ಬೀದರ್‌ | ಸಾಹಿತಿ, ಬರಹಗಾರರು ಓದುಗರಿಗೆ ನಿಷ್ಠುರವಾಗಿರಬೇಕು : ದಿನೇಶ ಅಮೀನ್‌ ಮಟ್ಟು

Date:

ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಸಾಹಿತಿ, ಬರಹಗಾರರಲ್ಲಿ ಮಾತ್ರ ಅಲ್ಲದೆ ಪ್ರತಿಯೊಬ್ಬರಲ್ಲೂ ಸಾಮಾಜಿಕ ಜವಾಬ್ದಾರಿ ಇರಬೇಕಾಗುತ್ತದೆ ಎಂದು ಹಿರಿಯ ಪತ್ರಕರ್ತ ದಿನೇಶ ಅಮೀನ್‌ ಮಟ್ಟು ಹೇಳಿದರು.

ಬೀದರ್ ಜಿಲ್ಲಾ‌ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಗರದ ಕನ್ನಡ ಭವನದಲ್ಲಿ ಬುಧವಾರ ಆಯೋಜಿಸಿದ್ದ ʼಸಾಹಿತಿಗಳು ಮತ್ತು ಸಾಮಾಜಿಕ ಜವಾಬ್ದಾರಿʼ ವಿಶೇಷ ಉಪನ್ಯಾಸ ಉದ್ಘಾಟಿಸಿ ಮಾತನಾಡಿ, ʼಸಾಮಾಜಿಕ ಜವಾಬ್ದಾರಿ ರೈತ, ಕ್ರೀಡೆ, ಸಂಗೀತ, ವಿದ್ಯಾರ್ಥಿ, ಶಿಕ್ಷಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಸಾಮಾಜಿಕ ಹೊಣೆಗಾರಿಕೆ ಇರಬೇಕುʼ ಎಂದು ಹೇಳಿದರು.

ಸಾಹಿತಿಗಳು ಬರಹ, ಕಥೆ, ಕಾದಂಬರಿ, ಉಪನ್ಯಾಸ ಸೇರಿದಂತೆ ವಿವಿಧ ಪ್ರಕಾರದ ಸೃಜನಶೀಲ ಸಾಹಿತ್ಯದಿಂದ ಸಮಾಜವನ್ನು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಬರಹಗಾರರು ಯಾವಾಗಲೂ ಸತ್ಯವನ್ನು ಪ್ರತಿಪಾದಿಸಬೇಕು, ಸುಳ್ಳು ಬರೆಯುವುದು ಆತ್ಮವಂಚನೆಯಾಗುತ್ತದೆ. ಇತ್ತೀಚಿನ ಬಹುತೇಕ ಸಾಹಿತಿಗಳ ಬದುಕು ಮತ್ತು ಬರಹ ಭಿನ್ನವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಎಲ್ಲ ಸರ್ವಾಧಿಕಾರಿಗಳ, ಬಲಪಂಥೀಯರ ಮೊದಲ ಟಾರ್ಗೆಟ್ ಚಿಂತಕರು, ಸಾಹಿತಿಗಳಾಗಿದ್ದಾರೆ. ಸತ್ಯ ಹೇಳಲು ಪ್ರಯತ್ನಿಸುವವರ ಬಾಯಿ ಮುಚ್ಚಿಸುವ ಕೆಲಸಗಳು ನಡೆಯುತ್ತಿದೆ. ಸಾಮಾಜಿಕ ಜವಾಬ್ದಾರಿಯಿಂದ ಸತ್ಯ ಹೇಳುವರನ್ನು ವರ್ತಮಾನ ಬಹಳ ಕ್ರೂರವಾಗಿ ನಡೆದುಕೊಳ್ಳುತ್ತಿದೆ. ಆದರೂ, ನಮ್ಮ ಇತಿಮಿತಿಯಲ್ಲಿ ಸಮಾಜವನ್ನು ಎಚ್ಚರಗೊಳಿಸುವ ಕೆಲಸ ಮುಂದುವರೆಸಬೇಕುʼ ಎಂದು ಸಲಹೆ ನೀಡಿದರು.

ʼಬರಹಗಾರರು ಸಾಹಿತಿಗಳು ಓದುಗರಿಗೆ ನಿಷ್ಠುರವಾಗಿರಬೇಕು. ರಾಜಕಾರಣಿಗಳು ಕೂಡ ಮತದಾರರಿಗೆ ನಿಷ್ಠುರವಾಗಿರಬೇಕು. ಆದರೆ, ರಾಜಕಾರಣಿಗಳು ಜನರನ್ನು ಮೂಢರಾಗಿಸಲು ಬಯಸುತ್ತಾರೆ. ಬುದ್ಧ, ಬಸವಣ್ಣ, ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್‌ ಅವರ ಕಾಲದಲ್ಲಿ ಸಾಕ್ಷರತೆ ಪ್ರಮಾಣ ತೀರಾ ಕಡಿಮೆ ಇತ್ತು. ಆದರೂ, ಅವರು ದೊಡ್ಡ ಮಟ್ಟದಲ್ಲಿ ಸಾಮಾಜಿಕ ಜಾಗೃತಿ ಮೂಡಿಸಿದ್ದರು. ಇಂದು ಜಾಗೃತಿ ಸಾಧನಗಳ ಕೊರತೆ ಇಲ್ಲ. ಆದರೆ, ಇಚ್ಚಾಶಕ್ತಿ ಕೊರತೆಯಿದೆʼ ಎಂದು ತಿಳಿಸಿದರು.

WhatsApp Image 2024 10 10 at 6.31.23 PM 1

ಗುಲಬರ್ಗಾ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಸಿದ್ದಪ್ಪ ಮೂಲಗೆ ಪ್ರಾಸ್ತಾವಿಕವಾಗಿ ಮಾತನಾಡಿ, ʼಬೀದರ್ ಕ್ರಾಂತಿ ಮತ್ತು ಕಾಯಕ ಚಳುವಳಿಯ ನೆಲ. ಇಲ್ಲಿ ವೈಚಾರಿಕತೆ ಪ್ರಜ್ಞೆಯ ಜನರಿದ್ದು ನೈತಿಕ ಮೌಲ್ಯಗಳಿವೆ. ಆದರೆ, ಶರಣರ ಹತ್ಯಾಕಾಂಡ ನಡೆಸಿದವರೊಂದಿಗೆ ಸಖ್ಯ ಬೆಳೆಸುತ್ತಿರುವುದರಿಂದ ವೈಚಾರಿಕ ನಿಲುವಿಗೆ ಪೆಟ್ಟು ಬೀಳುತ್ತಿದೆ. ಅನ್ಯ ಜಿಲ್ಲೆಯ ಲೇಖಕರ ಸಾಹಿತ್ಯಕ್ಕೆ ಹೋಲಿಸಿದರೆ ನಮ್ಮ ಭಾಗದಲ್ಲಿ ಗಟ್ಟಿ ಸಾಹಿತ್ಯದ ಕೊರತೆ ಎದ್ದು ಕಾಣುತ್ತಿದೆʼ ಎಂದು ಹೇಳಿದರು.

ಕರ್ನಾಟಕ ಪಿಯು ಕಾಲೇಜಿನ ಪ್ರಾಚಾರ್ಯ ಡಾ.ಬಸವರಾಜ ಬಲ್ಲೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಪ್ರಭುತ್ವದಲ್ಲಿ ಸಾಹಿತಿಗಳು ಮುಕ್ತವಾಗಿ ಬರೆಯುವ ಮೂಲಕ ಜನರ ದನಿಯಾಗಬೇಕು. ಇಂದು ಓಲೈಕೆ ಸಾಹಿತ್ಯ ಎದ್ದು ಕಾಣುತ್ತಿದೆ. ಕೆಟ್ಟ ಸಾಹಿತ್ಯದಿಂದ ಯಾರಿಗೂ ಉಪಯೋಗವಿಲ್ಲ. ಅದರಿಂದ ಸಂಪನ್ಮೂಲ ಹಾಳಾಗುತ್ತದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

ಕಾರ್ಯಕ್ರಮದಲ್ಲಿ ಕಸಾಪ ಪದಾಧಿಕಾರಿಗಳು ಸೇರಿದಂತೆ ಸಾಮಾಜಿಕ ಚಿಂತಕರು, ಸಾಹಿತಿಗಳು, ಸಾಹಿತ್ಯಾಸ್ತಕರು ಭಾಗವಹಿಸಿದರು. ಜಿಲ್ಲಾ ಕಸಾಪ ಕೋಶಾಧ್ಯಕ್ಷ ಶಿವಶಂಕರ ಟೋಕರೆ ಸ್ವಾಗತಿಸಿದರು, ಗೌರವ ಕಾರ್ಯದರ್ಶಿ ಪ್ರೊ. ಶಿವಕುಮಾರ ಕಟ್ಟೆ ನಿರೂಪಿಸಿದರು. ಕಸಾಪ ಗೌರವ ಕಾರ್ಯದರ್ಶಿ ಟಿ.ಎಮ್. ಮಚ್ಚೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...