ಲಿಂಗಸೂಗೂರು | ಕೃಷಿ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ಆದೇಶ ರದ್ದುಗೊಳಿಸಲು ಪ್ರತಿಭಟನೆ

Date:

ಲಿಂಗಸೂಗೂರು ತಾಲ್ಲೂಕಿನ ಕೃಷಿ ಉಪ ನಿರ್ದೇಶಕರ ಕಚೇರಿಯನ್ನು ಸಿಂಧನೂರು ತಾಲ್ಲೂಕಿಗೆ ಸ್ಥಳಾಂತರಕ್ಕೆ ಹೊರಡಿಸಿರುವ ಆದೇಶವನ್ನು ಕೂಡಲೇ ರದ್ದುಪಡಿಸಲು ಸ್ಥಳೀಯ ಶಾಸಕ ಮಾನಪ್ಪ ವಜ್ಜಲ ಅವರು ಬೆಳಗಾವಿ ಅಧಿವೇಶನದಲ್ಲಿ ಮಾತನಾಡಬೇಕು ಎಂದು ಆಗ್ರಹಿಸಿ ಲಿಂಗಸೂಗೂರು ತಾಲೂಕು ಅಭಿವೃದ್ಧಿ ಸಮಿತಿ ವತಿಯಿಂದ ಶಾಸಕ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸ್ಥಳಾಂತರ ವಿರೋಧಿಸಿ ಸುಮಾರು ೧೫ ದಿನಗಳಿಂದ ಹೋರಾಟ ನಡೆಯುತ್ತಿದ್ದರು ಇತ್ತ ಕಡೆ ಗಮನಹರಿಸುತ್ತಿಲ್ಲ ಮತ್ತು ‎ಸ್ಥಳೀಯರಾದ ಮಾಜಿ ಸಚಿವರು ಹಾಗೂ ಮಾಜಿ ಸಂಸದ ರಾಜಾ ಅಮರೇಶ್ವರ ನಾಯಕ ಈ ಕ್ಷೇತ್ರದಿಂದಲೇ ಸಚಿವರು ಸಂಸದರಾಗಿದ್ದು, ಇವರ ಇಚ್ಚಾಶಕ್ತಿ ಕೊರತೆಯಿಂದ ಲಿಂಗಸುಗೂರಿನ ಒಂದೊಂದೇ ಕಚೇರಿಗಳು ಸ್ಥಳಾಂತರವಾಗುತ್ತಿವೆ ಎಂದು ಆಗ್ರಹಿಸಿದರು.

ಲಿಂಗಸೂಗೂರು ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸ್ಥಳೀಯರಾದ ಹಾಲಿ ವಿಧಾನ ಪರಿಷತ್ತು ಸದಸ್ಯರು ತಮ್ಮ ಸ್ವಅಭಿವೃದ್ಧಿಗೆ ಹೆಚ್ಚು ಹೊತ್ತು ನೀಡುತ್ತಿದ್ದಾರೆ. ವಿನಹ ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಗಮನಹರಿಸುತ್ತಿಲ್ಲ. ಈಗಾಗಲೇ ತಾಲೂಕಿನ ಮಂಜೂರಾತಿ ಹಂತದಲ್ಲಿದ್ದ ಪ್ರಾದೇಶಿಕ ಸಾರಿಗೆ ಕಚೇರಿ ,ಕೆಪಿಟಿಸಿಎಲ್‌ ಕಚೇರಿ ಹಾಗೂ ಜಿಲ್ಲಾ ನ್ಯಾಯಾಲಯ ಸೇರಿ ತಾಲೂಕಿನ ಒಂದೊಂದಾಗಿ ಕಚೇರಿಗಳು ಸ್ಥಳಾಂತರವಾಗುತ್ತಿವೆ. ತಾಲೂಕಿನ ಅಭಿವೃದ್ಧಿ ಶೂನ್ಯ, ತಮ್ಮಿಂದಾಗಿ ಕ್ಷೇತ್ರ ಕುಂಠಿತಗೊಂಡಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು

‎ಒಂದು ವಾರದಲ್ಲಿ ಕೃಷಿ ನಿರ್ದೇಶಕರ ಕಚೇರಿ-2 ಸ್ಥಳಾಂತರ ಆದೇಶವನ್ನು ರದ್ದುಪಡಿಸದಿದ್ದರೆ ಮುಂದಿನ ದಿನಗಳಲ್ಲಿ  ತೀವ್ರ ಹೋರಾಟ ನಡೆಸಲಾಗುವುದು ಎಂದು ಹೋರಾಟ ಸಮಿತಿ ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳ ಮೀಸಲಾತಿ ಜಾಥಾ ತಡೆ; ಪ್ರತಿಭಟನಾಕಾರರ ಬಂಧನ ಖಂಡಿಸಿ ಪ್ರತಿಭಟನೆ

ಈ ವೇಳೆ ಸಮಿತಿಯ ಮುಖಂಡರಾದ ರಮೇಶ ವೀರಾಪೂರು, ಶಿವಪುತ್ರಪ್ಪಗೌಡ, ಹಾಜಿಬಾಬು ಕಟ್ಟಿಮನಿ, ಬಾಬಾಜಾನಿ  ಇದ್ದರು.     

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...