ಲಿಂಗಸುಗೂರು | ಕಾರು ಪಲ್ಟಿಯಾಗಿ ಹೋಟೆಲ್‌ಗೆ ನುಗ್ಗಿ ಅಪಘಾತ; ಪ್ರಾಣಾಪಾಯದಿಂದ ಪಾರು

Date:

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೋಟೆಲ್‌ಗೆ ನುಗ್ಗಿದ ಘಟನೆ ಜಿಲ್ಲೆ ಲಿಂಗಸುಗೂರು ಪಟ್ಟಣದ ಮಾತೇ ಮಾಣಿಕೇಶ್ವರಿ ಮಠದ ಸಮೀಪ ಬುಧವಾರ ಬೆಳಿಗ್ಗೆ ನಡೆದಿದೆ.

ಬೀದರ–ಶ್ರೀರಂಗಪಟ್ಟಣ 150ಎ ರಾಷ್ಟ್ರೀಯ ಹೆದ್ದಾರಿಯ ಲಿಂಗಸುಗೂರು ಪಟ್ಟಣದ ಮಾತೇ ಮಾಣಿಕೇಶ್ವರಿ ಮಠದ ಹತ್ತಿರ ಇರುವ ವೀರೇಶ ಅವರ ಹೋಟೆಲ್‌ಗೆ ಕಾರು ನುಗ್ಗಿದ ಪರಿಣಾಮ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲವೆಂದು ತಿಳಿದುಬಂದಿದೆ.

ಗುರುಗುಂಟಾ ಕಡೆಯಿಂದ ಲಿಂಗಸಗೂರು ಪಟ್ಟಣದತ್ತ ಬರುತ್ತಿದ್ದ ಕಾರನ್ನು ಅಪ್ರಾಪ್ತರು ಚಲಾಯಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಕಾರು ಅತಿವೇಗವಾಗಿ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ವೇಗದ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿ ಹೊಡೆದು ಹೋಟೆಲ್ ಕಂಪೌಂಡ್ ಗೋಡೆಯನ್ನು ಕುಸಿತಗೊಳಿಸಿ ಒಳಗೆ ನುಗ್ಗಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜೆಡಿಎಸ್ ಮುಖಂಡರ ಮೇಲೆ ಸುಳ್ಳು ಪ್ರಕರಣ; ಆರೋಪಿಸಿ ಪ್ರತಿಭಟನೆ

ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಹೋಟೆಲ್ ಕಟ್ಟಡದ ಭಾಗಶಃ ಹಾನಿ ಸಂಭವಿಸಿದೆ.


WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...