ಲಿಂಗಸುಗೂರು | ಸರ್ಕಾರಿ ಆಸ್ಪತ್ರೆ ವೈದ್ಯರ ಮೇಲಿನ ಸುಳ್ಳು ಆರೋಪ ಖಂಡನೆ; ಮೋಹನ್ ಗೋಸ್ಲೆ

Date:

ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯ ಕರ್ತವ್ಯನಿಷ್ಠ ವೈದ್ಯರ ಮೇಲಿನ ಹಣ ಬೇಡಿಕೆಯ ಆರೋಪಗಳು ಕಪೋಲಕಲ್ಪಿತವಾಗಿದ್ದು, ಸತ್ಯಕ್ಕೆ ದೂರವಾದವು ಎಂದು ಎಸ್ ಸಿ ಎಸ್ ಟಿ ದೌರ್ಜನ್ಯ ತಡೆ ಸಮಿತಿ ಮುಖಂಡ ಮೋಹನ್ ಗೋಸ್ಲೇ ತೀವ್ರವಾಗಿ ಖಂಡಿಸಿದ್ದಾರೆ.

ಶ್ರೀಮತಿ ಉಮಾಮಹೇಶ್ವರಿ ವೈದ್ಯರು ದಲಿತ ಸಮುದಾಯಕ್ಕೆ ಸೇರಿದವರಾಗಿರುವುದೇ ಕೆಲವರ ಅಸಹ್ಯ ರಾಜಕಾರಣಕ್ಕೆ ಕಾರಣವಾಗಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವೈದ್ಯರನ್ನು ಗುರಿಯಾಗಿಸಿಕೊಂಡು ವಿನಾಕಾರಣ ಕಿರುಕುಳ ನೀಡುತ್ತಿರುವುದು ವಿಷಾದನೀಯ ಎಂದು ಹೇಳಿದರು.

ಆಸ್ಪತ್ರೆಯಲ್ಲಿ ಅತಿ ಹೆಚ್ಚು ಜನಗಣತಿ (Census) ಅಥವಾ ಹೆರಿಗೆ ಚಿಕಿತ್ಸೆಯನ್ನು ನೀಡಿದವರು ಯಾರು? ಶ್ರದ್ಧೆಯಿಂದ ಕೆಲಸ ಮಾಡಿದವರು ಯಾರು? ಎಂಬುದನ್ನು ಬಹಿರಂಗಪಡಿಸಲಿ. ಅಂಕಿ-ಅಂಶಗಳನ್ನು ಪರಿಶೀಲಿಸಿದರೆ ಸತ್ಯ ಸ್ವತಃ ಹೊರಬರುತ್ತದೆ. ಸುಳ್ಳು ದೂರುಗಳು ಮತ್ತು ನಿರಂತರ ಕಿರುಕುಳದ ಪರಿಣಾಮವಾಗಿ ಹೊಸ ವೈದ್ಯರು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ತಾಲ್ಲೂಕಿನ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಸ್ಕಿ | ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸಾವು

ಅಗತ್ಯ ದಾಖಲೆಗಳೊಂದಿಗೆ ಮುಂದಿನ ದಿನಗಳಲ್ಲಿ ಸತ್ಯವನ್ನು ಸಾರ್ವಜನಿಕವಾಗಿ ಬಯಲಿಗೆಳೆಯಲಾಗುವುದು. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ವಿಚಾರದಲ್ಲಿ ಗಮನಹರಿಸಿ, ಸತ್ಯಾಸತ್ಯತೆಯನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

b59f1ef46f1981a0bca30ef559f6d501
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...