದರು.

ಸೌಜನ್ಯ ಪ್ರಕರಣ

ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಸಾಹಿತಿಗಳು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಮರುತನಿಖೆ ಕೈಗೊಳ್ಳುವಂತೆ ಭಾರತ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆಯಬಹುದು. ಅಡ್ವೊಕೇಟ್ ಜನರಲ್ ಅವರೊಂದಿಗೆ ಮಾತನಾಡಿದ್ದು, ಅವರ ಪೋಷಕರು ಮೇಲ್ಮನವಿ ಸಲ್ಲಿಸಬೇಕು ಎಂದು ವಿವರಿಸಿದರು.

ಹಿರಿಯ ಸಾಹಿತಿಗಳಾದ ಡಾ. ಕೆ. ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ. ವಸುಂಧರಾ ಭೂಪತಿ, ಡಾ. ವಿಜಯಮ್ಮ, ದಿನೇಶ್ ಅಮೀನ್ ಮಟ್ಟು, ರುದ್ರಪ್ಪ ಹನಗವಾಡಿ, ಎಲ್‌ ಎನ್ ಮುಕುಂದರಾಜ್ ಸೇರಿ ಹಲವು ಲೇಖಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...