ಬೀದರ್‌ | ಹೋರಾಟದ ಚಿಂತನೆಯಿಲ್ಲದ ಸಾಹಿತ್ಯ ಉಳಿಯದು : ಗಂಧರ್ವ ಸೇನಾ

Date:

ಸಮತಾ ಸಂಸ್ಕ್ರತಿ ವೇದಿಕೆ ಸ್ಥಾಪಿಸಿ, ಅದರ ಮೂಲಕ ಬಡವರ, ನಿರ್ಗತಿಕರ ಬಾಳು ಬೆಳಗಿಸಲು ವೈಯಕ್ತಿಕ ಬದುಕು ಲೆಕ್ಕಿಸದೆ ಸದಾ ಅನ್ಯರ ಹಿತಕ್ಕಾಗಿ ಬದ್ಧತೆ ಮೈಗೂಡಿಸಿಕೊಂಡಿರುವ ಕಂಟೆಪ್ಪ ಗುಮ್ಮೆ ಅವರ ಬದುಕು ರೋಮಾಂಚಕಾರಿ ಎಂದು ಹಿರಿಯ ಪತ್ರಕರ್ತ ಗಂಧರ್ವ ಸೇನಾ ನುಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತಿ ಕಂಟೆಪ್ಪ ಗುಮ್ಮೆ ಅವರ ನಿವಾಸದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ʼ74ನೇ ಮನೆಯಂಗಳದಲ್ಲಿ ಮಾತುಕತೆʼ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಸಮಾಜದಲ್ಲಿ ಇಂದಿಗೂ ಶೋಷಣೆ ಮುಂದುವರೆದಿದೆ. ಬರಹಗಾರರು ಇಂತಹ ಸೂಕ್ಷ್ಮತೆಗಳ ಕುರಿತು ಗಮನಹರಿಸಬೇಕು. ಸಾಹಿತ್ಯದಲ್ಲಿ ಹೋರಾಟದ ಚಿಂತನೆ ಇಲ್ಲದಿದ್ದರೆ ನೂರು ಕೃತಿ ರಚಿಸಿದ ಲೇಖಕರು ಸಮಾಜದಲ್ಲಿ ಮರೆಯಾಗುತ್ತಾರೆ. ಕೇವಲ ಪ್ರೀತಿ-ಪ್ರೇಮ, ನಿಸರ್ಗ ವಿಷಯಗಳ ಸಾಹಿತ್ಯ ಅಷ್ಟೇ ಅಲ್ಲದೆ ಬದುಕು, ಹಸಿವು ಸೇರಿದಂತೆ ಸಾಮಾಜಿಕ ಸಂಕಟಗಳ ಕುರಿತು ಸಾಹಿತ್ಯ ರಚಿಸಿಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕವಿ, ಸಾಹಿತಿ ಕಂಟೆಪ್ಪ ಗುಮ್ಮೆ ಮಾತನಾಡಿ, “ನನ್ನ ಸಾಮಾಜಿಕ ಹೋರಾಟಕ್ಕೆ ಕಾರ್ಲ್ ಮಾರ್ಕ್ಸ್ ಹಾಗೂ ಲೆನಿನ್ ಚಿಂತನೆಗಳು ಪ್ರೇರಣೆಯಾಗಿವೆ.  ಕೆ.ಆರ್.ದುರ್ಗಾದಾಸ, ಕಾಶಿನಾಥ ಅಂಬುಲಗಿ, ಚನ್ನಣ್ಣ ವಾಲಿಕಾರ, ಸೌದತ್ತಿ ಮಠ, ಮ.ಗು.ಬಿರಾದಾರ, ಜಿ ಎಸ್ ಶಿವರುದ್ರಪ್ಪ ಸೇರಿದಂತೆ ಅನೇಕ ಲೇಖಕರು, ಸಾಹಿತಿಗಳ ಮಾರ್ಗದರ್ಶನದಿಂದ ಸಾಹಿತ್ಯ ಸೃಷ್ಟಿಗೆ ಕಾರಣವಾಯಿತು” ಎಂದು ಹೇಳಿದರು.

“ಕವಿ ತನ್ನ ಬದುಕಿನ ಅನುಭವ ಸಾರವನ್ನು ಸಾಹಿತ್ಯದಲ್ಲಿ ಹಿಡಿದಿಡಬೇಕು. ನನ್ನ ʼಒಡೆದ ಬಳೆʼ ಕಿರು ಕಾದಂಬರಿ, ʼಬೆಂಕಿ ಕಾರಿತು ಕೆಂಡʼ, ʼಸತ್ತಾಗ ಹೆಗಲು ಕೊಡುʼ, ʼಗೊಡ್ಡು ಎಮ್ಮೆʼ ಸೇರಿದಂತೆ ಅನೇಕ ಕವಿತೆಗಳು ರಚನೆಯಾದರೂ ಆರ್ಥಿಕ ಮುಗ್ಗಟ್ಟಿನಿಂದ ಕೃತಿಗಳು ಮುದ್ರಿಸಲು ಸಾಧ್ಯವಾಗಿಲ್ಲ. ಮೂಲಭೂತ ಸೌಕರ್ಯಗಳಿಂದ ವಂಚಿತವಾದ ನನ್ನೂರಿಗೆ ಹೋರಾಟದ ಪ್ರತಿಫಲವಾಗಿ ರಸ್ತೆ , ಶಾಲೆ ಹಾಗೂ ಬೀದಿ ದೀಪ ವ್ಯವಸ್ಥೆ ಕಲ್ಪಿಸಿದರು” ಎಂದು ಬದುಕಿನ ಘಟನೆಗಳನ್ನು ಮೆಲಕು ಹಾಕಿದರು.

ಚುಟುಕು ಸಾಹಿತಿ ವೀರಶೆಟ್ಟಿ ಚೌಕನಪಳ್ಳಿ ಹಾಗೂ ಸಾಹಿತಿ ಪ್ರಭು ಮಾಲೆ ಸಂವಾದ ನಡೆಸಿಕೊಟ್ಟರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಆಶಯ ನುಡಿ ನುಡಿದರು.

ಇದೇ ಸಂದರ್ಭದಲ್ಲಿ ಪರಪ್ಪನ ಅಗ್ರಹಾರದಲ್ಲಿ ಪೊಲೀಸ್ ಸಿಬ್ಬಂದಿಯಾಗಿರುವ ಅಮಲಾಪುರ ಗ್ರಾಮದ ಮಮಿತಾ ಅವರು ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ ನಲ್ಲಿ ಚಿನ್ನದ ಪದಕ ಪಡೆದ ಪ್ರಯುಕ್ತ ಜಿಲ್ಲಾ ಕಸಾಪದಿಂದ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೈಕ್‌ಗೆ ಸಾರಿಗೆ ಬಸ್ ಢಿಕ್ಕಿ; ಒಂದೇ ಊರಿನ ಮೂವರು ಯುವಕರು ದುರ್ಮರಣ

ಕಾರ್ಯಕ್ರಮದಲ್ಲಿ ಬೀದರ್‌ ತಾಲೂಕು ಕಸಾಪ ಅಧ್ಯಕ್ಷರಾದ ಎಂ.ಎಸ್.ಮನೋಹರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಗನಾಥ ಕಮಲಾಪುರೆ ನಿರೂಪಿಸಿದರು. ಶಿವಶಂಕರ ಟೋಕರೆ ಸ್ವಾಗತಿಸಿದರು. ಬಾಬು ಮಡಕಿ ವಂದಿಸಿದರು. ಕಸಾಪದ ಪ್ರಮುಖರಾದ ಶಿವಕುಮಾರ ಕಟ್ಟೆ, ದಾನಿ ಬಾಬುರಾವ, ಶಂಭುಲಿಂಗ ವಾಲ್ದೊಡ್ಡಿ, ಡಾ.ಸಂಜೀವಕುಮಾರ ಅತಿವಾಳೆ, ಮಾರುತಿ ಕಂಟೆ, ನರಸಿಂಗ ಸಾಮ್ರಾಟ್, ಮಹಾದೇವ ಕಾಂಬಳೆ, ಚಂದ್ರಕಾಂತ ಹೊಸಮನಿ, ರಮೇಶ ಬಾಬು, ಅಶೋಕ ಸಂಗಮ, ಸಿಮ್ಲಾಬಾಯಿ ಶಾಸ್ತ್ರಿ, ಕೀರ್ತಿಕುಮಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...