ಲಿಂಗಾಯತರದು ಪುರಾಣ ಸಂಸ್ಕೃತಿ ಅಲ್ಲ, ವಚನ ಸಂಸ್ಕೃತಿ : ಬಸವಲಿಂಗ ಪಟ್ಟದ್ದೇವರು

Date:

ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯರ ವಿರುದ್ಧ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ʼಗೊಡ್ಡುಪುರಾಣʼ ಎಂಬ ಪದ ಬಳಸಿ ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿದ ಲೇಖನವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀವ್ರವಾಗಿ ಖಂಡಿಸಿ ಸಾಣೇಹಳ್ಳಿ ಶ್ರೀಗಳ ಬೆಂಬಲಕ್ಕೆ ನಿಂತಿದೆ.

ವಿಶ್ವೇಶ್ವರ ಭಟ್ಟರು ಸಾಣೆಹಳ್ಳಿ ಶ್ರೀಗಳ ಕುರಿತು ಹಗುರವಾಗಿ ಬರೆದಿರುವುದು ಭಟ್‌ರ ಪತ್ರಿಕಾ ಧರ್ಮಕ್ಕೂ ಮತ್ತು ವ್ಯಕ್ತಿತ್ವಕ್ಕೂ ಶೋಭೆ ತರುವಂತಹದ್ದಲ್ಲ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಬಸವಾದಿ ಶರಣರು 12ನೇ ಶತಮಾನದಲ್ಲಿ ಸ್ಥಾಪಿಸಿದ ‘ಅಂಗಾಯತ’ ಸ್ವತಂತ್ರ ಧರ್ಮ ಎಂಬುದು ಶತಸಿದ್ದ. ಅದರಲ್ಲಿ ಯಾವುದೇ ಸಂಶಯ, ಸಂದೇಹವಿಲ್ಲ. ಇದನ್ನು 12ನೇ ಶತಮಾನದ ಶರಣರಿಂದ ಇತ್ತೀಚಿನ ಸಂಶೋಧಕರು, ಸಾಹಿತಿಗಳು, ಮಠಾಧೀಶರು ಮತ್ತು ಈ ನಾಡಿನ ಬಹುದೊಡ್ಡ ಸಮಾಜದ ಅನುಯಾಯಿಗಳು ನಂಬಿಕೊಂಡು ಬಂದಿದ್ದಾರೆ. ಇದನ್ನೇ ಸಾಣೇಹಳ್ಳಿ ಪಂಡಿತಾರಾಧ್ಯರು ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಅವರ ಮಾತುಗಳು ನೂರಕ್ಕೆ ನೂರು ಸತ್ಯವಾಗಿವೆ. ಸ್ವಾಮೀಜಿಯವರು ಆಯುಷ್ಯದುದ್ದಗಲಕ್ಕೂ ಈ ವಿಷಯವನ್ನು ಪ್ರಸ್ತಾಪಿಸುತ್ತಾ ಅಂಗಾಯತರಲ್ಲಿ ಜಾಗೃತಿ ಉಂಟು ಮಾಡುವ ಕಾರ್ಯ ಮಾಡುತ್ತಾ ಬಂದಿದ್ದಾರೆ. ಶ್ರೀಗಳು ಹೇಳಿರುವ ಮಾತುಗಳು ಹೊಸದೆನಲ್ಲ. ಅವರ ಹೇಳಿಕೆಯನ್ನು ಅಂಗಾಯತ ಮಠಾಧಿಪತಿಗಳ ಒಕ್ಕೂಟ ಒಗ್ಗಟ್ಟಿನಿಂದ ಬೆಂಬಲಿಸುತ್ತದೆʼ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 17 at 7.44.35 PM
ಸಾಣೇಹಳ್ಳಿ ಪಂಡಿತಾರಾಧ್ಯ ಮಹಾಸ್ವಾಮಿ

ʼಅಂಗಾಯತರದು ಪುರಾಣ ಸಂಸ್ಕೃತಿ ಅಲ್ಲದೆ, ವಚನ ಸಂಸ್ಕೃತಿ ಆಗಿದೆ. ವಚನಗಳು ಯಾವ ಚಿಂತನೆಗಳನ್ನು ಹೇಳುತ್ತವೆಯೋ ಅದನ್ನೇ ಸಾಣೇಹಳ್ಳಿ ಶ್ರೀಗಳು ಧೈರ್ಯವಾಗಿ ಹೇಳಿದ್ದಾರೆ. ಅದನ್ನು ಅಪವ್ಯಾಖ್ಯಾನ ಮಾಡುವ ನೆಪದಲ್ಲಿ ಭಟ್‌ರು ತಮ್ಮ ಗಣೇಶಪುರಾಣವನ್ನು ಮುಂದೆವರೆಸಿದ್ದಾರೆ. 2017ರಲ್ಲಿ ʼಲಿಂಗಾಯತʼ ಸ್ವತಂತ್ರ ಧರ್ಮವೆಂಬ ಹೋರಾಟ ಇಡೀ ದೇಶದಲ್ಲಿಯೇ ಸಂಚಲನವನ್ನುಂಟು ಮಾಡಿರುವುದು ಪತ್ರಕರ್ತರಾದ ವಿಶ್ವೇಶ್ವರ ಭಟ್‌ರಿಗೆ ಗೊತ್ತಿಲ್ಲವೇ? ಕರ್ನಾಟಕ ಸರ್ಕಾರ ನ್ಯಾಯಮೂರ್ತಿ ನಾಗಮೋಹನದಾಸ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿ ಅಂಗಾಯತ ಧರ್ಮ ಸ್ವತಂತ್ರ ಧರ್ಮವೆಂಬ ವರದಿ ನೀಡಿತ್ತು. ಅದನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಕೂಡ ಮಾಡಿದೆ. ಆ ಸಂದರ್ಭದಲ್ಲಿ ಸ್ವತಂತ್ರ ಧರ್ಮ ಹೋರಾಟದ ಪರವಾಗಿ ಬರಹಗಳು ಬರೆದ ವಿಶ್ವೇಶ್ವರ ಭಟ್‌ರು ಇದೀಗ ಈ ರೀತಿ ಮಾತನಾಡುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತಹದ್ದಲ್ಲʼ ಎಂದಿದ್ದಾರೆ.

ʼಪತ್ರಕರ್ತರಾಗಿ ಒಬ್ಬ ಪ್ರತಿಷ್ಠಿತ ಮಠಾಧೀಶರ ಕುರಿತು ಈ ರೀತಿಯ ಭಾಷೆ ಬಳಸಿರುವುದು ಎಷ್ಟರ ಮಟ್ಟಿಗೆ ಸರಿ ಎಂಬುದು ಭಟ್‌ರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಲಿಂಗಾಯತ ಧರ್ಮಗುರುಗಳಿಗೆ ತಮ್ಮ ಅನುಯಾಯಿಗಳಿಗೆ ಏನು ಹೇಳಬೇಕೆಂಬ ಸ್ವಾತಂತ್ರ್ಯವೂ ಇಲ್ಲವೆ?ʼ ಎಂದು ಭಾಲ್ಕಿ ಶ್ರೀಗಳು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಕಚೇರಿಯು ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನವನ್ನು ಈ ರಾಜ್ಯ ಸಹಿಸಲ್ಲ

ʼಕೆಲವರು ಅಂಗಾಯತ ಹೋರಾಟ ನಿಂತು ಹೋಗಿದೆ ಎಂಬ ಭ್ರಮೆಯಿಂದ ಲಿಂಗಾಯತ ಸಮಾಜದ ಮೇಲೆ ಅನೇಕ ರೀತಿಯ ಆಕ್ರಮಣಗಳನ್ನು ಮಾಡುತ್ತಿದ್ದಾರೆ. ಆದರೆ, ಅವರ ಈ ಪ್ರಯತ್ನಗಳು ಎಂದಿಗೂ ಫಲಿಸುವುದಿಲ್ಲ. ಅಂಗಾಯತ ಸ್ವತಂತ್ರ ಧರ್ಮದ ಹೋರಾಟ ಎಂದಿಗೂ ನಿಲ್ಲುವುದಿಲ್ಲʼ ಎಂದು ಡಾ. ಬಸವಲಿಂಗ ಪಟ್ಟದ್ದೇವರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...