ಲಿಂಗಸುಗೂರು ಕೃಷಿ ಉಪ ನಿರ್ದೇಶಕರ ಕಛೇರಿ ಸಿಂಧನೂರಿಗೆ ಸ್ಥಳಾಂತರ ಖಂಡಿಸಿ ರಾಜ್ಯ ರೈತ ಹಸಿರು ಸೇನೆ ವತಿಯಿಂದ ಉಪವಾಸ ಸತ್ಯಾಗ್ರಹ ಇಂದಿನಿಂದ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುತ್ರ ಗೌಡ ನಂದಿಹಾಳ ತಿಳಿಸಿದರು.
ಕಳೆದ 13 ದಿನಗಳಿಂದ ಅನಿರ್ಧಿಷ್ಟಾವಧಿ ಹೋರಾಟ ಮಾಡುತ್ತಿದ್ದರು ಅಧಿಕಾರಿಗಳು ಸ್ಪಂದಿಸದ ಕಾರಣ ಉಪವಾಸ ಸತ್ಯಾಗ್ರಹ ಇಂದಿನಿಂದ ಹಮ್ಮಿಕೊಳ್ಳಲಾಗಿದೆ. ಲಿಂಗಸೂಗೂರು ಕೃಷಿ ಉಪ ನಿರ್ದೇಶಕರ ಕಛೇರಿಯನ್ನು ಸಿಂಧನೂರಿಗೆ ಸ್ಥಳಾಂತರ ಮಾಡಿದ್ದನ್ನು ವಿರೋಧಿಸಿ ಹೋರಾಟ ನಡೆಯುತ್ತಿದ್ದರು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ತಮಗೆ ಸಂಬಂಧವಿಲ್ಲದಂತೆ ಇದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಾಂತರ ವಿರೋಧಿಸಿ ತಾಲ್ಲೂಕಿನ ನಾನಾ ಪ್ರಗತಿಪರ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡುತ್ತಿದ್ದಾರೆ. ಹೀಗೆ ನಿರ್ಲಕ್ಷ್ಯ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಕುಟುಂಬ ಸಮೇತ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಉಪವಾಸ ಸತ್ಯಾಗ್ರಹದಲ್ಲಿ ಆರೋಗ್ಯದಲ್ಲಿ ತೊಂದರೆ ಉಂಟಾದರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗುತ್ತದೆಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ದಲಿತ ಯುವಕನ ಹತ್ಯೆ ಪ್ರಕರಣ; ಆರೋಪಿತರ ಬಂಧನಕ್ಕೆ ಭೀಮ್ ಆರ್ಮಿ ಆಗ್ರಹ
ಪ್ರತಿಭಟನೆಯಲ್ಲಿ ಮುಖಂಡರಾದ ಆನಂದ, ಹನುಮನಗೌಡ,ಅಮರೇಶ ಪವಾರ,ಲಕ್ಷ್ಮಣ, ಅಮರೇಶ ಗೋಸ್ಲೆ,ಹನುಮಂತ ಕುರ್ಲಿ, ಬಸವರಾಜ ಗೋಸ್ಲೆ, ಶರೀಫ್, ಸಿದ್ದಪ್ಪ, ಸೇರಿದಂತೆ ಇತರರು ಇದ್ದರು.





