ತಲಪಾಡಿ ಟೋಲ್ ಗೇಟ್‌ನಲ್ಲಿ ಸ್ಥಳೀಯ ಪ್ರಯಾಣಿಕರಿಗೆ ಮತ್ತೆ ಕಿರುಕುಳ: ಪ್ರಶ್ನಿಸಿದರೆ ಗೂಂಡಾ ಪಡೆಗಳ ಅಟ್ಟಹಾಸ

Date:

ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಟೋಲ್ ಗೇಟ್‌ನಲ್ಲಿ ಸ್ಥಳೀಯ ಪ್ರಯಾಣಿಕರಿಗೆ ಮತ್ತೆ ಕಿರುಕುಳ ಆರಂಭಗೊಂಡಿದ್ದು, ಈ ಬಗ್ಗೆ ಪ್ರಯಾಣಿಕರು ಪ್ರಶ್ನಿಸಿದರೆ ಗೂಂಡಾಗಿರಿ ಪ್ರದರ್ಶಿಸುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಮೊದಲು 5 ಕಿಲೋ ಮೀಟರ್ ವ್ಯಾಪ್ತಿಯ ಗಡಿ ಪ್ರದೇಶದ ಜನತೆಗೆ ಟೋಲ್ ಗೇಟ್‌ನಲ್ಲಿ ಉಚಿತ ಪ್ರಯಾಣವನ್ನು ಅನುಮತಿಸಲಾಗಿತ್ತು. ಆದರೆ ಬಳಿಕ ಕೇರಳದವರನ್ನು ಕಡೆಗಣಿಸಿ ಕರ್ನಾಟಕದ ತಲಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವವರಿಗೆ ಮಾತ್ರ ಉಚಿತ ಸೌಕರ್ಯವನ್ನು ನೀಡಲಾಗಿತ್ತು. ಈಗಲೂ ಅದೇ ಮುಂದುವರಿಯುತ್ತಿದೆ.

ಕೇರಳದ ಗಡಿ ಭಾಗದವರಿಗೆ ಒಂದು ನ್ಯಾಯ ಅದೇ ರೀತಿ ಕರ್ನಾಟಕದ ಗಡಿಯಲ್ಲಿರುವವರಿಗೆ ಇನ್ನೊಂದು ನ್ಯಾಯ. ಇದನ್ನು ಪ್ರಶ್ನಿಸುವಾಗಲೂ ಟೋಲ್ ಗೇಟ್ ಗೂಂಡಾ ಪಡೆಯನ್ನು ಮುಂದಿಟ್ಟು ಅಧಿಕಾರಿಗಳು ಗಡಿಭಾಗದ ಮಂಜೇಶ್ವರದವರಿಗೆ ಫಾಸ್ಟ್ ಟ್ಯಾಗ್ ಮಾಡಬೇಕು, ಇಲ್ಲವಾದರೆ ಲೋಕಲ್ ಪಾಸ್ ಮಾಡಬೇಕೆಂದು ಕಡ್ಡಾಯಗೊಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

₹340 ಪಾವತಿಸಿ ಲೋಕಲ್ ಪಾಸ್ ಮಾಡಿಸಿಕೊಂಡವರೂ ಕೂಡಾ ಟೋಲ್ ಗೇಟ್‌ನಲ್ಲಿ ಹಣ ಪಾವತಿಸಬೇಕಾದ ದುಃಸ್ಥಿತಿ ಎದುರಾಗಿದೆ. ಕೆಲ ದಿನಗಳ ಹಿಂದೆ ಈ ವಿಷಯವನ್ನು ಪೊಲೀಸ್ ಇಲಾಖೆಯ ಗಮನಕ್ಕೆ ತರಲು ಮುಂದಾಗಿ ವಾಹನಗಳನ್ನು ತಾಸುಗಟ್ಟಲೆ ಟೋಲ್ ಗೇಟ್‌ನಲ್ಲೇ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ಬಳಿಕ ಎಚ್ಚೆತ್ತ ಅಧಿಕಾರಿಗಳು ಇನ್ನು ಮುಂದಕ್ಕೆ ಈ ರೀತಿ ಸಂಭವಿಸುವುದಿಲ್ಲವೆಂದು ವಾಗ್ದಾನ ನೀಡಿದಾಗ ಸ್ಥಳೀಯರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿದ್ದರು. ಈಗ ಪುನಃ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಡೆಂಘೀ ನಿಯಂತ್ರಣಕ್ಕೆ ಜನಸಾಮಾನ್ಯರೂ ಸಹಕರಿಸಬೇಕು: ಸಚಿವ ಶರಣಪ್ರಕಾಶ್ ಪಾಟೀಲ್

“ಹಣ ಪಾವತಿಸಿ ಲೋಕಲ್ ಪಾಸ್ ಪಡೆದವರಿಂದಲೂ ಫಾಸ್ಟ್ ಟ್ಯಾಗ್ ಖಾತೆಯಿಂದ ಹಣ ಕಟ್ ಆಗುತ್ತಿದೆ. ಊರಿನ ಜನತೆಗೆ ಶಾಪವಾಗಿರುವ ಈ ಟೋಲ್ ಗೇಟ್‌ನಲ್ಲಿ ಪ್ರಯಾಣಿಕರಿಗೆ ನಿರಂತರ ಕಿರುಕುಳ ನೀಡುತ್ತಿರುವ ಇಲ್ಲಿಯ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಸ್ಥಳೀಯರು ಹಾಗೂ ಪ್ರಯಾಣಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...